ಪ್ರವೀಣ್‌ ನೆಟ್ಟಾರು ಶವಯಾತ್ರೆ | ಪುತ್ತೂರಿನಿಂದ ಹೊರಟ ಶವಯಾತ್ರೆ | ಹಿಂದೂ ಕಾರ್ಯಕರ್ತರು ಭಾಗಿ | ಸುಳ್ಯದಲ್ಲಿ ಚಕಮಕಿ | ಎಲ್ಲೆಡೆ ಬಂದ್‌ |

July 27, 2022
11:13 AM

ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಖಂಡಿಸಿ  ಸುಳ್ಯ, ಪುತ್ತೂರು, ಕಡಬದಲ್ಲಿ  ಸ್ವಯಂಪ್ರೇರಿತ ಬಂದ್‌ ನಡೆದಿದೆ. ಸುಳ್ಯದಲ್ಲಿ ಘಟನೆ ಖಂಡಿಸಿ ನಡೆದ ಪ್ರತಿಭಟನೆ ಹಾಗೂ ಟಯರ್‌ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ವೇಳೆ ಪೊಲೀಸರು ಹಾಗೂ ಹಿಂದೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಪುತ್ತೂರಿನಿಂದ ಬೆಳಗ್ಗೆ ಶವಯಾತ್ರೆ ಆರಂಭವಾಗಿದ್ದು ಪುತ್ತೂರಿನಲ್ಲಿ ಬೃಹತ್‌ ಯಾತ್ರೆ ನಡೆದಿದೆ. ಸಾವಿರಾರು ಜನರು ಭಾಗಿಯಾಗಿದ್ದಾರೆ.

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ದ.ಕ ಜಿಲ್ಲೆ ಉದ್ವಿಗ್ನಗೊಂಡಿದ್ದು, ಹಲವು ಕಡೆ ಬಿಗುವಿನ ವಾತಾವರಣ ಕಂಡುಬಂದಿದೆ. ಬೆಳಗ್ಗೆ ಪುತ್ತೂರಿನಿಂದ ಶವಯಾತ್ರೆ ಆರಂಭವಾಗಿದ್ದು ಪುಷ್ಪಾಲಂಕೃತವಾದ ಅಂಬುಲೆನ್ಸ್‌ ನಲ್ಲಿ ಮೆರವಣಿಗೆ ಆರಂಭವಾಗಿದೆ. ದರ್ಭೆ ಬಳಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು, ನಂತರ ಸವಣೂರು ಮಾರ್ಗವಾಗಿ ಬೆಳ್ಳಾರೆಗೆ ಶವಯಾತ್ರೆ ಹೊರಟಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ವಾಹನದ ಜೊತೆ ಸಾಗಿದ್ದಾರೆ.

ಸುಳ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ. ಕಡಬ, ಸುಬ್ರಹ್ಮಣ್ಯ, ಪಂಜ, ಗುತ್ತಿಗಾರು, ಸಂಪಾಜೆ, ಬೆಳ್ಳಾರೆ ಸೇರಿದಂತೆ ಎಲ್ಲೆಡೆಯೂ ಅಂಗಡಿಗಳು ಬಂದ್‌ ನಡೆಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror