Advertisement
ಸುದ್ದಿಗಳು

ಪ್ರವೀಣ್‌ ನೆಟ್ಟಾರು ಶವಯಾತ್ರೆ | ಪುತ್ತೂರಿನಿಂದ ಹೊರಟ ಶವಯಾತ್ರೆ | ಹಿಂದೂ ಕಾರ್ಯಕರ್ತರು ಭಾಗಿ | ಸುಳ್ಯದಲ್ಲಿ ಚಕಮಕಿ | ಎಲ್ಲೆಡೆ ಬಂದ್‌ |

Share

ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಖಂಡಿಸಿ  ಸುಳ್ಯ, ಪುತ್ತೂರು, ಕಡಬದಲ್ಲಿ  ಸ್ವಯಂಪ್ರೇರಿತ ಬಂದ್‌ ನಡೆದಿದೆ. ಸುಳ್ಯದಲ್ಲಿ ಘಟನೆ ಖಂಡಿಸಿ ನಡೆದ ಪ್ರತಿಭಟನೆ ಹಾಗೂ ಟಯರ್‌ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ವೇಳೆ ಪೊಲೀಸರು ಹಾಗೂ ಹಿಂದೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಪುತ್ತೂರಿನಿಂದ ಬೆಳಗ್ಗೆ ಶವಯಾತ್ರೆ ಆರಂಭವಾಗಿದ್ದು ಪುತ್ತೂರಿನಲ್ಲಿ ಬೃಹತ್‌ ಯಾತ್ರೆ ನಡೆದಿದೆ. ಸಾವಿರಾರು ಜನರು ಭಾಗಿಯಾಗಿದ್ದಾರೆ.

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ದ.ಕ ಜಿಲ್ಲೆ ಉದ್ವಿಗ್ನಗೊಂಡಿದ್ದು, ಹಲವು ಕಡೆ ಬಿಗುವಿನ ವಾತಾವರಣ ಕಂಡುಬಂದಿದೆ. ಬೆಳಗ್ಗೆ ಪುತ್ತೂರಿನಿಂದ ಶವಯಾತ್ರೆ ಆರಂಭವಾಗಿದ್ದು ಪುಷ್ಪಾಲಂಕೃತವಾದ ಅಂಬುಲೆನ್ಸ್‌ ನಲ್ಲಿ ಮೆರವಣಿಗೆ ಆರಂಭವಾಗಿದೆ. ದರ್ಭೆ ಬಳಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು, ನಂತರ ಸವಣೂರು ಮಾರ್ಗವಾಗಿ ಬೆಳ್ಳಾರೆಗೆ ಶವಯಾತ್ರೆ ಹೊರಟಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ವಾಹನದ ಜೊತೆ ಸಾಗಿದ್ದಾರೆ.

ಸುಳ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ. ಕಡಬ, ಸುಬ್ರಹ್ಮಣ್ಯ, ಪಂಜ, ಗುತ್ತಿಗಾರು, ಸಂಪಾಜೆ, ಬೆಳ್ಳಾರೆ ಸೇರಿದಂತೆ ಎಲ್ಲೆಡೆಯೂ ಅಂಗಡಿಗಳು ಬಂದ್‌ ನಡೆಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

5 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

5 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago