ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಖಂಡಿಸಿ ಸುಳ್ಯ, ಪುತ್ತೂರು, ಕಡಬದಲ್ಲಿ ಸ್ವಯಂಪ್ರೇರಿತ ಬಂದ್ ನಡೆದಿದೆ. ಸುಳ್ಯದಲ್ಲಿ ಘಟನೆ ಖಂಡಿಸಿ ನಡೆದ ಪ್ರತಿಭಟನೆ ಹಾಗೂ ಟಯರ್ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ವೇಳೆ ಪೊಲೀಸರು ಹಾಗೂ ಹಿಂದೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಪುತ್ತೂರಿನಿಂದ ಬೆಳಗ್ಗೆ ಶವಯಾತ್ರೆ ಆರಂಭವಾಗಿದ್ದು ಪುತ್ತೂರಿನಲ್ಲಿ ಬೃಹತ್ ಯಾತ್ರೆ ನಡೆದಿದೆ. ಸಾವಿರಾರು ಜನರು ಭಾಗಿಯಾಗಿದ್ದಾರೆ.
ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ದ.ಕ ಜಿಲ್ಲೆ ಉದ್ವಿಗ್ನಗೊಂಡಿದ್ದು, ಹಲವು ಕಡೆ ಬಿಗುವಿನ ವಾತಾವರಣ ಕಂಡುಬಂದಿದೆ. ಬೆಳಗ್ಗೆ ಪುತ್ತೂರಿನಿಂದ ಶವಯಾತ್ರೆ ಆರಂಭವಾಗಿದ್ದು ಪುಷ್ಪಾಲಂಕೃತವಾದ ಅಂಬುಲೆನ್ಸ್ ನಲ್ಲಿ ಮೆರವಣಿಗೆ ಆರಂಭವಾಗಿದೆ. ದರ್ಭೆ ಬಳಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು, ನಂತರ ಸವಣೂರು ಮಾರ್ಗವಾಗಿ ಬೆಳ್ಳಾರೆಗೆ ಶವಯಾತ್ರೆ ಹೊರಟಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ವಾಹನದ ಜೊತೆ ಸಾಗಿದ್ದಾರೆ.
ಸುಳ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ. ಕಡಬ, ಸುಬ್ರಹ್ಮಣ್ಯ, ಪಂಜ, ಗುತ್ತಿಗಾರು, ಸಂಪಾಜೆ, ಬೆಳ್ಳಾರೆ ಸೇರಿದಂತೆ ಎಲ್ಲೆಡೆಯೂ ಅಂಗಡಿಗಳು ಬಂದ್ ನಡೆಸಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…