ಬೆಳ್ಳಾರೆ | ಪ್ರವೀಣ್‌ ಹತ್ಯೆ ಪ್ರಕರಣ | ಹಿಂದೂ ಕಾರ್ಯಕರ್ತರಿಂದ ಹೆಚ್ಚಿದ ಆಕ್ರೋಶ | ನಾಯಕರಿಗೆ ದಿಗ್ಭಂಧನ | ನ್ಯಾಯಕ್ಕಾಗಿ ಒತ್ತಾಯ |

July 27, 2022
2:26 PM

ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪಾರ್ಥಿವ ಶರೀರ ಬೆಳ್ಳಾರೆ ತಲುಪಿದೆ. ಈ ಸಂದರ್ಭ ಹಿಂದೂ ಕಾರ್ಯಕರ್ತರು ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಂತಿಮ ದರ್ಶನಕ್ಕೆ ಆಗಮಿಸಿದ ಬಿಜೆಪಿ ನಾಯಕರು ಹಾಗೂ ಆರ್‌ ಎಸ್‌ ಎಸ್‌ ಮುಖಂಡರ ಕಾರನ್ನೂ ಕಾರ್ಯಕರ್ತರು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಗೆ ಧಿಕ್ಕಾರ ಕೂಗಿದರು. ನಾಯಕರ ಕಾರನ್ನು ತಡೆದು ಗೋಬ್ಯಾಕ್‌ ಎಂದು ಕಾರನ್ನೇ ತಳ್ಳಿದರು.

ನಿನ್ನೆ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಪಾರ್ಥಿವ ಶರೀರ ಬೆಳ್ಳಾರೆ ತಲುಪುತ್ತಿದ್ದಂತೆ ಹಿಂದೂ ಪರ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿತು. ನನ್ನದೇ ಸರ್ಕಾರ ಇದ್ದರೂ ಕಾರ್ಯಕರ್ತರ ಹತ್ಯೆ ನಡೆಯುತ್ತಿದ್ದರೂ ನಾಯಕರು ಸುಮ್ಮನೆ ಕುಳಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಸಚಿವ ಅಂಗಾರ, ಸುನಿಲ್‌ ಕುಮಾರ್‌ ಕಟೀಲು, ಸಂಜೀವ ಮಠಂದೂರು, ಹರೀಶ್‌ ಪೂಂಜಾ ಮೊದಲಾದವರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕರ್ತರೊಬ್ಬರು ಹರೀಶ್‌ ಪೂಂಜಾ ಅವರಲ್ಲಿ ದಕ ಜಿಲ್ಲೆಯಲ್ಲಿ ಸಮರ್ಥ ನಾಯಕರಲ್ಲ ನೀವೇ ಇದಕ್ಕೆ ಮುಂದಾಳುತ್ವ ವಹಿಸಿ ಎಂದೂ ಹೇಳಿದರು.

ಇದೇ ವೇಳೆ ಪ್ರವೀಣ್ ನೆಟ್ಟಾರು ಅಂತಿಮ ದರ್ಶನಕ್ಕೆ ಬಂದ ಆರ್ ಎಸ್ ಎಸ್ ಮುಖಂಡ ಪ್ರಭಾಕರ ಭಟ್ ಅವರ ಕಾರಿಗೆ ಹಿಂದೂ ಕಾರ್ಯಕರ್ತರು ತಡೆ ಒಡ್ಡಿದರು. ಇದೆಲ್ಲಾ ಡೋಂಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಶವಯಾತ್ರೆ ಆಗಮಿಸುತ್ತಿದ್ದ ವೇಳೆ  ನಿಂತಿಕಲ್  ಮೆರವಣಿಗೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಯುವಕನೊಬ್ಬನ ಬೈಕ್ ಪುಡಿಗಟ್ಟಲಾಗಿದೆ. ಬೆಳ್ಳಾರೆಯಲ್ಲಿ ಆಕ್ರೋಶ ಮಡುಗಟ್ಟಿದೆ. ಉಳಿದಂತೆ ಎಲ್ಲೆಡೆ ಶಾಂತಿಯುತವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror