Advertisement
ಸುದ್ದಿಗಳು

ಬೆಳ್ಳಾರೆ | ಪ್ರವೀಣ್‌ ಹತ್ಯೆ ಪ್ರಕರಣ | ಹಿಂದೂ ಕಾರ್ಯಕರ್ತರಿಂದ ಹೆಚ್ಚಿದ ಆಕ್ರೋಶ | ನಾಯಕರಿಗೆ ದಿಗ್ಭಂಧನ | ನ್ಯಾಯಕ್ಕಾಗಿ ಒತ್ತಾಯ |

Share

ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪಾರ್ಥಿವ ಶರೀರ ಬೆಳ್ಳಾರೆ ತಲುಪಿದೆ. ಈ ಸಂದರ್ಭ ಹಿಂದೂ ಕಾರ್ಯಕರ್ತರು ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಂತಿಮ ದರ್ಶನಕ್ಕೆ ಆಗಮಿಸಿದ ಬಿಜೆಪಿ ನಾಯಕರು ಹಾಗೂ ಆರ್‌ ಎಸ್‌ ಎಸ್‌ ಮುಖಂಡರ ಕಾರನ್ನೂ ಕಾರ್ಯಕರ್ತರು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಗೆ ಧಿಕ್ಕಾರ ಕೂಗಿದರು. ನಾಯಕರ ಕಾರನ್ನು ತಡೆದು ಗೋಬ್ಯಾಕ್‌ ಎಂದು ಕಾರನ್ನೇ ತಳ್ಳಿದರು.

ನಿನ್ನೆ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಪಾರ್ಥಿವ ಶರೀರ ಬೆಳ್ಳಾರೆ ತಲುಪುತ್ತಿದ್ದಂತೆ ಹಿಂದೂ ಪರ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿತು. ನನ್ನದೇ ಸರ್ಕಾರ ಇದ್ದರೂ ಕಾರ್ಯಕರ್ತರ ಹತ್ಯೆ ನಡೆಯುತ್ತಿದ್ದರೂ ನಾಯಕರು ಸುಮ್ಮನೆ ಕುಳಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಸಚಿವ ಅಂಗಾರ, ಸುನಿಲ್‌ ಕುಮಾರ್‌ ಕಟೀಲು, ಸಂಜೀವ ಮಠಂದೂರು, ಹರೀಶ್‌ ಪೂಂಜಾ ಮೊದಲಾದವರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕರ್ತರೊಬ್ಬರು ಹರೀಶ್‌ ಪೂಂಜಾ ಅವರಲ್ಲಿ ದಕ ಜಿಲ್ಲೆಯಲ್ಲಿ ಸಮರ್ಥ ನಾಯಕರಲ್ಲ ನೀವೇ ಇದಕ್ಕೆ ಮುಂದಾಳುತ್ವ ವಹಿಸಿ ಎಂದೂ ಹೇಳಿದರು.

ಇದೇ ವೇಳೆ ಪ್ರವೀಣ್ ನೆಟ್ಟಾರು ಅಂತಿಮ ದರ್ಶನಕ್ಕೆ ಬಂದ ಆರ್ ಎಸ್ ಎಸ್ ಮುಖಂಡ ಪ್ರಭಾಕರ ಭಟ್ ಅವರ ಕಾರಿಗೆ ಹಿಂದೂ ಕಾರ್ಯಕರ್ತರು ತಡೆ ಒಡ್ಡಿದರು. ಇದೆಲ್ಲಾ ಡೋಂಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಶವಯಾತ್ರೆ ಆಗಮಿಸುತ್ತಿದ್ದ ವೇಳೆ  ನಿಂತಿಕಲ್  ಮೆರವಣಿಗೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಯುವಕನೊಬ್ಬನ ಬೈಕ್ ಪುಡಿಗಟ್ಟಲಾಗಿದೆ. ಬೆಳ್ಳಾರೆಯಲ್ಲಿ ಆಕ್ರೋಶ ಮಡುಗಟ್ಟಿದೆ. ಉಳಿದಂತೆ ಎಲ್ಲೆಡೆ ಶಾಂತಿಯುತವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

3 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago