ಪ್ರವೀಣ್‌ ನೆಟ್ಟಾರು ಪಂಚಭೂತಗಳಲ್ಲಿ ಲೀನ | ಇಡೀ ದಿನ ಏನೇನಾಯ್ತು ? | ನಾಯಕರ ಹೇಳಿಕೆಗಳು ಏನು ?

July 27, 2022
9:51 PM

ಬಿಜೆಪಿ ಯುವಮೋರ್ಚಾ ಕಾರ್ಯಕರ್ತ , ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ.ಅವರು ಮಂಗಳವಾರ ರಾತ್ರಿ ಹತ್ಯೆಯಾಗಿದ್ದರು. ಬುಧವಾರ ಪುತ್ತೂರಿನಿಂದ ಮೆರವಣಿಗೆಯ ಮೂಲಕ ಬೆಳ್ಳಾರೆಯ ಮನೆಗೆ ಆಗಮಿಸಿ ಹಿಂದೂ ಸಂಪ್ರದಾಯದಂತೆ ಶವಸಂಸ್ಕಾರ ನಡೆಯಿತು. ಈ ಸಂದರ್ಭ ಸಾವಿರಾರು ಮಂದಿ ಭಾಗವಹಿಸಿದರು.

ಮಂಗಳವಾರ ರಾತ್ರಿ ಹತ್ಯೆಯಾಗಿದ್ದ ಪ್ರವೀಣ್‌ ನೆಟ್ಟಾರು ಅವರ ಮೃತದೇಹವನ್ನು ಯಾತ್ರೆಯ ಮೂಲಕ ಪುತ್ತೂರಿನಿಂದ ತರಲಾಗಿತ್ತು. ಹತ್ಯೆ ಪ್ರಕರಣ ಖಂಡಿಸಿ  ಸುಳ್ಯ, ಪುತ್ತೂರು, ಕಡಬದಲ್ಲಿ  ಸ್ವಯಂಪ್ರೇರಿತ ಬಂದ್‌ ನಡೆದಿದೆ. ಸುಳ್ಯದಲ್ಲಿ ಘಟನೆ ಖಂಡಿಸಿ ನಡೆದ ಪ್ರತಿಭಟನೆ ಹಾಗೂ ಟಯರ್‌ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ವೇಳೆ ಪೊಲೀಸರು ಹಾಗೂ ಹಿಂದೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಪುತ್ತೂರಿನಿಂದ ಬೆಳಗ್ಗೆ ಶವಯಾತ್ರೆ ಆರಂಭವಾಗಿದ್ದು ಪುತ್ತೂರಿನಲ್ಲಿ ಬೃಹತ್‌ ಯಾತ್ರೆ ನಡೆದಿದೆ. ಸಾವಿರಾರು ಜನರು ಭಾಗಿಯಾಗಿದ್ದರು. ಸವಣೂರು, ನಿಂತಿಕಲ್ಲು ಮೂಲಕ ಪ್ರವೀಣ್‌ ಮೃತದೇಹ ಬೆಳ್ಳಾರೆ ತರಲಾಗಿತ್ತು. ಈ ನಡುವೆ ನಿಂತಿಕಲ್ಲಿನಲ್ಲಿ ವಿಡಿಯೋ ಮಾಡುತ್ತಿದ್ದ ಯುವಕನ ಬೈಕ್‌ ಪುಡಿ ಮಾಡಲಾಗಿತ್ತು. ಬೆಳ್ಳಾರೆಗೆ ಆಗಮಿಸಿದ ಸಂದರ್ಭ ಹಿಂದೂ ಕಾರ್ಯಕರ್ತರ ಆಕ್ರೋಶ ಹೆಚ್ಚಿತ್ತು. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರ ಕೂಗಿದರು. ಸಂಸದ ನಳಿನ್‌ ಕುಮಾರ್‌ ಸಹಿತ ಸಚಿವರುಗಳ ಕಾರಿಗೆ ಹಿಂದೂ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಹಿಂದೂ ಮುಖಂಡರ ಕಾರಿಗೂ ಮುತ್ತಿಗೆ ಹಾಕಿದರು.  ಇದೇ ವೇಳೆ ಪೊಲೀಸರು ಲಾಠಿ ಚಾರ್ಜ್‌ ಮಾಡಿ ಜಮಾಯಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಚದುರಿಸಿದರು. ಪ್ರವೀಣ್‌ ಮನೆಗೆ ಮೃತದೇಹ ತಲುಪಿದ ಬಳಿಕ ಹಿಂದೂ ಸಂಪ್ರದಾಯದಂತೆ ಶವಸಂಸ್ಕಾರ ನಡೆಯಿತು.

ಪ್ರವೀಣ್‌ ಹತ್ಯೆ ಹಿನ್ನೆಲೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜು, ಅಂಬಿಕಾ ಕಾಲೇಜು ಹಾಗೂ ಕಡಬ, ಸುಳ್ಯದ ಗ್ರಾಮೀಣ ಭಾಗದಲ್ಲೂ ಶಾಲೆಗಳಿಗೆ ರಜೆ ನೀಡಲಾಗಿತ್ತು. ಸ್ವಯಂಪ್ರೇರಿತ ಬಂದ್‌ ಗೆ ಹಿಂದೂ ಸಂಘಟನೆಗಳು ಕರೆ ನೀಡಿದ ಬೆನ್ನಲ್ಲೇ ಪುತ್ತೂರಿನ ಬೊಳುವಾರು ಬಳಿ ಕೆ ಎಸ್‌ ಆರ್‌ ಟಿ  ಸಿ ಬಸ್ಸಿಗೆ ಇಂದು ಬೆಳಗ್ಗೆ ಕಲ್ಲು ತೂರಾಟ ನಡೆದ ಘಟನೆಯೂ ನಡೆದಿತ್ತು.

ಬಿಜೆಪಿ ಕಾರ್ಯಕರ್ತನ ಹತ್ಯೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ಜಿಲ್ಲೆಯ ಬಿಜೆಪಿ ನಾಯಕರು ಖಂಡಿಸಿದ್ದಾರೆ. ಇಂತಹ ಕೃತ್ಯ ಮಾಡಿದವರನ್ನು ಬಂಧಿಸಿ ಕಾನೂನಿನಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌, ಸಚಿವ ಎಸ್‌ ಅಂಗಾರ, ಸಂಸದ ನಳಿನ್‌ ಕುಮಾರ್‌ ಕಟೀಲು ಸೇರಿದಂತೆ ಬಿಜೆಪಿ ನಾಯಕರು ಕೂಡಾ ಘಟನೆಯನ್ನು ಖಂಡಿಸಿದ್ದಾರೆ.

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಿಂದ ಬೇಸರಗೊಂಡು ಹಾಗೂ ಯಾವುದೇ ಕ್ರಮಗಳು ನಡೆಯದ ಹಿನ್ನೆಲೆಯಲ್ಲಿ  ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದೆ.  ಚಿಕ್ಕಮಗಳೂರಿನ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಂದೀಪ್‌ ಹರಿವಿನಂಗಡಿ  ಸಹಿತ ಮಾಧ್ಯಮ ಪ್ರಮುಖರಾದ ಪ್ರೀತಮ್‌  ಹೆಬ್ಬಾರ್‌  ಸಹಿತ ಎಲ್ಲರೂ  ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಇದೀಗ ದ ಕ ಜಿಲ್ಲೆಯಲ್ಲೂ ಹಲವಾರು ಮಂದಿ ವಿವಿಧ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror