Advertisement
ಸುದ್ದಿಗಳು

ಬೆಳ್ಳಾರೆ | ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಹತ್ಯೆ | ನಿನ್ನೆ ನಡೆದದ್ದು ಇಷ್ಟು…. | ಇಂದು ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಸಂಘಟನೆಗಳಿಂದ ಕರೆ | ಶಾಲೆಗಳಿಗೆ ರಜೆ |

Share

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮಂಗಳವಾರ ರಾತ್ರಿ  ಹತ್ಯೆಯಾಗಿದ್ದರು. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ತೆರಳಿದರೂ ಫಲಕಾರಿಯಾಗಲಿಲ್ಲ. ಹತ್ಯೆಯಿಂದ ಆಕ್ರೋಶ ಸ್ಫೋಟಗೊಂಡು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಬೇಕೆಂದು ಪಟ್ಟು ಹಿಡಿದರು. ಜಿಲ್ಲಾಧಿಕಾರಿಗಳು ಆಗಮಿಸಿ ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಬುಧವಾರ ಶವಯಾತ್ರೆ ನಡೆಸಿ ಬೆಳ್ಳಾರೆಗೆ ತರಲು ನಿರ್ಧರಿಸಲಾಗಿತ್ತು. ಬುಧವಾರ ಸುಳ್ಯ, ಪುತ್ತೂರು, ಕಡಬ ಪ್ರದೇಶದಲ್ಲಿ ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಬಂದ್‌ ನಡೆಸಲು ಹಿಂದೂ ಸಂಘಟನೆಗಳು ಕರೆ ನೀಡಿವೆ. ಇದೇ ವೇಳೆ ಶಾಲೆಗಳಿಗೂ ರಜೆ ಸಾರಲಾಗಿದೆ.

ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಅವರ ಮೇಲೆ ದಾಳಿ ನಡೆದು ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ ಪ್ರವೀಣ್ ನೆಟ್ಟಾರ್ ಮೃತಪಟ್ಟಿರುವುದು ಘೋಷಣೆಯಾಗುತ್ತಲೇ  ಆಸ್ಪತ್ರೆ ಮುಂಭಾಗ ನೂರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಪ್ರವೀಣ್ ಅವರ ಮೃತ ದೇಹ ಪುತ್ತೂರಿನ ಪ್ರಗತಿ ಆಸ್ಪತ್ರೆಯಿಂದ, ಮರಣೋತ್ತರ ಪರೀಕ್ಷೆಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲು ಪೊಲೀಸರು ಸಿದ್ದತೆ ನಡೆಸಿದರೂ
ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಬರುವ ತನಕ ಮೃತದೇಹವನ್ನು ಕೊಂಡೊಯ್ಯಲು ಬಿಡುವುದಿಲ್ಲ ಎಂದು ಹಿಂದೂ ಕಾರ್ಯಕರ್ತರು ಆಗ್ರಹಿಸಿದರು. ಸ್ಥಳಕ್ಕೆ ಸಹಾಯಕ ಕಮೀಶನರ್‌ ಆಗಮಿಸಿದರೂ ಜಿಲ್ಲಾಧಿಕಾರಿ ಆಗಮಿಸಬೇಕು ಎಂದು ಒತ್ತಾಯಿಸಿದರು. ಬಳಿಕ ತಡ ರಾತ್ರಿ  ಜಿಲ್ಲಾಧಿಕಾರಿಗಳು ಆಗಮಿಸಿ ಪ್ರತಿಭಟನಾಕಾರರ ಜತೆ ಮಾತುಕತೆ ನಡೆಸಿದ ಬಳಿಕ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಯಿತು.  ಇದೇ ವೇಳೆ  ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜಿಲ್ಲಾದಿಕಾರಿಗಳು ಮನವಿ ಮಾಡಿದರು.

ಸ್ವಯಂಪ್ರೇರಿತ ಬಂದ್‌ ನಡೆಸಲು ಕರೆ:ಪ್ರವೀಣ್‌ ಹತ್ಯೆಯನ್ನು ಖಂಡಿಸಿ ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಬಂದ್ ನಡೆಸಬೇಕೆಂದು ಹಿಂದೂ ಸಂಘಟನೆಗಳು ಕರೆ ನೀಡಿವೆ. ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಇಂದು ಮೆರವಣಿಗೆ: ಇಂದು  ಶವ ಯಾತ್ರೆ ನಡೆಸಿ ಬೆಳ್ಳಾರೆಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಬೆಳಗ್ಗೆ ಪುತ್ತೂರು ನಗರದಿಂದ  ಮೆರವಣಿಗೆಯಲ್ಲಿ ಹೊರಟು ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ‌ ಪ್ರವೀಣ್ ಅವರ ಮೃತದೇಹವನ್ನು ಕೊಂಡೊಯ್ಯಲು ಹಿಂದೂ ಸಂಘಟನೆಗಳು ನಿರ್ಧರಿಸಿದ್ದಾರೆ.ಸುಳ್ಯ, ಬೆಳ್ಳಾರೆ, ಪುತ್ತೂರು, ಕಡಬ ಪ್ರದೇಶದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್‌ ಕೈಗೊಂಡಿದ್ದಾರೆ.

ಶಾಲೆಗಳಿಗೆ ರಜೆ : ಪ್ರವೀಣ್‌ ಹತ್ಯೆ ಹಿನ್ನೆಲೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜು, ಅಂಬಿಕಾ ಕಾಲೇಜು ಹಾಗೂ ಕಡಬ, ಸುಳ್ಯದ ಗ್ರಾಮೀಣ ಭಾಗದಲ್ಲೂ ಶಾಲೆಗಳಿಗೆ ರಜೆ ನೀಡಲಾಗಿದೆ.

ಬಸ್ಸಿಗೆ ಕಲ್ಲುತೂರಾಟ : ಪ್ರವೀಣ್‌ ಹತ್ಯೆ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಬಂದ್‌ ಗೆ ಹಿಂದೂ ಸಂಘಟನೆಗಳು ಕರೆ ನೀಡಿದ ಬೆನ್ನಲ್ಲೇ ಪುತ್ತೂರಿನ ಬೊಳುವಾರು ಬಳಿ ಕೆ ಎಸ್‌ ಆರ್‌ ಟಿ  ಸಿ ಬಸ್ಸಿಗೆ ಇಂದು ಬೆಳಗ್ಗೆ ಕಲ್ಲು ತೂರಾಟ ನಡೆದ ಘಟನೆಯೂ ನಡೆದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

3 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

3 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

3 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

4 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

16 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago