ಬೆಳ್ಳಾರೆಯ ಸಾಯಿಗಿರಿಧರ ರೈ ಮನೆಗೆ ಸಚಿವ-ಮಾಜಿ ಸಚಿವ ಭೇಟಿ |

May 28, 2022
10:44 PM

ಸುಳ್ಯದ ವಿದ್ಯುತ್‌ ಸಮಸ್ಯೆಯಿಂದ ಬೇಸತ್ತು 2016 ರಲ್ಲಿ ಇಂಧನ ಸಚಿವರಿಗೆ ಕರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದ ಬೆಳ್ಳಾರೆ ಸಾಯಿಗಿರಿಧರ್‌ ರೈ ಅವರ ಮನೆಗೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಹಾಗೂ ಸಚಿವ ಎಸ್‌ ಅಂಗಾರ ಭೇಟಿ ನೀಡಿದರು. 

Advertisement

2016 ರಲ್ಲಿ  ಸುಳ್ಯದ ವಿದ್ಯುತ್‌ ಸಮಸ್ಯೆ ತೀವ್ರಗೊಂಡು ಆಕ್ರೋಶಗೊಂಡ ಕೃಷಿಕ ಸಾಯಿಗಿರಿಧರ ರೈ ಅವರು ಅಂದಿನ ಇಂಧನ ಸಚಿವ ಡಿ ಕೆ ಶಿವಕುಮಾರ್‌ ಅವರಿಗೆ ಕರೆ ಮಾಡಿದ್ದರು. ಕರೆ ಮಾಡುತ್ತಲೇ ಆಕ್ರೋಶವನ್ನೂ ವ್ಯಕ್ತಪಡಿಸಿದ್ದರು. ಈ ಸಂಬಂಧ ಸಚಿವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾತ್ರೋ ರಾತ್ರಿ ಪೊಲೀಸರು ಸಾಯಿಗಿರಿಧರ ರೈ ಮನೆಗೆ ನುಗ್ಗಿ ಬಂಧಿಸಿದ್ದರು. ಅದಾದ ಬಳಿಕ ನ್ಯಾಯಾಲಯದಲ್ಲಿ  ವಿಚಾರಣೆ ನಡೆದು ಸಾಯಿಗಿರಿಧರ ರೈ ವಿರುದ್ಧವಾಗಿ ನ್ಯಾಯಾಲಯದ ತೀರ್ಪು ಪ್ರಕಟವಾಗಿತ್ತು, ಅದಾಗಿ ಸಾಯಿಗಿರಿಧರ ರೈ ಅವರು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ ಜಾಮೀನು ಪಡೆದಿದ್ದರು. ಇದೀಗ ಅವರ ಮನೆಗೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಹಾಗೂ ಸಚಿವ ಎಸ್‌ ಅಂಗಾರ ಭೇಟಿ ಮಾತುಕತೆ ನಡೆಸಿ ಸಾಂತ್ವನ ಹೇಳಿದರು.

2016 ರಲ್ಲಿ  ನಡೆದ ಪ್ರಕರಣ ಅಂದಿನಿಂದ ಇಂದಿನವರೆಗೂ ಚರ್ಚೆಯಾಗುತ್ತಲೇ ಇದೆ. ಸಾಮಾಜಿಕವಾದ ವಿದ್ಯುತ್‌ ಸಮಸ್ಯೆ ಇಂದಿಗೂ ಸುಳ್ಯದಲ್ಲಿ ಬಗೆಹರಿದಿಲ್ಲ. ಬೆಳ್ಳಾರೆಯ ಸಬ್‌ ಸ್ಟೇಶನ್‌  ಕೂಡಾ ಅದಾದ ಬಳಿಕವೇ ಉದ್ಘಾಟನೆಯೂ ಆಗಿತ್ತು, ಅದರ್ಲಲೂ ರಾಜಕೀಯ ಇಚ್ಛಾಶಕ್ತಿಗಿಂತಲೂ ಸ್ಥಳೀಯ ಹೋರಾಟ ಸಮಿತಿ ಹಾಗೂ ಬಳಕೆದಾರರ ವೇದಿಕೆಯೇ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಿತ್ತು. ಇಂದಿಗೂ ಸುಳ್ಯದ ವಿದ್ಯುತ್‌ ಸಮಸ್ಯೆ ಬಗೆಹರಿಯಲು ಪ್ರಯತ್ನವಾಗುತ್ತಲೇ ಇದೆ. ಸಾಯಿಗಿರಿಧರ ರೈ ಅವರು ಸಾಮಾಜಿಕ ಸಮಸ್ಯೆಗೆ ಮಾತನಾಡಿ ಕೋರ್ಟ್‌ – ಕೇಸು ಅಲೆಯುವಂತಾಗಿತ್ತು. ಇದೀಗ ಜನಪ್ರತಿನಿಧಿಗಳು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror