ಸುದ್ದಿಗಳು

ಬೆಳ್ಳಾರೆಯ ಸಾಯಿಗಿರಿಧರ ರೈ ಮನೆಗೆ ಸಚಿವ-ಮಾಜಿ ಸಚಿವ ಭೇಟಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯದ ವಿದ್ಯುತ್‌ ಸಮಸ್ಯೆಯಿಂದ ಬೇಸತ್ತು 2016 ರಲ್ಲಿ ಇಂಧನ ಸಚಿವರಿಗೆ ಕರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದ ಬೆಳ್ಳಾರೆ ಸಾಯಿಗಿರಿಧರ್‌ ರೈ ಅವರ ಮನೆಗೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಹಾಗೂ ಸಚಿವ ಎಸ್‌ ಅಂಗಾರ ಭೇಟಿ ನೀಡಿದರು. 

Advertisement
Advertisement

2016 ರಲ್ಲಿ  ಸುಳ್ಯದ ವಿದ್ಯುತ್‌ ಸಮಸ್ಯೆ ತೀವ್ರಗೊಂಡು ಆಕ್ರೋಶಗೊಂಡ ಕೃಷಿಕ ಸಾಯಿಗಿರಿಧರ ರೈ ಅವರು ಅಂದಿನ ಇಂಧನ ಸಚಿವ ಡಿ ಕೆ ಶಿವಕುಮಾರ್‌ ಅವರಿಗೆ ಕರೆ ಮಾಡಿದ್ದರು. ಕರೆ ಮಾಡುತ್ತಲೇ ಆಕ್ರೋಶವನ್ನೂ ವ್ಯಕ್ತಪಡಿಸಿದ್ದರು. ಈ ಸಂಬಂಧ ಸಚಿವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾತ್ರೋ ರಾತ್ರಿ ಪೊಲೀಸರು ಸಾಯಿಗಿರಿಧರ ರೈ ಮನೆಗೆ ನುಗ್ಗಿ ಬಂಧಿಸಿದ್ದರು. ಅದಾದ ಬಳಿಕ ನ್ಯಾಯಾಲಯದಲ್ಲಿ  ವಿಚಾರಣೆ ನಡೆದು ಸಾಯಿಗಿರಿಧರ ರೈ ವಿರುದ್ಧವಾಗಿ ನ್ಯಾಯಾಲಯದ ತೀರ್ಪು ಪ್ರಕಟವಾಗಿತ್ತು, ಅದಾಗಿ ಸಾಯಿಗಿರಿಧರ ರೈ ಅವರು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ ಜಾಮೀನು ಪಡೆದಿದ್ದರು. ಇದೀಗ ಅವರ ಮನೆಗೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಹಾಗೂ ಸಚಿವ ಎಸ್‌ ಅಂಗಾರ ಭೇಟಿ ಮಾತುಕತೆ ನಡೆಸಿ ಸಾಂತ್ವನ ಹೇಳಿದರು.

2016 ರಲ್ಲಿ  ನಡೆದ ಪ್ರಕರಣ ಅಂದಿನಿಂದ ಇಂದಿನವರೆಗೂ ಚರ್ಚೆಯಾಗುತ್ತಲೇ ಇದೆ. ಸಾಮಾಜಿಕವಾದ ವಿದ್ಯುತ್‌ ಸಮಸ್ಯೆ ಇಂದಿಗೂ ಸುಳ್ಯದಲ್ಲಿ ಬಗೆಹರಿದಿಲ್ಲ. ಬೆಳ್ಳಾರೆಯ ಸಬ್‌ ಸ್ಟೇಶನ್‌  ಕೂಡಾ ಅದಾದ ಬಳಿಕವೇ ಉದ್ಘಾಟನೆಯೂ ಆಗಿತ್ತು, ಅದರ್ಲಲೂ ರಾಜಕೀಯ ಇಚ್ಛಾಶಕ್ತಿಗಿಂತಲೂ ಸ್ಥಳೀಯ ಹೋರಾಟ ಸಮಿತಿ ಹಾಗೂ ಬಳಕೆದಾರರ ವೇದಿಕೆಯೇ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಿತ್ತು. ಇಂದಿಗೂ ಸುಳ್ಯದ ವಿದ್ಯುತ್‌ ಸಮಸ್ಯೆ ಬಗೆಹರಿಯಲು ಪ್ರಯತ್ನವಾಗುತ್ತಲೇ ಇದೆ. ಸಾಯಿಗಿರಿಧರ ರೈ ಅವರು ಸಾಮಾಜಿಕ ಸಮಸ್ಯೆಗೆ ಮಾತನಾಡಿ ಕೋರ್ಟ್‌ – ಕೇಸು ಅಲೆಯುವಂತಾಗಿತ್ತು. ಇದೀಗ ಜನಪ್ರತಿನಿಧಿಗಳು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

6 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

6 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

15 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

15 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

15 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

15 hours ago