Advertisement
ಸುದ್ದಿಗಳು

ಬೆಳ್ಳಾರೆಯ ಸಾಯಿಗಿರಿಧರ ರೈ ಮನೆಗೆ ಸಚಿವ-ಮಾಜಿ ಸಚಿವ ಭೇಟಿ |

Share

ಸುಳ್ಯದ ವಿದ್ಯುತ್‌ ಸಮಸ್ಯೆಯಿಂದ ಬೇಸತ್ತು 2016 ರಲ್ಲಿ ಇಂಧನ ಸಚಿವರಿಗೆ ಕರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದ ಬೆಳ್ಳಾರೆ ಸಾಯಿಗಿರಿಧರ್‌ ರೈ ಅವರ ಮನೆಗೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಹಾಗೂ ಸಚಿವ ಎಸ್‌ ಅಂಗಾರ ಭೇಟಿ ನೀಡಿದರು. 

2016 ರಲ್ಲಿ  ಸುಳ್ಯದ ವಿದ್ಯುತ್‌ ಸಮಸ್ಯೆ ತೀವ್ರಗೊಂಡು ಆಕ್ರೋಶಗೊಂಡ ಕೃಷಿಕ ಸಾಯಿಗಿರಿಧರ ರೈ ಅವರು ಅಂದಿನ ಇಂಧನ ಸಚಿವ ಡಿ ಕೆ ಶಿವಕುಮಾರ್‌ ಅವರಿಗೆ ಕರೆ ಮಾಡಿದ್ದರು. ಕರೆ ಮಾಡುತ್ತಲೇ ಆಕ್ರೋಶವನ್ನೂ ವ್ಯಕ್ತಪಡಿಸಿದ್ದರು. ಈ ಸಂಬಂಧ ಸಚಿವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾತ್ರೋ ರಾತ್ರಿ ಪೊಲೀಸರು ಸಾಯಿಗಿರಿಧರ ರೈ ಮನೆಗೆ ನುಗ್ಗಿ ಬಂಧಿಸಿದ್ದರು. ಅದಾದ ಬಳಿಕ ನ್ಯಾಯಾಲಯದಲ್ಲಿ  ವಿಚಾರಣೆ ನಡೆದು ಸಾಯಿಗಿರಿಧರ ರೈ ವಿರುದ್ಧವಾಗಿ ನ್ಯಾಯಾಲಯದ ತೀರ್ಪು ಪ್ರಕಟವಾಗಿತ್ತು, ಅದಾಗಿ ಸಾಯಿಗಿರಿಧರ ರೈ ಅವರು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ ಜಾಮೀನು ಪಡೆದಿದ್ದರು. ಇದೀಗ ಅವರ ಮನೆಗೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಹಾಗೂ ಸಚಿವ ಎಸ್‌ ಅಂಗಾರ ಭೇಟಿ ಮಾತುಕತೆ ನಡೆಸಿ ಸಾಂತ್ವನ ಹೇಳಿದರು.

2016 ರಲ್ಲಿ  ನಡೆದ ಪ್ರಕರಣ ಅಂದಿನಿಂದ ಇಂದಿನವರೆಗೂ ಚರ್ಚೆಯಾಗುತ್ತಲೇ ಇದೆ. ಸಾಮಾಜಿಕವಾದ ವಿದ್ಯುತ್‌ ಸಮಸ್ಯೆ ಇಂದಿಗೂ ಸುಳ್ಯದಲ್ಲಿ ಬಗೆಹರಿದಿಲ್ಲ. ಬೆಳ್ಳಾರೆಯ ಸಬ್‌ ಸ್ಟೇಶನ್‌  ಕೂಡಾ ಅದಾದ ಬಳಿಕವೇ ಉದ್ಘಾಟನೆಯೂ ಆಗಿತ್ತು, ಅದರ್ಲಲೂ ರಾಜಕೀಯ ಇಚ್ಛಾಶಕ್ತಿಗಿಂತಲೂ ಸ್ಥಳೀಯ ಹೋರಾಟ ಸಮಿತಿ ಹಾಗೂ ಬಳಕೆದಾರರ ವೇದಿಕೆಯೇ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಿತ್ತು. ಇಂದಿಗೂ ಸುಳ್ಯದ ವಿದ್ಯುತ್‌ ಸಮಸ್ಯೆ ಬಗೆಹರಿಯಲು ಪ್ರಯತ್ನವಾಗುತ್ತಲೇ ಇದೆ. ಸಾಯಿಗಿರಿಧರ ರೈ ಅವರು ಸಾಮಾಜಿಕ ಸಮಸ್ಯೆಗೆ ಮಾತನಾಡಿ ಕೋರ್ಟ್‌ – ಕೇಸು ಅಲೆಯುವಂತಾಗಿತ್ತು. ಇದೀಗ ಜನಪ್ರತಿನಿಧಿಗಳು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

24 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago