Advertisement
ಸುದ್ದಿಗಳು

ಬೆಳ್ಳಾರೆಯ ಸಾಯಿಗಿರಿಧರ ರೈ ಮನೆಗೆ ಸಚಿವ-ಮಾಜಿ ಸಚಿವ ಭೇಟಿ |

Share

ಸುಳ್ಯದ ವಿದ್ಯುತ್‌ ಸಮಸ್ಯೆಯಿಂದ ಬೇಸತ್ತು 2016 ರಲ್ಲಿ ಇಂಧನ ಸಚಿವರಿಗೆ ಕರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದ ಬೆಳ್ಳಾರೆ ಸಾಯಿಗಿರಿಧರ್‌ ರೈ ಅವರ ಮನೆಗೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಹಾಗೂ ಸಚಿವ ಎಸ್‌ ಅಂಗಾರ ಭೇಟಿ ನೀಡಿದರು. 

2016 ರಲ್ಲಿ  ಸುಳ್ಯದ ವಿದ್ಯುತ್‌ ಸಮಸ್ಯೆ ತೀವ್ರಗೊಂಡು ಆಕ್ರೋಶಗೊಂಡ ಕೃಷಿಕ ಸಾಯಿಗಿರಿಧರ ರೈ ಅವರು ಅಂದಿನ ಇಂಧನ ಸಚಿವ ಡಿ ಕೆ ಶಿವಕುಮಾರ್‌ ಅವರಿಗೆ ಕರೆ ಮಾಡಿದ್ದರು. ಕರೆ ಮಾಡುತ್ತಲೇ ಆಕ್ರೋಶವನ್ನೂ ವ್ಯಕ್ತಪಡಿಸಿದ್ದರು. ಈ ಸಂಬಂಧ ಸಚಿವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾತ್ರೋ ರಾತ್ರಿ ಪೊಲೀಸರು ಸಾಯಿಗಿರಿಧರ ರೈ ಮನೆಗೆ ನುಗ್ಗಿ ಬಂಧಿಸಿದ್ದರು. ಅದಾದ ಬಳಿಕ ನ್ಯಾಯಾಲಯದಲ್ಲಿ  ವಿಚಾರಣೆ ನಡೆದು ಸಾಯಿಗಿರಿಧರ ರೈ ವಿರುದ್ಧವಾಗಿ ನ್ಯಾಯಾಲಯದ ತೀರ್ಪು ಪ್ರಕಟವಾಗಿತ್ತು, ಅದಾಗಿ ಸಾಯಿಗಿರಿಧರ ರೈ ಅವರು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ ಜಾಮೀನು ಪಡೆದಿದ್ದರು. ಇದೀಗ ಅವರ ಮನೆಗೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಹಾಗೂ ಸಚಿವ ಎಸ್‌ ಅಂಗಾರ ಭೇಟಿ ಮಾತುಕತೆ ನಡೆಸಿ ಸಾಂತ್ವನ ಹೇಳಿದರು.

2016 ರಲ್ಲಿ  ನಡೆದ ಪ್ರಕರಣ ಅಂದಿನಿಂದ ಇಂದಿನವರೆಗೂ ಚರ್ಚೆಯಾಗುತ್ತಲೇ ಇದೆ. ಸಾಮಾಜಿಕವಾದ ವಿದ್ಯುತ್‌ ಸಮಸ್ಯೆ ಇಂದಿಗೂ ಸುಳ್ಯದಲ್ಲಿ ಬಗೆಹರಿದಿಲ್ಲ. ಬೆಳ್ಳಾರೆಯ ಸಬ್‌ ಸ್ಟೇಶನ್‌  ಕೂಡಾ ಅದಾದ ಬಳಿಕವೇ ಉದ್ಘಾಟನೆಯೂ ಆಗಿತ್ತು, ಅದರ್ಲಲೂ ರಾಜಕೀಯ ಇಚ್ಛಾಶಕ್ತಿಗಿಂತಲೂ ಸ್ಥಳೀಯ ಹೋರಾಟ ಸಮಿತಿ ಹಾಗೂ ಬಳಕೆದಾರರ ವೇದಿಕೆಯೇ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಿತ್ತು. ಇಂದಿಗೂ ಸುಳ್ಯದ ವಿದ್ಯುತ್‌ ಸಮಸ್ಯೆ ಬಗೆಹರಿಯಲು ಪ್ರಯತ್ನವಾಗುತ್ತಲೇ ಇದೆ. ಸಾಯಿಗಿರಿಧರ ರೈ ಅವರು ಸಾಮಾಜಿಕ ಸಮಸ್ಯೆಗೆ ಮಾತನಾಡಿ ಕೋರ್ಟ್‌ – ಕೇಸು ಅಲೆಯುವಂತಾಗಿತ್ತು. ಇದೀಗ ಜನಪ್ರತಿನಿಧಿಗಳು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

15 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

21 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago