Advertisement
ಸುದ್ದಿಗಳು

ಬೆಳ್ಳಾರೆಯ ಸಾಯಿಗಿರಿಧರ ರೈ ಮನೆಗೆ ಸಚಿವ-ಮಾಜಿ ಸಚಿವ ಭೇಟಿ |

Share

ಸುಳ್ಯದ ವಿದ್ಯುತ್‌ ಸಮಸ್ಯೆಯಿಂದ ಬೇಸತ್ತು 2016 ರಲ್ಲಿ ಇಂಧನ ಸಚಿವರಿಗೆ ಕರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದ ಬೆಳ್ಳಾರೆ ಸಾಯಿಗಿರಿಧರ್‌ ರೈ ಅವರ ಮನೆಗೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಹಾಗೂ ಸಚಿವ ಎಸ್‌ ಅಂಗಾರ ಭೇಟಿ ನೀಡಿದರು. 

Advertisement
Advertisement

2016 ರಲ್ಲಿ  ಸುಳ್ಯದ ವಿದ್ಯುತ್‌ ಸಮಸ್ಯೆ ತೀವ್ರಗೊಂಡು ಆಕ್ರೋಶಗೊಂಡ ಕೃಷಿಕ ಸಾಯಿಗಿರಿಧರ ರೈ ಅವರು ಅಂದಿನ ಇಂಧನ ಸಚಿವ ಡಿ ಕೆ ಶಿವಕುಮಾರ್‌ ಅವರಿಗೆ ಕರೆ ಮಾಡಿದ್ದರು. ಕರೆ ಮಾಡುತ್ತಲೇ ಆಕ್ರೋಶವನ್ನೂ ವ್ಯಕ್ತಪಡಿಸಿದ್ದರು. ಈ ಸಂಬಂಧ ಸಚಿವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾತ್ರೋ ರಾತ್ರಿ ಪೊಲೀಸರು ಸಾಯಿಗಿರಿಧರ ರೈ ಮನೆಗೆ ನುಗ್ಗಿ ಬಂಧಿಸಿದ್ದರು. ಅದಾದ ಬಳಿಕ ನ್ಯಾಯಾಲಯದಲ್ಲಿ  ವಿಚಾರಣೆ ನಡೆದು ಸಾಯಿಗಿರಿಧರ ರೈ ವಿರುದ್ಧವಾಗಿ ನ್ಯಾಯಾಲಯದ ತೀರ್ಪು ಪ್ರಕಟವಾಗಿತ್ತು, ಅದಾಗಿ ಸಾಯಿಗಿರಿಧರ ರೈ ಅವರು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ ಜಾಮೀನು ಪಡೆದಿದ್ದರು. ಇದೀಗ ಅವರ ಮನೆಗೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಹಾಗೂ ಸಚಿವ ಎಸ್‌ ಅಂಗಾರ ಭೇಟಿ ಮಾತುಕತೆ ನಡೆಸಿ ಸಾಂತ್ವನ ಹೇಳಿದರು.

Advertisement

2016 ರಲ್ಲಿ  ನಡೆದ ಪ್ರಕರಣ ಅಂದಿನಿಂದ ಇಂದಿನವರೆಗೂ ಚರ್ಚೆಯಾಗುತ್ತಲೇ ಇದೆ. ಸಾಮಾಜಿಕವಾದ ವಿದ್ಯುತ್‌ ಸಮಸ್ಯೆ ಇಂದಿಗೂ ಸುಳ್ಯದಲ್ಲಿ ಬಗೆಹರಿದಿಲ್ಲ. ಬೆಳ್ಳಾರೆಯ ಸಬ್‌ ಸ್ಟೇಶನ್‌  ಕೂಡಾ ಅದಾದ ಬಳಿಕವೇ ಉದ್ಘಾಟನೆಯೂ ಆಗಿತ್ತು, ಅದರ್ಲಲೂ ರಾಜಕೀಯ ಇಚ್ಛಾಶಕ್ತಿಗಿಂತಲೂ ಸ್ಥಳೀಯ ಹೋರಾಟ ಸಮಿತಿ ಹಾಗೂ ಬಳಕೆದಾರರ ವೇದಿಕೆಯೇ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಿತ್ತು. ಇಂದಿಗೂ ಸುಳ್ಯದ ವಿದ್ಯುತ್‌ ಸಮಸ್ಯೆ ಬಗೆಹರಿಯಲು ಪ್ರಯತ್ನವಾಗುತ್ತಲೇ ಇದೆ. ಸಾಯಿಗಿರಿಧರ ರೈ ಅವರು ಸಾಮಾಜಿಕ ಸಮಸ್ಯೆಗೆ ಮಾತನಾಡಿ ಕೋರ್ಟ್‌ – ಕೇಸು ಅಲೆಯುವಂತಾಗಿತ್ತು. ಇದೀಗ ಜನಪ್ರತಿನಿಧಿಗಳು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ | ಪರಿಸರದ ಮೇಲಾಗುವ ಪರಿಣಾಮಗಳೇನು..?

ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…

9 hours ago

ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ | ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…

ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…

9 hours ago

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ | ಕೈ ತೋಟಗಳಲ್ಲಿ ಸಿಗುವ ಸುಲಭ ಔಷಧಿ

ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…

10 hours ago

ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |

ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy…

10 hours ago

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

ರಬ್ಬರ್‌ ಆಮದು ತಡೆಯಾದರೆ ಟಯರ್‌ ಉದ್ಯಮ ಹಾಗೂ ರಬ್ಬರ್‌ ಬೆಳೆಗಾರರ ರಕ್ಷಣೆ ಸಾಧ್ಯವಿದೆ…

12 hours ago