Advertisement
ಸುದ್ದಿಗಳು

ಬೆಳ್ಳಾರೆಯ ಸಾಯಿಗಿರಿಧರ ರೈ ಮನೆಗೆ ಸಚಿವ-ಮಾಜಿ ಸಚಿವ ಭೇಟಿ |

Share

ಸುಳ್ಯದ ವಿದ್ಯುತ್‌ ಸಮಸ್ಯೆಯಿಂದ ಬೇಸತ್ತು 2016 ರಲ್ಲಿ ಇಂಧನ ಸಚಿವರಿಗೆ ಕರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದ ಬೆಳ್ಳಾರೆ ಸಾಯಿಗಿರಿಧರ್‌ ರೈ ಅವರ ಮನೆಗೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಹಾಗೂ ಸಚಿವ ಎಸ್‌ ಅಂಗಾರ ಭೇಟಿ ನೀಡಿದರು. 

2016 ರಲ್ಲಿ  ಸುಳ್ಯದ ವಿದ್ಯುತ್‌ ಸಮಸ್ಯೆ ತೀವ್ರಗೊಂಡು ಆಕ್ರೋಶಗೊಂಡ ಕೃಷಿಕ ಸಾಯಿಗಿರಿಧರ ರೈ ಅವರು ಅಂದಿನ ಇಂಧನ ಸಚಿವ ಡಿ ಕೆ ಶಿವಕುಮಾರ್‌ ಅವರಿಗೆ ಕರೆ ಮಾಡಿದ್ದರು. ಕರೆ ಮಾಡುತ್ತಲೇ ಆಕ್ರೋಶವನ್ನೂ ವ್ಯಕ್ತಪಡಿಸಿದ್ದರು. ಈ ಸಂಬಂಧ ಸಚಿವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾತ್ರೋ ರಾತ್ರಿ ಪೊಲೀಸರು ಸಾಯಿಗಿರಿಧರ ರೈ ಮನೆಗೆ ನುಗ್ಗಿ ಬಂಧಿಸಿದ್ದರು. ಅದಾದ ಬಳಿಕ ನ್ಯಾಯಾಲಯದಲ್ಲಿ  ವಿಚಾರಣೆ ನಡೆದು ಸಾಯಿಗಿರಿಧರ ರೈ ವಿರುದ್ಧವಾಗಿ ನ್ಯಾಯಾಲಯದ ತೀರ್ಪು ಪ್ರಕಟವಾಗಿತ್ತು, ಅದಾಗಿ ಸಾಯಿಗಿರಿಧರ ರೈ ಅವರು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ ಜಾಮೀನು ಪಡೆದಿದ್ದರು. ಇದೀಗ ಅವರ ಮನೆಗೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಹಾಗೂ ಸಚಿವ ಎಸ್‌ ಅಂಗಾರ ಭೇಟಿ ಮಾತುಕತೆ ನಡೆಸಿ ಸಾಂತ್ವನ ಹೇಳಿದರು.

2016 ರಲ್ಲಿ  ನಡೆದ ಪ್ರಕರಣ ಅಂದಿನಿಂದ ಇಂದಿನವರೆಗೂ ಚರ್ಚೆಯಾಗುತ್ತಲೇ ಇದೆ. ಸಾಮಾಜಿಕವಾದ ವಿದ್ಯುತ್‌ ಸಮಸ್ಯೆ ಇಂದಿಗೂ ಸುಳ್ಯದಲ್ಲಿ ಬಗೆಹರಿದಿಲ್ಲ. ಬೆಳ್ಳಾರೆಯ ಸಬ್‌ ಸ್ಟೇಶನ್‌  ಕೂಡಾ ಅದಾದ ಬಳಿಕವೇ ಉದ್ಘಾಟನೆಯೂ ಆಗಿತ್ತು, ಅದರ್ಲಲೂ ರಾಜಕೀಯ ಇಚ್ಛಾಶಕ್ತಿಗಿಂತಲೂ ಸ್ಥಳೀಯ ಹೋರಾಟ ಸಮಿತಿ ಹಾಗೂ ಬಳಕೆದಾರರ ವೇದಿಕೆಯೇ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಿತ್ತು. ಇಂದಿಗೂ ಸುಳ್ಯದ ವಿದ್ಯುತ್‌ ಸಮಸ್ಯೆ ಬಗೆಹರಿಯಲು ಪ್ರಯತ್ನವಾಗುತ್ತಲೇ ಇದೆ. ಸಾಯಿಗಿರಿಧರ ರೈ ಅವರು ಸಾಮಾಜಿಕ ಸಮಸ್ಯೆಗೆ ಮಾತನಾಡಿ ಕೋರ್ಟ್‌ – ಕೇಸು ಅಲೆಯುವಂತಾಗಿತ್ತು. ಇದೀಗ ಜನಪ್ರತಿನಿಧಿಗಳು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

18 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 days ago