ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಕಳೆದ ವರ್ಷಗಳಿಂದ ಚರಂಡಿ ಅವ್ಯವಸ್ಥೆ ಇದೆ. ಇದರಿಂದಾಗಿ ಜನರು ನಿತ್ಯವೂ ಸಂಕಷ್ಟ ಅನುಭವಿಸುವಂತಾಗಿದೆ. ಇಲಾಖೆಗಳು, ಸ್ಥಳೀಯ ಪಂಚಾಯತ್ ಸೇರಿದಂತೆ ಯಾರೊಬ್ಬರೂ ಗಂಭೀರವಾಗಿ ಈ ಸಮಸ್ಯೆ ತೆಗೆದುಕೊಳ್ಳುತ್ತಿಲ್ಲ. ವಾರ್ಡ್ ಸಭೆ, ಗ್ರಾಮ ಸಭೆಗಳಲ್ಲಿ ಚರ್ಚೆಯಾಗಿ ನಿರ್ಣಯವಾದರೂ ಪರಿಹಾರ ಮಾತ್ರಾ ಮರೀಚಿಕೆಯಾಗಿದೆ.
ಸಣ್ಣ ಮಳೆಗೆ ಆಗಿರುವ ಸಮಸ್ಯೆ
ಬೆಳ್ಳಾರೆಯ ಚರಂಡಿ ಸಮಸ್ಯೆ ಬಗ್ಗೆ ಗ್ರಾಮಸಭೆಯಲ್ಲಿ ಚರ್ಚೆಯಾಗಿದೆ. ಈ ಬಾರಿಯ ಗ್ರಾಮ ಸಭೆಯಲ್ಲೂ ಚರ್ಚೆಯಾಗಿದೆ. ಜನರ ಸಮಸ್ಯೆಯನ್ನು ಗ್ರಾಮ ಸಭೆಯಲ್ಲಿ ಚರ್ಚಿಸಿ ನಿರ್ಣಯ ಮಾಡಿದ ಬಳಿಕವೂ ಅನುಷ್ಟಾನವಾಗುತ್ತಿಲ್ಲ ಎನ್ನುವುದು ಜನರ ಆರೋಪ. ಗ್ರಾಮ ಸಭೆ ಎಂದರೆ ಗ್ರಾಮದ ಸಂಸತ್ತು, ಇಲ್ಲಿನ ನಿರ್ಣಯಕ್ಕೆ ಬೆಲೆ ಇದೆ, ಆದರೆ ಬೆಳ್ಳಾರೆಯ ಈ ಪ್ರಕರಣದಲ್ಲಿ ಮಾತ್ರಾ ಅನುಷ್ಟಾನ ಆಗಿಲ್ಲ, ಚರಂಡಿಯ ಕೊಳಚೆಯಿಂದ ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ, ಹಾಗಿದ್ದರೂ ಆರೋಗ್ಯ ಇಲಾಖೆ ಕೂಡಾ ಈ ಬಗ್ಗೆ ಮೌನ ವಹಿಸಿದೆ ಎಂದು ಜನರು ಹೇಳುತ್ತಾರೆ.ಸ್ವಚ್ಛ ಭಾರತದ ಕನಸು ಈಡೇರಲು ಇನ್ನೂ ಎಷ್ಟು ದಿನಗಳು ಬೇಕಾದೀತೋ ಎನ್ನುವುದು ಪ್ರಶ್ನೆಯಾಗಿದೆ.
ರೂರಲ್ ಮಿರರ್.ಕಾಂ ನಿರಂತರವಾಗಿ ಫಾಲೋಅಪ್ ವರದಿಯನ್ನು ಮಾಡುತ್ತಿದೆ. ಜಿಪಂ, ತಾಪಂ ಹಾಗೂ ಗ್ರಾಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ಸಮಸ್ಯೆ ಬಗೆಹರಿಯುವವರೆಗೆ ಜನರ ಸಮಸ್ಯೆಯನ್ನು ಇಲಾಖೆಗಳ, ಜನಪ್ರತಿನಿಧಿಗಳ ಗಮನಕ್ಕೆ ರೂರಲ್ ಮಿರರ್ ತರುತ್ತದೆ.
ಚರಂಡಿ ಅವ್ಯವಸ್ಥೆ | ಬೆಳ್ಳಾರೆಯಲ್ಲಿ ಈಗ ಕೊಳಚೆ ನೀರಿನ ಸಮಸ್ಯೆ….! | ದಿವ್ಯ ಮೌನವೇಕೆ ಎಂಬುದು ಜನರ ಪ್ರಶ್ನೆ…? |
ಚರಂಡಿ ಅವ್ಯವಸ್ಥೆ | ಬೆಳ್ಳಾರೆಯಲ್ಲಿ ಈಗ ಕೊಳಚೆ ನೀರಿನ ಸಮಸ್ಯೆ….! | ದಿವ್ಯ ಮೌನವೇಕೆ ಎಂಬುದು ಜನರ ಪ್ರಶ್ನೆ…? |
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…