Advertisement
ಸುದ್ದಿಗಳು

ಬೆಳ್ಳಾರೆ ಚರಂಡಿ ಪಾಲೋಅಪ್‌ | ಗ್ರಾಮಸಭೆಯ ಚರ್ಚೆ – ನಿರ್ಣಯಗಳಿಗೂ ಬೆಲೆ ಇಲ್ಲ…!! |

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಕಳೆದ  ವರ್ಷಗಳಿಂದ ಚರಂಡಿ ಅವ್ಯವಸ್ಥೆ ಇದೆ. ಇದರಿಂದಾಗಿ ಜನರು ನಿತ್ಯವೂ ಸಂಕಷ್ಟ ಅನುಭವಿಸುವಂತಾಗಿದೆ. ಇಲಾಖೆಗಳು, ಸ್ಥಳೀಯ ಪಂಚಾಯತ್‌ ಸೇರಿದಂತೆ ಯಾರೊಬ್ಬರೂ ಗಂಭೀರವಾಗಿ ಈ ಸಮಸ್ಯೆ ತೆಗೆದುಕೊಳ್ಳುತ್ತಿಲ್ಲ. ವಾರ್ಡ್‌ ಸಭೆ, ಗ್ರಾಮ ಸಭೆಗಳಲ್ಲಿ ಚರ್ಚೆಯಾಗಿ ನಿರ್ಣಯವಾದರೂ ಪರಿಹಾರ ಮಾತ್ರಾ ಮರೀಚಿಕೆಯಾಗಿದೆ.

ಸಣ್ಣ ಮಳೆಗೆ ಆಗಿರುವ ಸಮಸ್ಯೆ

ಬೆಳ್ಳಾರೆಯ ಚರಂಡಿ ಸಮಸ್ಯೆ ಬಗ್ಗೆ ಗ್ರಾಮಸಭೆಯಲ್ಲಿ ಚರ್ಚೆಯಾಗಿದೆ. ಈ ಬಾರಿಯ ಗ್ರಾಮ ಸಭೆಯಲ್ಲೂ ಚರ್ಚೆಯಾಗಿದೆ. ಜನರ ಸಮಸ್ಯೆಯನ್ನು ಗ್ರಾಮ ಸಭೆಯಲ್ಲಿ ಚರ್ಚಿಸಿ ನಿರ್ಣಯ ಮಾಡಿದ ಬಳಿಕವೂ ಅನುಷ್ಟಾನವಾಗುತ್ತಿಲ್ಲ ಎನ್ನುವುದು  ಜನರ ಆರೋಪ. ಗ್ರಾಮ ಸಭೆ ಎಂದರೆ ಗ್ರಾಮದ ಸಂಸತ್ತು, ಇಲ್ಲಿನ ನಿರ್ಣಯಕ್ಕೆ ಬೆಲೆ ಇದೆ, ಆದರೆ ಬೆಳ್ಳಾರೆಯ ಈ ಪ್ರಕರಣದಲ್ಲಿ ಮಾತ್ರಾ ಅನುಷ್ಟಾನ ಆಗಿಲ್ಲ, ಚರಂಡಿಯ ಕೊಳಚೆಯಿಂದ ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ, ಹಾಗಿದ್ದರೂ ಆರೋಗ್ಯ ಇಲಾಖೆ ಕೂಡಾ ಈ ಬಗ್ಗೆ ಮೌನ ವಹಿಸಿದೆ ಎಂದು ಜನರು ಹೇಳುತ್ತಾರೆ.ಸ್ವಚ್ಛ ಭಾರತದ ಕನಸು ಈಡೇರಲು ಇನ್ನೂ ಎಷ್ಟು ದಿನಗಳು ಬೇಕಾದೀತೋ ಎನ್ನುವುದು ಪ್ರಶ್ನೆಯಾಗಿದೆ.

ರೂರಲ್‌ ಮಿರರ್‌.ಕಾಂ ನಿರಂತರವಾಗಿ ಫಾಲೋಅಪ್‌ ವರದಿಯನ್ನು ಮಾಡುತ್ತಿದೆ. ಜಿಪಂ, ತಾಪಂ ಹಾಗೂ ಗ್ರಾಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ಸಮಸ್ಯೆ ಬಗೆಹರಿಯುವವರೆಗೆ ಜನರ ಸಮಸ್ಯೆಯನ್ನು ಇಲಾಖೆಗಳ, ಜನಪ್ರತಿನಿಧಿಗಳ ಗಮನಕ್ಕೆ ರೂರಲ್‌ ಮಿರರ್‌ ತರುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

4 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

4 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

4 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

14 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

15 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

15 hours ago