Advertisement
ಸುದ್ದಿಗಳು

ಬೆಳ್ಳಾರೆ ಚರಂಡಿ ಪಾಲೋಅಪ್‌ | ಗ್ರಾಮಸಭೆಯ ಚರ್ಚೆ – ನಿರ್ಣಯಗಳಿಗೂ ಬೆಲೆ ಇಲ್ಲ…!! |

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಕಳೆದ  ವರ್ಷಗಳಿಂದ ಚರಂಡಿ ಅವ್ಯವಸ್ಥೆ ಇದೆ. ಇದರಿಂದಾಗಿ ಜನರು ನಿತ್ಯವೂ ಸಂಕಷ್ಟ ಅನುಭವಿಸುವಂತಾಗಿದೆ. ಇಲಾಖೆಗಳು, ಸ್ಥಳೀಯ ಪಂಚಾಯತ್‌ ಸೇರಿದಂತೆ ಯಾರೊಬ್ಬರೂ ಗಂಭೀರವಾಗಿ ಈ ಸಮಸ್ಯೆ ತೆಗೆದುಕೊಳ್ಳುತ್ತಿಲ್ಲ. ವಾರ್ಡ್‌ ಸಭೆ, ಗ್ರಾಮ ಸಭೆಗಳಲ್ಲಿ ಚರ್ಚೆಯಾಗಿ ನಿರ್ಣಯವಾದರೂ ಪರಿಹಾರ ಮಾತ್ರಾ ಮರೀಚಿಕೆಯಾಗಿದೆ.

ಸಣ್ಣ ಮಳೆಗೆ ಆಗಿರುವ ಸಮಸ್ಯೆ

ಬೆಳ್ಳಾರೆಯ ಚರಂಡಿ ಸಮಸ್ಯೆ ಬಗ್ಗೆ ಗ್ರಾಮಸಭೆಯಲ್ಲಿ ಚರ್ಚೆಯಾಗಿದೆ. ಈ ಬಾರಿಯ ಗ್ರಾಮ ಸಭೆಯಲ್ಲೂ ಚರ್ಚೆಯಾಗಿದೆ. ಜನರ ಸಮಸ್ಯೆಯನ್ನು ಗ್ರಾಮ ಸಭೆಯಲ್ಲಿ ಚರ್ಚಿಸಿ ನಿರ್ಣಯ ಮಾಡಿದ ಬಳಿಕವೂ ಅನುಷ್ಟಾನವಾಗುತ್ತಿಲ್ಲ ಎನ್ನುವುದು  ಜನರ ಆರೋಪ. ಗ್ರಾಮ ಸಭೆ ಎಂದರೆ ಗ್ರಾಮದ ಸಂಸತ್ತು, ಇಲ್ಲಿನ ನಿರ್ಣಯಕ್ಕೆ ಬೆಲೆ ಇದೆ, ಆದರೆ ಬೆಳ್ಳಾರೆಯ ಈ ಪ್ರಕರಣದಲ್ಲಿ ಮಾತ್ರಾ ಅನುಷ್ಟಾನ ಆಗಿಲ್ಲ, ಚರಂಡಿಯ ಕೊಳಚೆಯಿಂದ ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ, ಹಾಗಿದ್ದರೂ ಆರೋಗ್ಯ ಇಲಾಖೆ ಕೂಡಾ ಈ ಬಗ್ಗೆ ಮೌನ ವಹಿಸಿದೆ ಎಂದು ಜನರು ಹೇಳುತ್ತಾರೆ.ಸ್ವಚ್ಛ ಭಾರತದ ಕನಸು ಈಡೇರಲು ಇನ್ನೂ ಎಷ್ಟು ದಿನಗಳು ಬೇಕಾದೀತೋ ಎನ್ನುವುದು ಪ್ರಶ್ನೆಯಾಗಿದೆ.

ರೂರಲ್‌ ಮಿರರ್‌.ಕಾಂ ನಿರಂತರವಾಗಿ ಫಾಲೋಅಪ್‌ ವರದಿಯನ್ನು ಮಾಡುತ್ತಿದೆ. ಜಿಪಂ, ತಾಪಂ ಹಾಗೂ ಗ್ರಾಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ಸಮಸ್ಯೆ ಬಗೆಹರಿಯುವವರೆಗೆ ಜನರ ಸಮಸ್ಯೆಯನ್ನು ಇಲಾಖೆಗಳ, ಜನಪ್ರತಿನಿಧಿಗಳ ಗಮನಕ್ಕೆ ರೂರಲ್‌ ಮಿರರ್‌ ತರುತ್ತದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

5 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

11 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

21 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago