Advertisement
ಚಿಂತನ

ಅರಿವಿನಿಂದ ಬದುಕಿದರೆ, ಅದೇ ನಿಜವಾದ ಜಯ

Share

“ಒಬ್ಬರು ಮತ್ತೊಬ್ಬರನ್ನು ತಿಂದು ಬದುಕಬಾರದು, ತಿಳಿದು ಬದುಕಬೇಕು” ಎಂಬುದು  ದ. ರಾ. ಬೇಂದ್ರೆ ಅವರ ಸಾಲುಗಳು.  ಬಹಳ ಸುಂದರವಾದ ಸಾಲುಗಳು ಇವು…

ತಿಂದು ಬದುಕುವುದು ಎಂದರೆ ತಿನ್ನುವುದು ಅಲ್ಲ,  ಇಲ್ಲಿ ಶೋಷಣೆ, ಅಸೂಯೆ, ಸ್ವಾರ್ಥ ಮತ್ತು ಮತ್ತೊಬ್ಬರ ದುಃಖದ ಮೇಲೆ ನಿಲ್ಲುವ ಬದುಕಿನ ಸಂಕೇತ. ಇಂತಹ ಬದುಕು ಕ್ಷಣಿಕ ಲಾಭ ನೀಡಬಹುದು, ಆದರೆ ಅಂತಃಕರಣವನ್ನು ಯಾವಾಗಲೋ ಒಂದು ಸಂದರ್ಭ ಹಿಂಸಿಸುತ್ತದೆ,  ಬೇಂದ್ರೆ ಇಲ್ಲಿ ಎಚ್ಚರಿಸುವುದು ಇದನ್ನು. ಇತರರನ್ನು ಕುಗ್ಗಿಸಿ, ಹಿಂಸಿಸಿ ಮೇಲೇರಿದ ಬದುಕು ನಿಜವಾದ ಮಾನವೀಯ ಬದುಕಾಗಲಾರದು. ಅದು ಕಾಡುವುದೂ ನಿಶ್ಚಿತವೇ ಆಗಿರುತ್ತದೆ. ಆಗ ಕಾಲವೂ ಕಳೆದಿರುತ್ತದೆ, ಕಾಲವೂ ದೂರವಾಗಿರುತ್ತದೆ.

ತಿಳಿದು ಬದುಕಬೇಕು ಎನ್ನುವುದೇ ನಿಜವಾದ ಬದುಕು. ಇದು ಬದುಕಿಗೆ ನೀಡುವ ಸಂದೇಶ, ಬೆಳಗಿನ ಚಿಂತನೆಗೆ ದಾರಿದೀಪ. ತಿಳಿದು ಬದುಕುವುದು ಎಂದರೆ  ಮಾತು, ನಡೆ ಮತ್ತು ನಿರ್ಧಾರಗಳು ಸಮಾಜದ ಮೇಲೆ ಬೀರುವ ಪರಿಣಾಮವನ್ನು ಅರಿತು ನಡೆಯುವುದು. ದಿನದ ಆರಂಭದಲ್ಲೇ ಈ ಅರಿವು ಬಂದರೆ, ಬದುಕು ಹಗುರವಾಗುತ್ತದೆ, ಸಂಬಂಧಗಳು ಮೃದುಗೊಳ್ಳುತ್ತವೆ. ಯಾರು ಯಾರನ್ನೂ ನೋಯಿಸದೇ, ಅರಿವಿನಿಂದ ಬದುಕಿದರೆ, ಅದೇ ನಿಜವಾದ ಜಯ, ಅದೇ ನಿಜವಾದ ಸಂತೋಷ. ಇಂದಿನ ದಿನವನ್ನು ಈ ಚಿಂತನೆಯೊಂದಿಗೆ ಆರಂಭಿಸೋಣ….. ಶುಭದಿನ… ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

7 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

8 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

8 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

22 hours ago

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

ದೇಶದ ವಿವಿದೆಡೆ ಮಾರ್ಚ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್‌ನಲ್ಲಿ ಅಸಾಮಾನ್ಯ ಹವಾಮಾನದಿಂದ…

22 hours ago

ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ

ಹೋರ್ಮುಜ್‌ ಜಲಸಂಧಿ ಸಂಕಷ್ಟದಿಂದ ಭಾರತಕ್ಕೆ ಗೊಬ್ಬರ ಮತ್ತು ಇಂಧನ ಪೂರೈಕೆ ಮೇಲೆ ಒತ್ತಡ…

1 day ago