“ಒಬ್ಬರು ಮತ್ತೊಬ್ಬರನ್ನು ತಿಂದು ಬದುಕಬಾರದು, ತಿಳಿದು ಬದುಕಬೇಕು” ಎಂಬುದು ದ. ರಾ. ಬೇಂದ್ರೆ ಅವರ ಸಾಲುಗಳು. ಬಹಳ ಸುಂದರವಾದ ಸಾಲುಗಳು ಇವು…
ತಿಂದು ಬದುಕುವುದು ಎಂದರೆ ತಿನ್ನುವುದು ಅಲ್ಲ, ಇಲ್ಲಿ ಶೋಷಣೆ, ಅಸೂಯೆ, ಸ್ವಾರ್ಥ ಮತ್ತು ಮತ್ತೊಬ್ಬರ ದುಃಖದ ಮೇಲೆ ನಿಲ್ಲುವ ಬದುಕಿನ ಸಂಕೇತ. ಇಂತಹ ಬದುಕು ಕ್ಷಣಿಕ ಲಾಭ ನೀಡಬಹುದು, ಆದರೆ ಅಂತಃಕರಣವನ್ನು ಯಾವಾಗಲೋ ಒಂದು ಸಂದರ್ಭ ಹಿಂಸಿಸುತ್ತದೆ, ಬೇಂದ್ರೆ ಇಲ್ಲಿ ಎಚ್ಚರಿಸುವುದು ಇದನ್ನು. ಇತರರನ್ನು ಕುಗ್ಗಿಸಿ, ಹಿಂಸಿಸಿ ಮೇಲೇರಿದ ಬದುಕು ನಿಜವಾದ ಮಾನವೀಯ ಬದುಕಾಗಲಾರದು. ಅದು ಕಾಡುವುದೂ ನಿಶ್ಚಿತವೇ ಆಗಿರುತ್ತದೆ. ಆಗ ಕಾಲವೂ ಕಳೆದಿರುತ್ತದೆ, ಕಾಲವೂ ದೂರವಾಗಿರುತ್ತದೆ.
ತಿಳಿದು ಬದುಕಬೇಕು ಎನ್ನುವುದೇ ನಿಜವಾದ ಬದುಕು. ಇದು ಬದುಕಿಗೆ ನೀಡುವ ಸಂದೇಶ, ಬೆಳಗಿನ ಚಿಂತನೆಗೆ ದಾರಿದೀಪ. ತಿಳಿದು ಬದುಕುವುದು ಎಂದರೆ ಮಾತು, ನಡೆ ಮತ್ತು ನಿರ್ಧಾರಗಳು ಸಮಾಜದ ಮೇಲೆ ಬೀರುವ ಪರಿಣಾಮವನ್ನು ಅರಿತು ನಡೆಯುವುದು. ದಿನದ ಆರಂಭದಲ್ಲೇ ಈ ಅರಿವು ಬಂದರೆ, ಬದುಕು ಹಗುರವಾಗುತ್ತದೆ, ಸಂಬಂಧಗಳು ಮೃದುಗೊಳ್ಳುತ್ತವೆ. ಯಾರು ಯಾರನ್ನೂ ನೋಯಿಸದೇ, ಅರಿವಿನಿಂದ ಬದುಕಿದರೆ, ಅದೇ ನಿಜವಾದ ಜಯ, ಅದೇ ನಿಜವಾದ ಸಂತೋಷ. ಇಂದಿನ ದಿನವನ್ನು ಈ ಚಿಂತನೆಯೊಂದಿಗೆ ಆರಂಭಿಸೋಣ….. ಶುಭದಿನ… ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ….
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…