“ಒಬ್ಬರು ಮತ್ತೊಬ್ಬರನ್ನು ತಿಂದು ಬದುಕಬಾರದು, ತಿಳಿದು ಬದುಕಬೇಕು” ಎಂಬುದು ದ. ರಾ. ಬೇಂದ್ರೆ ಅವರ ಸಾಲುಗಳು. ಬಹಳ ಸುಂದರವಾದ ಸಾಲುಗಳು ಇವು…
ತಿಂದು ಬದುಕುವುದು ಎಂದರೆ ತಿನ್ನುವುದು ಅಲ್ಲ, ಇಲ್ಲಿ ಶೋಷಣೆ, ಅಸೂಯೆ, ಸ್ವಾರ್ಥ ಮತ್ತು ಮತ್ತೊಬ್ಬರ ದುಃಖದ ಮೇಲೆ ನಿಲ್ಲುವ ಬದುಕಿನ ಸಂಕೇತ. ಇಂತಹ ಬದುಕು ಕ್ಷಣಿಕ ಲಾಭ ನೀಡಬಹುದು, ಆದರೆ ಅಂತಃಕರಣವನ್ನು ಯಾವಾಗಲೋ ಒಂದು ಸಂದರ್ಭ ಹಿಂಸಿಸುತ್ತದೆ, ಬೇಂದ್ರೆ ಇಲ್ಲಿ ಎಚ್ಚರಿಸುವುದು ಇದನ್ನು. ಇತರರನ್ನು ಕುಗ್ಗಿಸಿ, ಹಿಂಸಿಸಿ ಮೇಲೇರಿದ ಬದುಕು ನಿಜವಾದ ಮಾನವೀಯ ಬದುಕಾಗಲಾರದು. ಅದು ಕಾಡುವುದೂ ನಿಶ್ಚಿತವೇ ಆಗಿರುತ್ತದೆ. ಆಗ ಕಾಲವೂ ಕಳೆದಿರುತ್ತದೆ, ಕಾಲವೂ ದೂರವಾಗಿರುತ್ತದೆ.
ತಿಳಿದು ಬದುಕಬೇಕು ಎನ್ನುವುದೇ ನಿಜವಾದ ಬದುಕು. ಇದು ಬದುಕಿಗೆ ನೀಡುವ ಸಂದೇಶ, ಬೆಳಗಿನ ಚಿಂತನೆಗೆ ದಾರಿದೀಪ. ತಿಳಿದು ಬದುಕುವುದು ಎಂದರೆ ಮಾತು, ನಡೆ ಮತ್ತು ನಿರ್ಧಾರಗಳು ಸಮಾಜದ ಮೇಲೆ ಬೀರುವ ಪರಿಣಾಮವನ್ನು ಅರಿತು ನಡೆಯುವುದು. ದಿನದ ಆರಂಭದಲ್ಲೇ ಈ ಅರಿವು ಬಂದರೆ, ಬದುಕು ಹಗುರವಾಗುತ್ತದೆ, ಸಂಬಂಧಗಳು ಮೃದುಗೊಳ್ಳುತ್ತವೆ. ಯಾರು ಯಾರನ್ನೂ ನೋಯಿಸದೇ, ಅರಿವಿನಿಂದ ಬದುಕಿದರೆ, ಅದೇ ನಿಜವಾದ ಜಯ, ಅದೇ ನಿಜವಾದ ಸಂತೋಷ. ಇಂದಿನ ದಿನವನ್ನು ಈ ಚಿಂತನೆಯೊಂದಿಗೆ ಆರಂಭಿಸೋಣ….. ಶುಭದಿನ… ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ….
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…