ಸರ್ಕಾರದ ಪಶು ಭಾಗ್ಯ ಯೋಜನೆಯ ಲಾಭಗಳು | ರೈತರಿಗೆ ಆಗುವ ಅನುಕೂಲಗಳೇನು..?

October 2, 2023
7:16 PM
ಎರಡು ಹಸು ಅಥವಾ ಎರಡು ಎಮ್ಮೆ, 10-15 ಕುರಿ, ಕೋಳಿ ಮರಿ ಸಾಕಣೆ ಹಾಗೂ ಇಂತಿಷ್ಟು ಹಂದಿ ಸಾಕಣೆಗೆ 1.2 ಲಕ್ಷ ರೂ.ವರೆಗಿನ ಘಟಕಕ್ಕೆ ಒಬ್ಬ ಫಲಾನುಭವಿಗೆ ಸರಕಾರದಿಂದ ಸಹಾಯಧನ ದೊರೆಯಲಿದೆ. ಎರಡು ಎಕರೆವರೆಗೆ ಜಮೀನು ಹೊಂದಿರುವ ಸಣ್ಣ ಹಾಗೂ ಮಧ್ಯಮ ರೈತರು ಯೋಜನೆಯ ಲಾಭ ಪಡೆಯಬಹುದು.

ವಾಣಿಜ್ಯ ಬ್ಯಾಂಕುಗಳಿಂದ (Commercial bank)  ಗರಿಷ್ಠ ರೂ.1.20 ಲಕ್ಷದ ವರೆಗೆ ಸಾಲ ಪಡೆದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಸು, ಕುರಿ, ಆಡು, ಹಂದಿ, ಕೋಳಿ ಘಟಕಗಳನ್ನು ಸ್ಥಾಪಿಸಲು ಪ.ಜಾ. ಮತ್ತು ಪ.ಪಂ. ದವರಿಗೆ ಶೇ.33 ಹಾಗೂ ಇತರೆ ಜನಾಂಗದವರಿಗೆ ಶೇ.25 ರಷ್ಟು ಬ್ಯಾಕ್‍ ಎಂಡೆಡ್ ಸಹಾಯಧನ ಒದಗಿಸಲಾಗುವುದು.

ಪ.ಜಾ. ಮತ್ತು ಪ.ಪಂ. ದವರಿಗೆ ಸಹಾಯಧನವನ್ನು ಪಶು ಭಾಗ್ಯ ಯೋಜನೆಯ ಆಡಳಿತಾತ್ಮಕ ಅನುಮೋದನೆ ಸರ್ಕಾರಿ ಆದೇಶ, ದಿನಾಂಕ 04-08-2015 ರಲ್ಲಿ ಶೇ.33 ರಿಂದ ಶೇ.50 ಕ್ಕೆ ಪರಿಷ್ಕರಿಸಲಾಗಿದೆ. ಬೆಳೆ ಸಾಲದ ಮಾದರಿಯಲ್ಲಿ, ಸಹಕಾರಿ ಬ್ಯಾಂಕುಗಳಿಂದ ಶೂನ್ಯ ಬಡ್ಡಿ ದರದಲ್ಲಿ ರೂ. 50,000/- ವರೆಗೆ ಪಶು ಆಹಾರ / ಇತರೆ ನಿರ್ವಹಣೆ ವೆಚ್ಚಕ್ಕಾಗಿ ಅಲ್ಪಾವಧಿ ಸಾಲ ಒದಗಿಸಲಾಗುವುದು. ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರುಗಳಿಗೆ 5 ರಾಸುಗಳವರೆಗೆ ವಿಮಾ ಕಂತುಗಳನ್ನು ಪಾವತಿಸಲು ಸಹಾಯಧನ ಒದಗಿಸಲಾಗುವುದು. ಕುರಿಗಾಹಿ ಸುರಕ್ಷಾ ಯೋಜನೆಯಡಿ ನೀಡುತ್ತಿರುವ ರೂ.5,000/- ಪರಿಹಾರ ಧನವನ್ನು ಮುಂದುವರೆಸಲಾಗುವುದು. ಈ ಕಾರ್ಯಕ್ರಮಕ್ಕೆ ರೂ.5.00 ಕೋಟಿ ಅನುದಾನವನ್ನು ನೀಡಲಾಗುವುದು.

ಇತರೆ ಕಾರ್ಯಕ್ರಮ ಹಾಗೂ ಸವಲತ್ತುಗಳು:

ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ಇನ್ನಿತರೆ ಕಾರ್ಯಕ್ರಮ ಹಾಗೂ ಒದಗಿಸುತ್ತಿರುವ ಸವಲತ್ತುಗಳು ಕೆಳಕಂಡಂತಿವೆ:
ಕೇಂದ್ರ ಪುರಸ್ಕೃತ ಯೋಜನೆಗಳು (CSS)., ದೊಡ್ಡರೋಗ ನಿರ್ಮೂಲನಾ ಯೋಜನೆ (NPRE), ಪ್ರಾಣಿ ರೋಗ ತಡೆಗಟ್ಟುವಿಕೆಗೆ ರಾಜ್ಯಗಳಿಗೆ ನೆರವು (ASCAD), ಕಾಲು ಬಾಯಿ ರೋಗ ನಿಯಂತ್ರಣ ಕಾರ್ಯಕ್ರಮ (FMD-CP), ರಾಷ್ಟ್ರೀಯ ಪ್ರಾಣಿ ರೋಗ ವರದಿ ವ್ಯವಸ್ಥೆ (NADRS), ರಾಷ್ಟ್ರೀಯ ಪಿ.ಪಿ.ಆರ್. ನಿಯಂತ್ರಣ ಕಾರ್ಯಕ್ರಮ (NCP-PPR), ರಾಷ್ಟ್ರೀಯ ಬ್ರೂಸೆಲ್ಲಾ ನಿಯಂತ್ರಣ ಕಾರ್ಯಕ್ರಮ, ಪಶುವೈದ್ಯಕೀಯ ಆಸ್ಪತ್ರೆ ಹಾಗೂ ಚಿಕಿತ್ಸಾಲಯಗಳ ಸ್ಥಾಪನೆ ಹಾಗೂ ಬಲವರ್ಧನೆ (ESVHD), ತಳಿ ಅಭಿವೃದ್ಧಿ
ಜಾನುವಾರು ವಿಮಾ ಯೋಜನೆ, ವಿಶೇಷ ಜಾನುವಾರು ಅಭಿವೃದ್ಧಿ ಯೋಜನೆ, ವಿಶೇಷ ಘಟಕ ಯೋಜನೆ (SCSP),
ಗಿರಿಜನ ಉಪ ಯೋಜನೆ (TSP), ಬರಡು ರಾಸು ಚಿಕಿತ್ಸಾ ಶಿಬಿರ, ಮೇವು ಅಭಿವೃದ್ಧಿ ಯೋಜನೆ, ರೈತರ ತರಬೇತಿ ಕಾರ್ಯಕ್ರಮ, ಇತರೆ.

  • ಸಂಗ್ರಹ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್
May 16, 2026
10:28 PM
by: ಮಿರರ್‌ ಡೆಸ್ಕ್
ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?
May 16, 2026
9:45 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ
May 16, 2026
4:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ
May 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror