Advertisement
ಮಾಹಿತಿ

ಸರ್ಕಾರದ ಪಶು ಭಾಗ್ಯ ಯೋಜನೆಯ ಲಾಭಗಳು | ರೈತರಿಗೆ ಆಗುವ ಅನುಕೂಲಗಳೇನು..?

Share

ವಾಣಿಜ್ಯ ಬ್ಯಾಂಕುಗಳಿಂದ (Commercial bank)  ಗರಿಷ್ಠ ರೂ.1.20 ಲಕ್ಷದ ವರೆಗೆ ಸಾಲ ಪಡೆದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಸು, ಕುರಿ, ಆಡು, ಹಂದಿ, ಕೋಳಿ ಘಟಕಗಳನ್ನು ಸ್ಥಾಪಿಸಲು ಪ.ಜಾ. ಮತ್ತು ಪ.ಪಂ. ದವರಿಗೆ ಶೇ.33 ಹಾಗೂ ಇತರೆ ಜನಾಂಗದವರಿಗೆ ಶೇ.25 ರಷ್ಟು ಬ್ಯಾಕ್‍ ಎಂಡೆಡ್ ಸಹಾಯಧನ ಒದಗಿಸಲಾಗುವುದು.

ಪ.ಜಾ. ಮತ್ತು ಪ.ಪಂ. ದವರಿಗೆ ಸಹಾಯಧನವನ್ನು ಪಶು ಭಾಗ್ಯ ಯೋಜನೆಯ ಆಡಳಿತಾತ್ಮಕ ಅನುಮೋದನೆ ಸರ್ಕಾರಿ ಆದೇಶ, ದಿನಾಂಕ 04-08-2015 ರಲ್ಲಿ ಶೇ.33 ರಿಂದ ಶೇ.50 ಕ್ಕೆ ಪರಿಷ್ಕರಿಸಲಾಗಿದೆ. ಬೆಳೆ ಸಾಲದ ಮಾದರಿಯಲ್ಲಿ, ಸಹಕಾರಿ ಬ್ಯಾಂಕುಗಳಿಂದ ಶೂನ್ಯ ಬಡ್ಡಿ ದರದಲ್ಲಿ ರೂ. 50,000/- ವರೆಗೆ ಪಶು ಆಹಾರ / ಇತರೆ ನಿರ್ವಹಣೆ ವೆಚ್ಚಕ್ಕಾಗಿ ಅಲ್ಪಾವಧಿ ಸಾಲ ಒದಗಿಸಲಾಗುವುದು. ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರುಗಳಿಗೆ 5 ರಾಸುಗಳವರೆಗೆ ವಿಮಾ ಕಂತುಗಳನ್ನು ಪಾವತಿಸಲು ಸಹಾಯಧನ ಒದಗಿಸಲಾಗುವುದು. ಕುರಿಗಾಹಿ ಸುರಕ್ಷಾ ಯೋಜನೆಯಡಿ ನೀಡುತ್ತಿರುವ ರೂ.5,000/- ಪರಿಹಾರ ಧನವನ್ನು ಮುಂದುವರೆಸಲಾಗುವುದು. ಈ ಕಾರ್ಯಕ್ರಮಕ್ಕೆ ರೂ.5.00 ಕೋಟಿ ಅನುದಾನವನ್ನು ನೀಡಲಾಗುವುದು.

ಇತರೆ ಕಾರ್ಯಕ್ರಮ ಹಾಗೂ ಸವಲತ್ತುಗಳು:

ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ಇನ್ನಿತರೆ ಕಾರ್ಯಕ್ರಮ ಹಾಗೂ ಒದಗಿಸುತ್ತಿರುವ ಸವಲತ್ತುಗಳು ಕೆಳಕಂಡಂತಿವೆ:
ಕೇಂದ್ರ ಪುರಸ್ಕೃತ ಯೋಜನೆಗಳು (CSS)., ದೊಡ್ಡರೋಗ ನಿರ್ಮೂಲನಾ ಯೋಜನೆ (NPRE), ಪ್ರಾಣಿ ರೋಗ ತಡೆಗಟ್ಟುವಿಕೆಗೆ ರಾಜ್ಯಗಳಿಗೆ ನೆರವು (ASCAD), ಕಾಲು ಬಾಯಿ ರೋಗ ನಿಯಂತ್ರಣ ಕಾರ್ಯಕ್ರಮ (FMD-CP), ರಾಷ್ಟ್ರೀಯ ಪ್ರಾಣಿ ರೋಗ ವರದಿ ವ್ಯವಸ್ಥೆ (NADRS), ರಾಷ್ಟ್ರೀಯ ಪಿ.ಪಿ.ಆರ್. ನಿಯಂತ್ರಣ ಕಾರ್ಯಕ್ರಮ (NCP-PPR), ರಾಷ್ಟ್ರೀಯ ಬ್ರೂಸೆಲ್ಲಾ ನಿಯಂತ್ರಣ ಕಾರ್ಯಕ್ರಮ, ಪಶುವೈದ್ಯಕೀಯ ಆಸ್ಪತ್ರೆ ಹಾಗೂ ಚಿಕಿತ್ಸಾಲಯಗಳ ಸ್ಥಾಪನೆ ಹಾಗೂ ಬಲವರ್ಧನೆ (ESVHD), ತಳಿ ಅಭಿವೃದ್ಧಿ
ಜಾನುವಾರು ವಿಮಾ ಯೋಜನೆ, ವಿಶೇಷ ಜಾನುವಾರು ಅಭಿವೃದ್ಧಿ ಯೋಜನೆ, ವಿಶೇಷ ಘಟಕ ಯೋಜನೆ (SCSP),
ಗಿರಿಜನ ಉಪ ಯೋಜನೆ (TSP), ಬರಡು ರಾಸು ಚಿಕಿತ್ಸಾ ಶಿಬಿರ, ಮೇವು ಅಭಿವೃದ್ಧಿ ಯೋಜನೆ, ರೈತರ ತರಬೇತಿ ಕಾರ್ಯಕ್ರಮ, ಇತರೆ.

  • ಸಂಗ್ರಹ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

6 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

6 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

10 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

10 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

10 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

10 hours ago