Advertisement
ಮಾಹಿತಿ

ಸರ್ಕಾರದ ಪಶು ಭಾಗ್ಯ ಯೋಜನೆಯ ಲಾಭಗಳು | ರೈತರಿಗೆ ಆಗುವ ಅನುಕೂಲಗಳೇನು..?

Share

ವಾಣಿಜ್ಯ ಬ್ಯಾಂಕುಗಳಿಂದ (Commercial bank)  ಗರಿಷ್ಠ ರೂ.1.20 ಲಕ್ಷದ ವರೆಗೆ ಸಾಲ ಪಡೆದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಸು, ಕುರಿ, ಆಡು, ಹಂದಿ, ಕೋಳಿ ಘಟಕಗಳನ್ನು ಸ್ಥಾಪಿಸಲು ಪ.ಜಾ. ಮತ್ತು ಪ.ಪಂ. ದವರಿಗೆ ಶೇ.33 ಹಾಗೂ ಇತರೆ ಜನಾಂಗದವರಿಗೆ ಶೇ.25 ರಷ್ಟು ಬ್ಯಾಕ್‍ ಎಂಡೆಡ್ ಸಹಾಯಧನ ಒದಗಿಸಲಾಗುವುದು.

ಪ.ಜಾ. ಮತ್ತು ಪ.ಪಂ. ದವರಿಗೆ ಸಹಾಯಧನವನ್ನು ಪಶು ಭಾಗ್ಯ ಯೋಜನೆಯ ಆಡಳಿತಾತ್ಮಕ ಅನುಮೋದನೆ ಸರ್ಕಾರಿ ಆದೇಶ, ದಿನಾಂಕ 04-08-2015 ರಲ್ಲಿ ಶೇ.33 ರಿಂದ ಶೇ.50 ಕ್ಕೆ ಪರಿಷ್ಕರಿಸಲಾಗಿದೆ. ಬೆಳೆ ಸಾಲದ ಮಾದರಿಯಲ್ಲಿ, ಸಹಕಾರಿ ಬ್ಯಾಂಕುಗಳಿಂದ ಶೂನ್ಯ ಬಡ್ಡಿ ದರದಲ್ಲಿ ರೂ. 50,000/- ವರೆಗೆ ಪಶು ಆಹಾರ / ಇತರೆ ನಿರ್ವಹಣೆ ವೆಚ್ಚಕ್ಕಾಗಿ ಅಲ್ಪಾವಧಿ ಸಾಲ ಒದಗಿಸಲಾಗುವುದು. ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರುಗಳಿಗೆ 5 ರಾಸುಗಳವರೆಗೆ ವಿಮಾ ಕಂತುಗಳನ್ನು ಪಾವತಿಸಲು ಸಹಾಯಧನ ಒದಗಿಸಲಾಗುವುದು. ಕುರಿಗಾಹಿ ಸುರಕ್ಷಾ ಯೋಜನೆಯಡಿ ನೀಡುತ್ತಿರುವ ರೂ.5,000/- ಪರಿಹಾರ ಧನವನ್ನು ಮುಂದುವರೆಸಲಾಗುವುದು. ಈ ಕಾರ್ಯಕ್ರಮಕ್ಕೆ ರೂ.5.00 ಕೋಟಿ ಅನುದಾನವನ್ನು ನೀಡಲಾಗುವುದು.

ಇತರೆ ಕಾರ್ಯಕ್ರಮ ಹಾಗೂ ಸವಲತ್ತುಗಳು:

ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ಇನ್ನಿತರೆ ಕಾರ್ಯಕ್ರಮ ಹಾಗೂ ಒದಗಿಸುತ್ತಿರುವ ಸವಲತ್ತುಗಳು ಕೆಳಕಂಡಂತಿವೆ:
ಕೇಂದ್ರ ಪುರಸ್ಕೃತ ಯೋಜನೆಗಳು (CSS)., ದೊಡ್ಡರೋಗ ನಿರ್ಮೂಲನಾ ಯೋಜನೆ (NPRE), ಪ್ರಾಣಿ ರೋಗ ತಡೆಗಟ್ಟುವಿಕೆಗೆ ರಾಜ್ಯಗಳಿಗೆ ನೆರವು (ASCAD), ಕಾಲು ಬಾಯಿ ರೋಗ ನಿಯಂತ್ರಣ ಕಾರ್ಯಕ್ರಮ (FMD-CP), ರಾಷ್ಟ್ರೀಯ ಪ್ರಾಣಿ ರೋಗ ವರದಿ ವ್ಯವಸ್ಥೆ (NADRS), ರಾಷ್ಟ್ರೀಯ ಪಿ.ಪಿ.ಆರ್. ನಿಯಂತ್ರಣ ಕಾರ್ಯಕ್ರಮ (NCP-PPR), ರಾಷ್ಟ್ರೀಯ ಬ್ರೂಸೆಲ್ಲಾ ನಿಯಂತ್ರಣ ಕಾರ್ಯಕ್ರಮ, ಪಶುವೈದ್ಯಕೀಯ ಆಸ್ಪತ್ರೆ ಹಾಗೂ ಚಿಕಿತ್ಸಾಲಯಗಳ ಸ್ಥಾಪನೆ ಹಾಗೂ ಬಲವರ್ಧನೆ (ESVHD), ತಳಿ ಅಭಿವೃದ್ಧಿ
ಜಾನುವಾರು ವಿಮಾ ಯೋಜನೆ, ವಿಶೇಷ ಜಾನುವಾರು ಅಭಿವೃದ್ಧಿ ಯೋಜನೆ, ವಿಶೇಷ ಘಟಕ ಯೋಜನೆ (SCSP),
ಗಿರಿಜನ ಉಪ ಯೋಜನೆ (TSP), ಬರಡು ರಾಸು ಚಿಕಿತ್ಸಾ ಶಿಬಿರ, ಮೇವು ಅಭಿವೃದ್ಧಿ ಯೋಜನೆ, ರೈತರ ತರಬೇತಿ ಕಾರ್ಯಕ್ರಮ, ಇತರೆ.

  • ಸಂಗ್ರಹ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

4 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

15 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

19 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

1 day ago