Advertisement
MIRROR FOCUS

ಬೆಂಗಳೂರು ಕೃಷಿ ಮೇಳ | ಸಿರಿಧಾನ್ಯ ಬೆಳೆದರಷ್ಟೇ ಸಾಲದು, ಮೌಲ್ಯವರ್ಧನೆಯೂ ಅಗತ್ಯವಿದೆ |

Share

ಸಿರಿಧಾನ್ಯಗಳ ಬಳಕೆ ಬಗ್ಗೆ ಇತ್ತೀಚಿನ ದಿನಗಳಲ್ಲಿ ಅರಿವು ಜಾಸ್ತಿಯಾಗುತ್ತಿದೆ. ಹಾಗೇ ಇದಕ್ಕೆ ವಿವಿಧ ರೀತಿಯಲ್ಲಿ ಮೌಲ್ಯವರ್ಧನೆ ಮಾಡುವ ನಿಟ್ಟಿನಲ್ಲಿ ಅನೇಕ ಪ್ರಯೋಗಗಳನ್ನು ಮಾಡಲಾಗುತ್ತಿದೆ. ರಾಜಧಾನಿ ಬೆಂಗಳೂರು(Bengaluru) ಕೃಷಿ ವಿಶ್ವವಿದ್ಯಾಲಯ(GKVK) ಆವರಣದಲ್ಲಿ ನಡೆಯುತ್ತಿರುವ ಕೃಷಿಮೇಳದಲ್ಲಿ(Krushi Mela)ಸಿರಿಧಾನ್ಯ ಮೇಳ(Millet) ಜನರನ್ನು ಆಕರ್ಷಿಸಿಸುತ್ತಿದೆ. ಆರೋಗ್ಯಕರ ಜೀವನ ಶೈಲಿಗೆ(Healthy Life style) ಸಿರಿಧಾನ್ಯಗಳ ಮಹತ್ವ ತಿಳಿಸುವ ಉದ್ದೇಶದಿಂದ ಈ ಬಾರಿಯ ಕೃಷಿ ಮೇಳದಲ್ಲಿ  ‘ಸಿರಿಧಾನ್ಯ ಆಹಾರ ಮೇಳ’ವನ್ನು ಹಮ್ಮಿಕೊಳ್ಳಲಾಗಿತ್ತು.

ಸುಮಾರು ಸಿರಿಧಾನ್ಯ ಮಳಿಗೆಗಳನ್ನು ಸ್ಥಾಪಿಸಿದ್ದು, ಸ್ವಸಹಾಯ ಸಂಘಗಳು ಸಿರಿಧಾನ್ಯಗಳಿಂದ ತಯಾರಿಸಿರುವ ಇಡ್ಲಿ, ಚಕ್ಕುಲಿ, ಪಿಜಾ, ಕೇಕ್, ಕುಕ್ಕಿಸ್, ಚಾಕೊಲೇಟ್, ಉಂಡೆ ಸೇರಿದಂತೆ ನಾನಾ ಪದಾರ್ಥಗಳು ಆಹಾರ ಪ್ರೇಮಿಗಳನ್ನು ಅಕರ್ಷಿಸಿದವು. ರೈತರು ಬೆಳೆದ ಸಿರಿಧಾನ್ಯ ಬೆಳೆಗೆ ಮಾರುಕಟ್ಟೆ ಕಲ್ಪಿಸಲು ಹಾಗೂ ಆರೋಗ್ಯಕರ ಜೀವನ ಶೈಲಿಗೆ ಸಿರಿಧಾನ್ಯಗಳ ಮಹತ್ವ ತಿಳಿಸುವ ಉದ್ದೇಶದಿಂದ ಕೃಷಿ ಮೇಳದಲ್ಲಿ ಸ್ಥಾಪಿಸಿದ್ದ ಸಿರಿಧಾನ್ಯ ಆಹಾರ ಮೇಳ ಎಲ್ಲರ ಮೆಚ್ಚುಗೆ ಗಳಿಸಿತು.

ಕೃಷಿ ಮೇಳದಲ್ಲಿ ನವೋದ್ಯಮಗಳಿಗೆ ಸಿರಿಧಾನ್ಯದ ಉಪ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಾಡಲು ಪ್ರತ್ಯೇಕ ಮಳಿಗೆಗಳನ್ನು ತೆರೆಯಲಾಗಿದೆ. ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಸಿರಿಧಾನ್ಯ ಉತ್ಪನ್ನ ಉತ್ಪಾದಕರಿಗೆ ಉಚಿತವಾಗಿ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ.

ಶನಿವಾರ ಮುಂಜಾನೆಯಿಂದ ಸಂಜೆವರೆಗೆ ಸಿರಿಧಾನ್ಯದಿಂದ ತಯಾರಿಸಿದ ಪಕೋಡಾ, ಚಕ್ಕುಲಿ, ಬಿಸ್ಕೆಟ್, ಚಾಕೊಲೇಟ್, ಪಿಜ್ಜಾ ಕೇಕ್, ಪೇಸ್ಟರಿ, ನಿಪ್ಪಟ್ಟು, ರಾಗಿ ಲಡ್ಡು, ಸಿಹಿ ತಿನಿಸುಗಳು, ಪಕೋಡಾ, ಮಸಾಲೆ ವಡೆ, ದೋಸೆ, ಪಲಾವ್, ಉಪ್ಪಿಟ್ಟು, ಹಲ್ವಾ, ಅಂಬಲಿ, ಕೇಸರಿ ಬಾತ್, ಉಂಡೆ, ಜಾಮೂನ್, ಕಿಚಡಿ, ಬರ್ಫಿ ಸೇರಿದಂತೆ ನಾನಾ ಬಗೆಯ ತಿನಿಸುಗಳನ್ನು ಗ್ರಾಹಕರ ವೀಕ್ಷಿಸಿ ಖರೀದಿಸಿದರು. ಕೃಷಿ ವಿಶ್ವವಿದ್ಯಾಲಯದ ಆಹಾರ ವಿಜ್ಞಾನ ವಿಭಾಗದ ಮುಖ್ಯಸ್ಥ ಕೆ ಜಿ ವಿಜಯಲಕ್ಷ್ಮಿ ಮಾತನಾಡಿ, 2023ರನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯ ಬೆಳೆಯುವ ರೈತರಿಗೆ ಮಾರುಕಟ್ಟೆ ಒದಗಿಸಲು ಹಾಗೂ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿರಿಧಾನ್ಯ ಮೇಳಕ್ಕೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ಆರೋಗ್ಯದ ಕಣಜ ಸಿರಿಧಾನ್ಯ: ಜೋಳ, ರಾಗಿ, ಸಜ್ಜೆ, ನವಣೆ, ಬರಗು, ಕೊರಲೆ, ಸಾಮೆ, ಊದಲು, ಹಾರಕ 9 ಸಿರಿ ಧಾನ್ಯಗಳು ಆರೋಗ್ಯ ವೃದ್ಧಿಯಲ್ಲಿ ಸಹಕಾರಿ ಆಗಿವೆ. ಸಿರಿಧಾನ್ಯಗಳಲ್ಲಿ ಅಧಿಕ ನಾರಿನಂಶ, ಪೋಷಕಾಂಶ, ಖನಿಜಾಂಶ ಹೇರಳವಾಗಿದೆ. ಇದರಿಂದ ರಕ್ತದೊತ್ತಡ, ಮಧುಮೇಹ, ಬೊಜ್ಜು, ಮಲಬದ್ಧತೆ, ಅಂಡಾಶಯ ಸಮಸ್ಯೆ. ಮುಟ್ಟಿನ ಸಮಸ್ಯೆ, ನರ ದೌರ್ಬಲ್ಯ, ಮೂರ್ಛ ರೋಗ, ರಕ್ತ ಹೀನತೆ, ಲಿವರ್, ಕಿಡ್ನಿ ಸಮಸ್ಯೆ, ಜೀರ್ಣಾಂಗದ ಸಮಸ್ಯೆ, ಹೃದ್ರೋಗ, ಕ್ಯಾನ್ಸರ್ ಸಮಸ್ಯೆ ಸಮಸ್ಯೆ ಇರುವವವರು ನಿತ್ಯ ಸಿರಿಧಾನ್ಯ ಸೇವನೆ ಮಾಡುವುದರಿಂದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಹೊಂದಬಹುದು ಎಂದು ಕೆ ಜಿ ವಿಜಯಲಕ್ಷ್ಮಿ ತಿಳಿಸಿದರು.

  • ಅಂತರ್ಜಾಲ ಮಾಹಿತಿ
At the Krushi Mela held on the premises of Bengaluru Agricultural University (GKVK), the Millet is attracting crowds. With the aim of conveying the importance of cereals for a healthy life style, a 'Cereal Food Fair' was organized in this Krishi Mela.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

40 minutes ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

2 hours ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

23 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

1 day ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

1 day ago