ಕಾರಿನ ಸನ್ರೂಫ್ ಮೂಲಕ ನಿಂತು ಬಾಲಕ ಪ್ರಯಾಣ ಮಾಡುತ್ತಿದ್ದ ವೇಳೆ ರೈಲ್ವೆ ಹೈಟ್ ಬ್ಯಾರಿಯರ್ಗೆ ತಲೆ ಬಡಿದು ಗಂಭೀರ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಜಿಕೆವಿಕೆ ರಸ್ತೆಯಲ್ಲಿ ನಡೆದಿದೆ.
ಪೊಲೀಸ್ ಮಾಹಿತಿ ಪ್ರಕಾರ, ಕಾರಿನಲ್ಲಿ ಸನ್ರೂಫ್ ಮೂಲಕ ನಿಂತಿದ್ದ ಬಾಲಕನಿಗೆ ರೈಲ್ವೆ ಹೈಟ್ ಬ್ಯಾರಿಯರ್ಗೆ ತಲೆ ಬಡಿದು ನೆಲಕ್ಕುರುಳಿದ. ತಕ್ಷಣವೇ ಸ್ಥಳೀಯರು ಮಗುವನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು, ಬಾಲಕನ ತಲೆಗೆ ಗಂಭೀರ ಗಾಯವಾಗಿದೆ. ಸನ್ರೂಫ್ನಲ್ಲಿ ನಿಂತು ಹೊರಗೆ ನೋಡುವುದು ರೋಚಕವಾದರೂ ಜೀವಕ್ಕೆ ಅಪಾಯಕಾರಿಯಾಗಿದೆ. ತಂತಿ, ಬ್ಯಾರಿಯರ್ ಅಥವಾ ಇತರ ಅಡ್ಡಿಗಳಿಂದ ಗಂಭೀರ ಅಪಾಯ ಉಂಟಾಗಬಹುದು, ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪಾಲಕರು ಮಕ್ಕಳನ್ನು ವಾಹನದ ಒಳಗಡೆ ಸುರಕ್ಷಿತವಾಗಿ ಕುಳ್ಳಿರಿಸಬೇಕು, ಸನ್ರೂಫ್ನಲ್ಲಿ ನಿಲ್ಲಿಸಲು ಬಿಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…