ಸುದ್ದಿಗಳು

ತಂಬಾಕು ನಿಯಂತ್ರಣದಲ್ಲಿ ಬೆಂಗಳೂರು ಸಾಧನೆ | ಡಬ್ಲ್ಯುಎಚ್ಒನಿಂದ 1.23 ಕೋಟಿ ರೂ. ಬಹುಮಾನ

Share

ತಂಬಾಕು ನಿಯಂತ್ರಣದಿಂದ ಸಾಂಕ್ರಾಮಿಕ ರೋಗಗಳಲ್ಲದ ಮತ್ತು ಗಾಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಧನೆ ಮಾಡಿ ಗುರುತಿಸಲ್ಪಟ್ಟ ಐದು ಜಾಗತಿಕ ನಗರಗಳಲ್ಲಿ ಬೆಂಗಳೂರು ಕೂಡ ಸ್ಥಾನ ಪಡೆದುಕೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಈ ಜಾಗತಿಕ ಕಾರ್ಯಕ್ರಮದಲ್ಲಿ ಉತ್ತಮ ಸಾಧನೆ ಮಾಡಿದ ಬೆಂಗಳೂರಿಗೆ 1,50,000 ಡಾಲರ್​ ಮೊತ್ತದ ಬಹುಮಾನ ಲಭಿಸಿದೆ.

ಉರುಗ್ವೆಯ ಮಾಂಟೆವಿಡಿಯೊ ಅವರೊಂದಿಗೆ 2023 ರ ಆರೋಗ್ಯಕರ ನಗರಗಳ ಪಾಲುದಾರಿಕೆ ಪ್ರಶಸ್ತಿಯನ್ನು ಬೆಂಗಳೂರು ಬುಧವಾರ ಪಡೆದುಕೊಂಡಿದೆ. ಮೆಕ್ಸಿಕೊ ನಗರ, ಕೆನಡಾದ ವ್ಯಾಂಕೋವರ್ ಮತ್ತು ಗ್ರೀಸ್​ನ ಅಥೆನ್ಸ್​ನ ಲಂಡನ್​ನಲ್ಲಿ ನಡೆದ ಆರೋಗ್ಯಕರ ನಗರ ಶೃಂಗಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಜನರ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಬೀರಿದ ಮತ್ತು ಸಾಂಕ್ರಾಮಿಕವಲ್ಲದ ರೋಗಗಳನ್ನು ತಡೆಯಲು ಸಮರ್ಥನೀಯ ಮತ್ತು ಶಾಶತ್ವವಾದ ಉಪಕ್ರಮಗಳನ್ನು ಕೈಗೊಂಡ ನಗರಗಳನ್ನು ಗುರುತಿಸಲಾಗಿದೆ.

ಕರ್ನಾಟಕ ರಾಜಧಾನಿ ಬೆಂಗಳೂರು ತಂಬಾಕು ನಿಯಂತ್ರಣ, ಅದರಲ್ಲಿಯೂ ಪ್ರಮುಖವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಯಂತ್ರಣ ಮತ್ತು ಸಾರ್ವಜನಿಕ ಧೂಮಪಾನ ನಿಷೇಧಕ್ಕೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಆ ದೇಶಗಳ ಅನುಸಾರ ಸುಧಾರಿಸಲು ಪ್ರಯತ್ನಗಳಿಗಾಗಿ ಬೆಂಗಳೂರಿಗೆ ಪ್ರಶಸ್ತಿ ಲಭಿಸಿದೆ.

ಪಾಲುದಾರಿಕೆಯಲ್ಲಿ ವಿಶ್ವದಾದ್ಯಂತ ಮೇಯರ್‌ಗಳ ಬೆಂಬಲ : ಮೇಯರ್‌ಗಳು ತಮ್ಮ ನಾಗರಿಕರ ಆರೋಗ್ಯವನ್ನು ಹೇಗೆ ರಕ್ಷಿಸಲು ಪ್ರಬಲ ಪ್ರಗತಿಯನ್ನು ಸಾಧಿಸಬಹುದು ಎಂಬುದಕ್ಕೆ ಈ ಐದು ನಗರಗಳು ಸಾಕ್ಷಿಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ  ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧಾನಮ್ ಗೆಬ್ರೆಯೆಸಸ್ ಹೇಳಿದ್ದಾರೆ. ಉತ್ತಮ ಆರೋಗ್ಯಕ್ಕೆ ಉತ್ತೇಜಿಸುವ ಮತ್ತು ಆರೋಗ್ಯ ರಕ್ಷಿಸುವ ನಗರಳನ್ನು ನಿರ್ಮಿಸಲು ವಿಶ್ವದಾದ್ಯಂತ ಮೇಯರ್‌ಗಳನ್ನು ಬೆಂಬಲಿಸುವ ಮೂಲಕ  ಪಾಲುದಾರಿಕೆಯಲ್ಲಿ ಕೆಲಸ ಮಾಡಲು WHO ಬದ್ಧವಾಗಿದೆ ಎಂದು ತಿಳಿಸಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

17 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

1 day ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

1 day ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

1 day ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

2 days ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

2 days ago