ಕಾಡುಮಲ್ಲೇಶ್ವರಂನಲ್ಲಿ ನ.12 ರಿಂದ ಕಡಲೆಕಾಯಿ ಪರಿಷೆ | ಕಡಲೆಕಾಯಿ ಮಾರಾಟಕ್ಕೆ 400 ಮಳಿಗೆ : ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸಕಲ ವ್ಯವಸ್ಥೆ – ಬಿ.ಕೆ. ಶಿವರಾಂ

November 10, 2022
10:43 PM

ಕಾಡು ಮಲ್ಲೇಶ್ವರ ಬಳಗದಿಂದ ಇದೇ 12 ರಿಂದ 14 ರ ವರೆಗೆ ಮೂರು ದಿನಗಳ ಕಾಲ ಮಲ್ಲೇಶ್ವರಂನ ಕಾಡು ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ 6ನೇ ವಿಜೃಂಭಣೆಯ ಕಡಲೆಕಾಯಿ ಪರಿಷೆ ಆಯೋಜಿಸಲಾಗಿದೆ.

ಬೆಂಗಳೂರು ನಗರದ ಜನರಿಗೆ ಗ್ರಾಮೀಣ ಸಂಸ್ಕೃತಿ, ಜೀವನ ಪದ್ಧತಿಯನ್ನು ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ಕಡಲೆಕಾಯಿ ಪರಿಷೆ ಆಯೋಜಿಸುತ್ತಿದ್ದು, ಕಾರ್ತಿಕ ಮಾಸದಲ್ಲಿ ಮೂರು ದಿನಗಳ ಕಾಲ ಅದ್ದೂರಿಯಾಗಿ ಪರಿಷೆ ನಡೆಯಲಿದೆ ಎಂದು ಕಾಡು ಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷ ಬಿ.ಕೆ.ಶಿವರಾಂ ಮತ್ತು ಸಾಮಾಜಿಕ ಕಾರ್ಯಕರ್ತ ಅನೂಪ್ ಅಯ್ಯಂಗಾರ್, ಕಾಡು ಮಲ್ಲೇಶ್ವರ ದೇವಸ್ಥಾನ ಬಳಗದ ಕಾರ್ಯಕರ್ತ ಚಂದ್ರಶೇಖರ ನಾಯ್ಡು ಮಾಹಿತಿ ನೀಡಿದರು.

ಬಿ.ಕೆ. ಶಿವರಾಂ ಮಾತನಾಡಿ, ಆಧುನಿಕ ಬದುಕಿನಲ್ಲಿ ಜಾತ್ರೆ, ಸಂತೆ ಕಣ್ಮರೆಯಾಗುತ್ತಿದ್ದು, ಇದರಿಂದ ಕೃಷಿಕರು ಬೆಳೆದ ವಸ್ತುಗಳ ಮಾರಾಟ ಕುಸಿತವಾಗಿದೆ. ಈ ಬಾರಿ ಆಯೋಜಿಸಿರುವ ಪರಿಷೆಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ರೈತರಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ. ಇದಕ್ಕಾಗಿ 400 ಮಳಿಗೆಗಳಿಗೆ ಅವಕಾಶ ಕಲ್ಪಿಸಿದ್ದು, ರೈತರು ತಾವು ಬೆಳೆದ ಕಡಲೆಕಾಯಿ, ಅವರೆಕಾಯಿ ಮಾರಾಟ ಮಾಡಲು, ಮಂಡ್ಯ ರೈತರಿಗೆ ಬೆಲ್ಲದ ಅಂಗಡಿ ತೆರೆಯಲು, ಎಲ್ಲಾ ಕೃಷಿ ಉತ್ಪನಗಳ ಮಾರಾಟಕ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಅಲೆಮಾರಿ ಜನಾಂಗ, ಬೀದಿ ಬದಿ ವ್ಯಾಪಾರಿಗಳಿಗೂ ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ಮಳಿಗೆಗಳು ಉಚಿತವಾಗಿದೆ. 8ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ ವಿವಿಧ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ತಿಂಡಿ, ತಿನಿಸು ತಯಾರಿಸಲು ಫುಡ್ ಕೋರ್ಟ್ ನಿರ್ಮಿಸಲಾಗುತ್ತಿದೆ. ಕಾಡು ಮಲ್ಲೇಶ್ವರ ದೇವಾಸ್ಥಾನದಲ್ಲಿ ಕಡಲೆಕಾಯಿಯಿಂದ ಆಲಂಕಾರ ಮಾಡಲಾಗುತ್ತಿದೆ. ಜೊತೆಗೆ ಆಂಧ್ರ ಪ್ರದೇಶದ ಓಂಗೋಲ್ ನಿಂದ ಎರಡು ದೇಶೀಯ ಗೂಳಿಗಳನ್ನು ತರಲಾಗಿದೆ. ಈ ಗೂಳಿಗಳನ್ನು ಕಾಡು ಮಲ್ಲೇಶ್ವರದಲ್ಲಿ ಸಾಕಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ
March 17, 2025
6:36 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror