ಕಾಡುಮಲ್ಲೇಶ್ವರಂನಲ್ಲಿ ನ.12 ರಿಂದ ಕಡಲೆಕಾಯಿ ಪರಿಷೆ | ಕಡಲೆಕಾಯಿ ಮಾರಾಟಕ್ಕೆ 400 ಮಳಿಗೆ : ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸಕಲ ವ್ಯವಸ್ಥೆ – ಬಿ.ಕೆ. ಶಿವರಾಂ

November 10, 2022
10:43 PM

ಕಾಡು ಮಲ್ಲೇಶ್ವರ ಬಳಗದಿಂದ ಇದೇ 12 ರಿಂದ 14 ರ ವರೆಗೆ ಮೂರು ದಿನಗಳ ಕಾಲ ಮಲ್ಲೇಶ್ವರಂನ ಕಾಡು ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ 6ನೇ ವಿಜೃಂಭಣೆಯ ಕಡಲೆಕಾಯಿ ಪರಿಷೆ ಆಯೋಜಿಸಲಾಗಿದೆ.

ಬೆಂಗಳೂರು ನಗರದ ಜನರಿಗೆ ಗ್ರಾಮೀಣ ಸಂಸ್ಕೃತಿ, ಜೀವನ ಪದ್ಧತಿಯನ್ನು ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ಕಡಲೆಕಾಯಿ ಪರಿಷೆ ಆಯೋಜಿಸುತ್ತಿದ್ದು, ಕಾರ್ತಿಕ ಮಾಸದಲ್ಲಿ ಮೂರು ದಿನಗಳ ಕಾಲ ಅದ್ದೂರಿಯಾಗಿ ಪರಿಷೆ ನಡೆಯಲಿದೆ ಎಂದು ಕಾಡು ಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷ ಬಿ.ಕೆ.ಶಿವರಾಂ ಮತ್ತು ಸಾಮಾಜಿಕ ಕಾರ್ಯಕರ್ತ ಅನೂಪ್ ಅಯ್ಯಂಗಾರ್, ಕಾಡು ಮಲ್ಲೇಶ್ವರ ದೇವಸ್ಥಾನ ಬಳಗದ ಕಾರ್ಯಕರ್ತ ಚಂದ್ರಶೇಖರ ನಾಯ್ಡು ಮಾಹಿತಿ ನೀಡಿದರು.

ಬಿ.ಕೆ. ಶಿವರಾಂ ಮಾತನಾಡಿ, ಆಧುನಿಕ ಬದುಕಿನಲ್ಲಿ ಜಾತ್ರೆ, ಸಂತೆ ಕಣ್ಮರೆಯಾಗುತ್ತಿದ್ದು, ಇದರಿಂದ ಕೃಷಿಕರು ಬೆಳೆದ ವಸ್ತುಗಳ ಮಾರಾಟ ಕುಸಿತವಾಗಿದೆ. ಈ ಬಾರಿ ಆಯೋಜಿಸಿರುವ ಪರಿಷೆಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ರೈತರಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ. ಇದಕ್ಕಾಗಿ 400 ಮಳಿಗೆಗಳಿಗೆ ಅವಕಾಶ ಕಲ್ಪಿಸಿದ್ದು, ರೈತರು ತಾವು ಬೆಳೆದ ಕಡಲೆಕಾಯಿ, ಅವರೆಕಾಯಿ ಮಾರಾಟ ಮಾಡಲು, ಮಂಡ್ಯ ರೈತರಿಗೆ ಬೆಲ್ಲದ ಅಂಗಡಿ ತೆರೆಯಲು, ಎಲ್ಲಾ ಕೃಷಿ ಉತ್ಪನಗಳ ಮಾರಾಟಕ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಅಲೆಮಾರಿ ಜನಾಂಗ, ಬೀದಿ ಬದಿ ವ್ಯಾಪಾರಿಗಳಿಗೂ ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ಮಳಿಗೆಗಳು ಉಚಿತವಾಗಿದೆ. 8ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ ವಿವಿಧ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ತಿಂಡಿ, ತಿನಿಸು ತಯಾರಿಸಲು ಫುಡ್ ಕೋರ್ಟ್ ನಿರ್ಮಿಸಲಾಗುತ್ತಿದೆ. ಕಾಡು ಮಲ್ಲೇಶ್ವರ ದೇವಾಸ್ಥಾನದಲ್ಲಿ ಕಡಲೆಕಾಯಿಯಿಂದ ಆಲಂಕಾರ ಮಾಡಲಾಗುತ್ತಿದೆ. ಜೊತೆಗೆ ಆಂಧ್ರ ಪ್ರದೇಶದ ಓಂಗೋಲ್ ನಿಂದ ಎರಡು ದೇಶೀಯ ಗೂಳಿಗಳನ್ನು ತರಲಾಗಿದೆ. ಈ ಗೂಳಿಗಳನ್ನು ಕಾಡು ಮಲ್ಲೇಶ್ವರದಲ್ಲಿ ಸಾಕಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror