ಕಾಡುಮಲ್ಲೇಶ್ವರಂನಲ್ಲಿ ನ.12 ರಿಂದ ಕಡಲೆಕಾಯಿ ಪರಿಷೆ | ಕಡಲೆಕಾಯಿ ಮಾರಾಟಕ್ಕೆ 400 ಮಳಿಗೆ : ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸಕಲ ವ್ಯವಸ್ಥೆ – ಬಿ.ಕೆ. ಶಿವರಾಂ

November 10, 2022
10:43 PM

ಕಾಡು ಮಲ್ಲೇಶ್ವರ ಬಳಗದಿಂದ ಇದೇ 12 ರಿಂದ 14 ರ ವರೆಗೆ ಮೂರು ದಿನಗಳ ಕಾಲ ಮಲ್ಲೇಶ್ವರಂನ ಕಾಡು ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ 6ನೇ ವಿಜೃಂಭಣೆಯ ಕಡಲೆಕಾಯಿ ಪರಿಷೆ ಆಯೋಜಿಸಲಾಗಿದೆ.

ಬೆಂಗಳೂರು ನಗರದ ಜನರಿಗೆ ಗ್ರಾಮೀಣ ಸಂಸ್ಕೃತಿ, ಜೀವನ ಪದ್ಧತಿಯನ್ನು ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ಕಡಲೆಕಾಯಿ ಪರಿಷೆ ಆಯೋಜಿಸುತ್ತಿದ್ದು, ಕಾರ್ತಿಕ ಮಾಸದಲ್ಲಿ ಮೂರು ದಿನಗಳ ಕಾಲ ಅದ್ದೂರಿಯಾಗಿ ಪರಿಷೆ ನಡೆಯಲಿದೆ ಎಂದು ಕಾಡು ಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷ ಬಿ.ಕೆ.ಶಿವರಾಂ ಮತ್ತು ಸಾಮಾಜಿಕ ಕಾರ್ಯಕರ್ತ ಅನೂಪ್ ಅಯ್ಯಂಗಾರ್, ಕಾಡು ಮಲ್ಲೇಶ್ವರ ದೇವಸ್ಥಾನ ಬಳಗದ ಕಾರ್ಯಕರ್ತ ಚಂದ್ರಶೇಖರ ನಾಯ್ಡು ಮಾಹಿತಿ ನೀಡಿದರು.

ಬಿ.ಕೆ. ಶಿವರಾಂ ಮಾತನಾಡಿ, ಆಧುನಿಕ ಬದುಕಿನಲ್ಲಿ ಜಾತ್ರೆ, ಸಂತೆ ಕಣ್ಮರೆಯಾಗುತ್ತಿದ್ದು, ಇದರಿಂದ ಕೃಷಿಕರು ಬೆಳೆದ ವಸ್ತುಗಳ ಮಾರಾಟ ಕುಸಿತವಾಗಿದೆ. ಈ ಬಾರಿ ಆಯೋಜಿಸಿರುವ ಪರಿಷೆಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ರೈತರಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ. ಇದಕ್ಕಾಗಿ 400 ಮಳಿಗೆಗಳಿಗೆ ಅವಕಾಶ ಕಲ್ಪಿಸಿದ್ದು, ರೈತರು ತಾವು ಬೆಳೆದ ಕಡಲೆಕಾಯಿ, ಅವರೆಕಾಯಿ ಮಾರಾಟ ಮಾಡಲು, ಮಂಡ್ಯ ರೈತರಿಗೆ ಬೆಲ್ಲದ ಅಂಗಡಿ ತೆರೆಯಲು, ಎಲ್ಲಾ ಕೃಷಿ ಉತ್ಪನಗಳ ಮಾರಾಟಕ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಅಲೆಮಾರಿ ಜನಾಂಗ, ಬೀದಿ ಬದಿ ವ್ಯಾಪಾರಿಗಳಿಗೂ ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ಮಳಿಗೆಗಳು ಉಚಿತವಾಗಿದೆ. 8ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ ವಿವಿಧ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ತಿಂಡಿ, ತಿನಿಸು ತಯಾರಿಸಲು ಫುಡ್ ಕೋರ್ಟ್ ನಿರ್ಮಿಸಲಾಗುತ್ತಿದೆ. ಕಾಡು ಮಲ್ಲೇಶ್ವರ ದೇವಾಸ್ಥಾನದಲ್ಲಿ ಕಡಲೆಕಾಯಿಯಿಂದ ಆಲಂಕಾರ ಮಾಡಲಾಗುತ್ತಿದೆ. ಜೊತೆಗೆ ಆಂಧ್ರ ಪ್ರದೇಶದ ಓಂಗೋಲ್ ನಿಂದ ಎರಡು ದೇಶೀಯ ಗೂಳಿಗಳನ್ನು ತರಲಾಗಿದೆ. ಈ ಗೂಳಿಗಳನ್ನು ಕಾಡು ಮಲ್ಲೇಶ್ವರದಲ್ಲಿ ಸಾಕಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror