ಸುದ್ದಿಗಳು

ಕಾಡುಮಲ್ಲೇಶ್ವರಂನಲ್ಲಿ ನ.12 ರಿಂದ ಕಡಲೆಕಾಯಿ ಪರಿಷೆ | ಕಡಲೆಕಾಯಿ ಮಾರಾಟಕ್ಕೆ 400 ಮಳಿಗೆ : ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸಕಲ ವ್ಯವಸ್ಥೆ – ಬಿ.ಕೆ. ಶಿವರಾಂ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಡು ಮಲ್ಲೇಶ್ವರ ಬಳಗದಿಂದ ಇದೇ 12 ರಿಂದ 14 ರ ವರೆಗೆ ಮೂರು ದಿನಗಳ ಕಾಲ ಮಲ್ಲೇಶ್ವರಂನ ಕಾಡು ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ 6ನೇ ವಿಜೃಂಭಣೆಯ ಕಡಲೆಕಾಯಿ ಪರಿಷೆ ಆಯೋಜಿಸಲಾಗಿದೆ.

Advertisement

ಬೆಂಗಳೂರು ನಗರದ ಜನರಿಗೆ ಗ್ರಾಮೀಣ ಸಂಸ್ಕೃತಿ, ಜೀವನ ಪದ್ಧತಿಯನ್ನು ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ಕಡಲೆಕಾಯಿ ಪರಿಷೆ ಆಯೋಜಿಸುತ್ತಿದ್ದು, ಕಾರ್ತಿಕ ಮಾಸದಲ್ಲಿ ಮೂರು ದಿನಗಳ ಕಾಲ ಅದ್ದೂರಿಯಾಗಿ ಪರಿಷೆ ನಡೆಯಲಿದೆ ಎಂದು ಕಾಡು ಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷ ಬಿ.ಕೆ.ಶಿವರಾಂ ಮತ್ತು ಸಾಮಾಜಿಕ ಕಾರ್ಯಕರ್ತ ಅನೂಪ್ ಅಯ್ಯಂಗಾರ್, ಕಾಡು ಮಲ್ಲೇಶ್ವರ ದೇವಸ್ಥಾನ ಬಳಗದ ಕಾರ್ಯಕರ್ತ ಚಂದ್ರಶೇಖರ ನಾಯ್ಡು ಮಾಹಿತಿ ನೀಡಿದರು.

ಬಿ.ಕೆ. ಶಿವರಾಂ ಮಾತನಾಡಿ, ಆಧುನಿಕ ಬದುಕಿನಲ್ಲಿ ಜಾತ್ರೆ, ಸಂತೆ ಕಣ್ಮರೆಯಾಗುತ್ತಿದ್ದು, ಇದರಿಂದ ಕೃಷಿಕರು ಬೆಳೆದ ವಸ್ತುಗಳ ಮಾರಾಟ ಕುಸಿತವಾಗಿದೆ. ಈ ಬಾರಿ ಆಯೋಜಿಸಿರುವ ಪರಿಷೆಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ರೈತರಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ. ಇದಕ್ಕಾಗಿ 400 ಮಳಿಗೆಗಳಿಗೆ ಅವಕಾಶ ಕಲ್ಪಿಸಿದ್ದು, ರೈತರು ತಾವು ಬೆಳೆದ ಕಡಲೆಕಾಯಿ, ಅವರೆಕಾಯಿ ಮಾರಾಟ ಮಾಡಲು, ಮಂಡ್ಯ ರೈತರಿಗೆ ಬೆಲ್ಲದ ಅಂಗಡಿ ತೆರೆಯಲು, ಎಲ್ಲಾ ಕೃಷಿ ಉತ್ಪನಗಳ ಮಾರಾಟಕ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಅಲೆಮಾರಿ ಜನಾಂಗ, ಬೀದಿ ಬದಿ ವ್ಯಾಪಾರಿಗಳಿಗೂ ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ಮಳಿಗೆಗಳು ಉಚಿತವಾಗಿದೆ. 8ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ ವಿವಿಧ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ತಿಂಡಿ, ತಿನಿಸು ತಯಾರಿಸಲು ಫುಡ್ ಕೋರ್ಟ್ ನಿರ್ಮಿಸಲಾಗುತ್ತಿದೆ. ಕಾಡು ಮಲ್ಲೇಶ್ವರ ದೇವಾಸ್ಥಾನದಲ್ಲಿ ಕಡಲೆಕಾಯಿಯಿಂದ ಆಲಂಕಾರ ಮಾಡಲಾಗುತ್ತಿದೆ. ಜೊತೆಗೆ ಆಂಧ್ರ ಪ್ರದೇಶದ ಓಂಗೋಲ್ ನಿಂದ ಎರಡು ದೇಶೀಯ ಗೂಳಿಗಳನ್ನು ತರಲಾಗಿದೆ. ಈ ಗೂಳಿಗಳನ್ನು ಕಾಡು ಮಲ್ಲೇಶ್ವರದಲ್ಲಿ ಸಾಕಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

29 minutes ago

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

7 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

14 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

1 day ago