Advertisement
ಸುದ್ದಿಗಳು

ಕಾಡುಮಲ್ಲೇಶ್ವರಂನಲ್ಲಿ ನ.12 ರಿಂದ ಕಡಲೆಕಾಯಿ ಪರಿಷೆ | ಕಡಲೆಕಾಯಿ ಮಾರಾಟಕ್ಕೆ 400 ಮಳಿಗೆ : ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸಕಲ ವ್ಯವಸ್ಥೆ – ಬಿ.ಕೆ. ಶಿವರಾಂ

Share

ಕಾಡು ಮಲ್ಲೇಶ್ವರ ಬಳಗದಿಂದ ಇದೇ 12 ರಿಂದ 14 ರ ವರೆಗೆ ಮೂರು ದಿನಗಳ ಕಾಲ ಮಲ್ಲೇಶ್ವರಂನ ಕಾಡು ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ 6ನೇ ವಿಜೃಂಭಣೆಯ ಕಡಲೆಕಾಯಿ ಪರಿಷೆ ಆಯೋಜಿಸಲಾಗಿದೆ.

ಬೆಂಗಳೂರು ನಗರದ ಜನರಿಗೆ ಗ್ರಾಮೀಣ ಸಂಸ್ಕೃತಿ, ಜೀವನ ಪದ್ಧತಿಯನ್ನು ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ಕಡಲೆಕಾಯಿ ಪರಿಷೆ ಆಯೋಜಿಸುತ್ತಿದ್ದು, ಕಾರ್ತಿಕ ಮಾಸದಲ್ಲಿ ಮೂರು ದಿನಗಳ ಕಾಲ ಅದ್ದೂರಿಯಾಗಿ ಪರಿಷೆ ನಡೆಯಲಿದೆ ಎಂದು ಕಾಡು ಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷ ಬಿ.ಕೆ.ಶಿವರಾಂ ಮತ್ತು ಸಾಮಾಜಿಕ ಕಾರ್ಯಕರ್ತ ಅನೂಪ್ ಅಯ್ಯಂಗಾರ್, ಕಾಡು ಮಲ್ಲೇಶ್ವರ ದೇವಸ್ಥಾನ ಬಳಗದ ಕಾರ್ಯಕರ್ತ ಚಂದ್ರಶೇಖರ ನಾಯ್ಡು ಮಾಹಿತಿ ನೀಡಿದರು.

ಬಿ.ಕೆ. ಶಿವರಾಂ ಮಾತನಾಡಿ, ಆಧುನಿಕ ಬದುಕಿನಲ್ಲಿ ಜಾತ್ರೆ, ಸಂತೆ ಕಣ್ಮರೆಯಾಗುತ್ತಿದ್ದು, ಇದರಿಂದ ಕೃಷಿಕರು ಬೆಳೆದ ವಸ್ತುಗಳ ಮಾರಾಟ ಕುಸಿತವಾಗಿದೆ. ಈ ಬಾರಿ ಆಯೋಜಿಸಿರುವ ಪರಿಷೆಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ರೈತರಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ. ಇದಕ್ಕಾಗಿ 400 ಮಳಿಗೆಗಳಿಗೆ ಅವಕಾಶ ಕಲ್ಪಿಸಿದ್ದು, ರೈತರು ತಾವು ಬೆಳೆದ ಕಡಲೆಕಾಯಿ, ಅವರೆಕಾಯಿ ಮಾರಾಟ ಮಾಡಲು, ಮಂಡ್ಯ ರೈತರಿಗೆ ಬೆಲ್ಲದ ಅಂಗಡಿ ತೆರೆಯಲು, ಎಲ್ಲಾ ಕೃಷಿ ಉತ್ಪನಗಳ ಮಾರಾಟಕ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಅಲೆಮಾರಿ ಜನಾಂಗ, ಬೀದಿ ಬದಿ ವ್ಯಾಪಾರಿಗಳಿಗೂ ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ಮಳಿಗೆಗಳು ಉಚಿತವಾಗಿದೆ. 8ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ ವಿವಿಧ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ತಿಂಡಿ, ತಿನಿಸು ತಯಾರಿಸಲು ಫುಡ್ ಕೋರ್ಟ್ ನಿರ್ಮಿಸಲಾಗುತ್ತಿದೆ. ಕಾಡು ಮಲ್ಲೇಶ್ವರ ದೇವಾಸ್ಥಾನದಲ್ಲಿ ಕಡಲೆಕಾಯಿಯಿಂದ ಆಲಂಕಾರ ಮಾಡಲಾಗುತ್ತಿದೆ. ಜೊತೆಗೆ ಆಂಧ್ರ ಪ್ರದೇಶದ ಓಂಗೋಲ್ ನಿಂದ ಎರಡು ದೇಶೀಯ ಗೂಳಿಗಳನ್ನು ತರಲಾಗಿದೆ. ಈ ಗೂಳಿಗಳನ್ನು ಕಾಡು ಮಲ್ಲೇಶ್ವರದಲ್ಲಿ ಸಾಕಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

5 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

18 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago