ಸುದ್ದಿಗಳು

ಕಾಡುಮಲ್ಲೇಶ್ವರಂನಲ್ಲಿ ನ.12 ರಿಂದ ಕಡಲೆಕಾಯಿ ಪರಿಷೆ | ಕಡಲೆಕಾಯಿ ಮಾರಾಟಕ್ಕೆ 400 ಮಳಿಗೆ : ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸಕಲ ವ್ಯವಸ್ಥೆ – ಬಿ.ಕೆ. ಶಿವರಾಂ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಡು ಮಲ್ಲೇಶ್ವರ ಬಳಗದಿಂದ ಇದೇ 12 ರಿಂದ 14 ರ ವರೆಗೆ ಮೂರು ದಿನಗಳ ಕಾಲ ಮಲ್ಲೇಶ್ವರಂನ ಕಾಡು ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ 6ನೇ ವಿಜೃಂಭಣೆಯ ಕಡಲೆಕಾಯಿ ಪರಿಷೆ ಆಯೋಜಿಸಲಾಗಿದೆ.

Advertisement

ಬೆಂಗಳೂರು ನಗರದ ಜನರಿಗೆ ಗ್ರಾಮೀಣ ಸಂಸ್ಕೃತಿ, ಜೀವನ ಪದ್ಧತಿಯನ್ನು ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ಕಡಲೆಕಾಯಿ ಪರಿಷೆ ಆಯೋಜಿಸುತ್ತಿದ್ದು, ಕಾರ್ತಿಕ ಮಾಸದಲ್ಲಿ ಮೂರು ದಿನಗಳ ಕಾಲ ಅದ್ದೂರಿಯಾಗಿ ಪರಿಷೆ ನಡೆಯಲಿದೆ ಎಂದು ಕಾಡು ಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷ ಬಿ.ಕೆ.ಶಿವರಾಂ ಮತ್ತು ಸಾಮಾಜಿಕ ಕಾರ್ಯಕರ್ತ ಅನೂಪ್ ಅಯ್ಯಂಗಾರ್, ಕಾಡು ಮಲ್ಲೇಶ್ವರ ದೇವಸ್ಥಾನ ಬಳಗದ ಕಾರ್ಯಕರ್ತ ಚಂದ್ರಶೇಖರ ನಾಯ್ಡು ಮಾಹಿತಿ ನೀಡಿದರು.

ಬಿ.ಕೆ. ಶಿವರಾಂ ಮಾತನಾಡಿ, ಆಧುನಿಕ ಬದುಕಿನಲ್ಲಿ ಜಾತ್ರೆ, ಸಂತೆ ಕಣ್ಮರೆಯಾಗುತ್ತಿದ್ದು, ಇದರಿಂದ ಕೃಷಿಕರು ಬೆಳೆದ ವಸ್ತುಗಳ ಮಾರಾಟ ಕುಸಿತವಾಗಿದೆ. ಈ ಬಾರಿ ಆಯೋಜಿಸಿರುವ ಪರಿಷೆಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ರೈತರಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ. ಇದಕ್ಕಾಗಿ 400 ಮಳಿಗೆಗಳಿಗೆ ಅವಕಾಶ ಕಲ್ಪಿಸಿದ್ದು, ರೈತರು ತಾವು ಬೆಳೆದ ಕಡಲೆಕಾಯಿ, ಅವರೆಕಾಯಿ ಮಾರಾಟ ಮಾಡಲು, ಮಂಡ್ಯ ರೈತರಿಗೆ ಬೆಲ್ಲದ ಅಂಗಡಿ ತೆರೆಯಲು, ಎಲ್ಲಾ ಕೃಷಿ ಉತ್ಪನಗಳ ಮಾರಾಟಕ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಅಲೆಮಾರಿ ಜನಾಂಗ, ಬೀದಿ ಬದಿ ವ್ಯಾಪಾರಿಗಳಿಗೂ ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ಮಳಿಗೆಗಳು ಉಚಿತವಾಗಿದೆ. 8ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ ವಿವಿಧ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ತಿಂಡಿ, ತಿನಿಸು ತಯಾರಿಸಲು ಫುಡ್ ಕೋರ್ಟ್ ನಿರ್ಮಿಸಲಾಗುತ್ತಿದೆ. ಕಾಡು ಮಲ್ಲೇಶ್ವರ ದೇವಾಸ್ಥಾನದಲ್ಲಿ ಕಡಲೆಕಾಯಿಯಿಂದ ಆಲಂಕಾರ ಮಾಡಲಾಗುತ್ತಿದೆ. ಜೊತೆಗೆ ಆಂಧ್ರ ಪ್ರದೇಶದ ಓಂಗೋಲ್ ನಿಂದ ಎರಡು ದೇಶೀಯ ಗೂಳಿಗಳನ್ನು ತರಲಾಗಿದೆ. ಈ ಗೂಳಿಗಳನ್ನು ಕಾಡು ಮಲ್ಲೇಶ್ವರದಲ್ಲಿ ಸಾಕಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ

ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ  ಉತ್ತರ ಕರ್ನಾಟಕ ಹಾಗೂ  ದಕ್ಷಿಣ ಕರ್ನಾಟಕದಲ್ಲಿ …

30 minutes ago

ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ

ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…

43 minutes ago

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …

49 minutes ago

ಆರೋಗ್ಯದಲ್ಲಿ ಈ ರಾಶಿಯವರಿಗೆ ಆಹಾರದ ಕ್ರಮದಿಂದ ಲಾಭ

ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…

1 hour ago

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ | ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…

9 hours ago

ಹೃದಯ ಸಂಬಂಧಿ ಕಾಯಿಲೆ ಆತಂಕ | ಹಾಸನ ಜಿಲ್ಲೆಯಲ್ಲಿ 1 -10 ನೇ ತರಗತಿ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ

ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ…

9 hours ago