Advertisement
ಸುದ್ದಿಗಳು

ಕಾಡುಮಲ್ಲೇಶ್ವರಂನಲ್ಲಿ ನ.12 ರಿಂದ ಕಡಲೆಕಾಯಿ ಪರಿಷೆ | ಕಡಲೆಕಾಯಿ ಮಾರಾಟಕ್ಕೆ 400 ಮಳಿಗೆ : ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸಕಲ ವ್ಯವಸ್ಥೆ – ಬಿ.ಕೆ. ಶಿವರಾಂ

Share

ಕಾಡು ಮಲ್ಲೇಶ್ವರ ಬಳಗದಿಂದ ಇದೇ 12 ರಿಂದ 14 ರ ವರೆಗೆ ಮೂರು ದಿನಗಳ ಕಾಲ ಮಲ್ಲೇಶ್ವರಂನ ಕಾಡು ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ 6ನೇ ವಿಜೃಂಭಣೆಯ ಕಡಲೆಕಾಯಿ ಪರಿಷೆ ಆಯೋಜಿಸಲಾಗಿದೆ.

ಬೆಂಗಳೂರು ನಗರದ ಜನರಿಗೆ ಗ್ರಾಮೀಣ ಸಂಸ್ಕೃತಿ, ಜೀವನ ಪದ್ಧತಿಯನ್ನು ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ಕಡಲೆಕಾಯಿ ಪರಿಷೆ ಆಯೋಜಿಸುತ್ತಿದ್ದು, ಕಾರ್ತಿಕ ಮಾಸದಲ್ಲಿ ಮೂರು ದಿನಗಳ ಕಾಲ ಅದ್ದೂರಿಯಾಗಿ ಪರಿಷೆ ನಡೆಯಲಿದೆ ಎಂದು ಕಾಡು ಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷ ಬಿ.ಕೆ.ಶಿವರಾಂ ಮತ್ತು ಸಾಮಾಜಿಕ ಕಾರ್ಯಕರ್ತ ಅನೂಪ್ ಅಯ್ಯಂಗಾರ್, ಕಾಡು ಮಲ್ಲೇಶ್ವರ ದೇವಸ್ಥಾನ ಬಳಗದ ಕಾರ್ಯಕರ್ತ ಚಂದ್ರಶೇಖರ ನಾಯ್ಡು ಮಾಹಿತಿ ನೀಡಿದರು.

ಬಿ.ಕೆ. ಶಿವರಾಂ ಮಾತನಾಡಿ, ಆಧುನಿಕ ಬದುಕಿನಲ್ಲಿ ಜಾತ್ರೆ, ಸಂತೆ ಕಣ್ಮರೆಯಾಗುತ್ತಿದ್ದು, ಇದರಿಂದ ಕೃಷಿಕರು ಬೆಳೆದ ವಸ್ತುಗಳ ಮಾರಾಟ ಕುಸಿತವಾಗಿದೆ. ಈ ಬಾರಿ ಆಯೋಜಿಸಿರುವ ಪರಿಷೆಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ರೈತರಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ. ಇದಕ್ಕಾಗಿ 400 ಮಳಿಗೆಗಳಿಗೆ ಅವಕಾಶ ಕಲ್ಪಿಸಿದ್ದು, ರೈತರು ತಾವು ಬೆಳೆದ ಕಡಲೆಕಾಯಿ, ಅವರೆಕಾಯಿ ಮಾರಾಟ ಮಾಡಲು, ಮಂಡ್ಯ ರೈತರಿಗೆ ಬೆಲ್ಲದ ಅಂಗಡಿ ತೆರೆಯಲು, ಎಲ್ಲಾ ಕೃಷಿ ಉತ್ಪನಗಳ ಮಾರಾಟಕ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಅಲೆಮಾರಿ ಜನಾಂಗ, ಬೀದಿ ಬದಿ ವ್ಯಾಪಾರಿಗಳಿಗೂ ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ಮಳಿಗೆಗಳು ಉಚಿತವಾಗಿದೆ. 8ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ ವಿವಿಧ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ತಿಂಡಿ, ತಿನಿಸು ತಯಾರಿಸಲು ಫುಡ್ ಕೋರ್ಟ್ ನಿರ್ಮಿಸಲಾಗುತ್ತಿದೆ. ಕಾಡು ಮಲ್ಲೇಶ್ವರ ದೇವಾಸ್ಥಾನದಲ್ಲಿ ಕಡಲೆಕಾಯಿಯಿಂದ ಆಲಂಕಾರ ಮಾಡಲಾಗುತ್ತಿದೆ. ಜೊತೆಗೆ ಆಂಧ್ರ ಪ್ರದೇಶದ ಓಂಗೋಲ್ ನಿಂದ ಎರಡು ದೇಶೀಯ ಗೂಳಿಗಳನ್ನು ತರಲಾಗಿದೆ. ಈ ಗೂಳಿಗಳನ್ನು ಕಾಡು ಮಲ್ಲೇಶ್ವರದಲ್ಲಿ ಸಾಕಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

11 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

20 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

20 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

21 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago