Advertisement
ಸುದ್ದಿಗಳು

ಕಾಡುಮಲ್ಲೇಶ್ವರಂನಲ್ಲಿ ನ.12 ರಿಂದ ಕಡಲೆಕಾಯಿ ಪರಿಷೆ | ಕಡಲೆಕಾಯಿ ಮಾರಾಟಕ್ಕೆ 400 ಮಳಿಗೆ : ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸಕಲ ವ್ಯವಸ್ಥೆ – ಬಿ.ಕೆ. ಶಿವರಾಂ

Share

ಕಾಡು ಮಲ್ಲೇಶ್ವರ ಬಳಗದಿಂದ ಇದೇ 12 ರಿಂದ 14 ರ ವರೆಗೆ ಮೂರು ದಿನಗಳ ಕಾಲ ಮಲ್ಲೇಶ್ವರಂನ ಕಾಡು ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ 6ನೇ ವಿಜೃಂಭಣೆಯ ಕಡಲೆಕಾಯಿ ಪರಿಷೆ ಆಯೋಜಿಸಲಾಗಿದೆ.

ಬೆಂಗಳೂರು ನಗರದ ಜನರಿಗೆ ಗ್ರಾಮೀಣ ಸಂಸ್ಕೃತಿ, ಜೀವನ ಪದ್ಧತಿಯನ್ನು ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ಕಡಲೆಕಾಯಿ ಪರಿಷೆ ಆಯೋಜಿಸುತ್ತಿದ್ದು, ಕಾರ್ತಿಕ ಮಾಸದಲ್ಲಿ ಮೂರು ದಿನಗಳ ಕಾಲ ಅದ್ದೂರಿಯಾಗಿ ಪರಿಷೆ ನಡೆಯಲಿದೆ ಎಂದು ಕಾಡು ಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷ ಬಿ.ಕೆ.ಶಿವರಾಂ ಮತ್ತು ಸಾಮಾಜಿಕ ಕಾರ್ಯಕರ್ತ ಅನೂಪ್ ಅಯ್ಯಂಗಾರ್, ಕಾಡು ಮಲ್ಲೇಶ್ವರ ದೇವಸ್ಥಾನ ಬಳಗದ ಕಾರ್ಯಕರ್ತ ಚಂದ್ರಶೇಖರ ನಾಯ್ಡು ಮಾಹಿತಿ ನೀಡಿದರು.

ಬಿ.ಕೆ. ಶಿವರಾಂ ಮಾತನಾಡಿ, ಆಧುನಿಕ ಬದುಕಿನಲ್ಲಿ ಜಾತ್ರೆ, ಸಂತೆ ಕಣ್ಮರೆಯಾಗುತ್ತಿದ್ದು, ಇದರಿಂದ ಕೃಷಿಕರು ಬೆಳೆದ ವಸ್ತುಗಳ ಮಾರಾಟ ಕುಸಿತವಾಗಿದೆ. ಈ ಬಾರಿ ಆಯೋಜಿಸಿರುವ ಪರಿಷೆಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ರೈತರಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ. ಇದಕ್ಕಾಗಿ 400 ಮಳಿಗೆಗಳಿಗೆ ಅವಕಾಶ ಕಲ್ಪಿಸಿದ್ದು, ರೈತರು ತಾವು ಬೆಳೆದ ಕಡಲೆಕಾಯಿ, ಅವರೆಕಾಯಿ ಮಾರಾಟ ಮಾಡಲು, ಮಂಡ್ಯ ರೈತರಿಗೆ ಬೆಲ್ಲದ ಅಂಗಡಿ ತೆರೆಯಲು, ಎಲ್ಲಾ ಕೃಷಿ ಉತ್ಪನಗಳ ಮಾರಾಟಕ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಅಲೆಮಾರಿ ಜನಾಂಗ, ಬೀದಿ ಬದಿ ವ್ಯಾಪಾರಿಗಳಿಗೂ ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ಮಳಿಗೆಗಳು ಉಚಿತವಾಗಿದೆ. 8ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ ವಿವಿಧ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ತಿಂಡಿ, ತಿನಿಸು ತಯಾರಿಸಲು ಫುಡ್ ಕೋರ್ಟ್ ನಿರ್ಮಿಸಲಾಗುತ್ತಿದೆ. ಕಾಡು ಮಲ್ಲೇಶ್ವರ ದೇವಾಸ್ಥಾನದಲ್ಲಿ ಕಡಲೆಕಾಯಿಯಿಂದ ಆಲಂಕಾರ ಮಾಡಲಾಗುತ್ತಿದೆ. ಜೊತೆಗೆ ಆಂಧ್ರ ಪ್ರದೇಶದ ಓಂಗೋಲ್ ನಿಂದ ಎರಡು ದೇಶೀಯ ಗೂಳಿಗಳನ್ನು ತರಲಾಗಿದೆ. ಈ ಗೂಳಿಗಳನ್ನು ಕಾಡು ಮಲ್ಲೇಶ್ವರದಲ್ಲಿ ಸಾಕಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

7 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

7 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

14 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

16 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

23 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

1 day ago