ಕಾಡು ಮಲ್ಲೇಶ್ವರ ಬಳಗದಿಂದ ಇದೇ 12 ರಿಂದ 14 ರ ವರೆಗೆ ಮೂರು ದಿನಗಳ ಕಾಲ ಮಲ್ಲೇಶ್ವರಂನ ಕಾಡು ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ 6ನೇ ವಿಜೃಂಭಣೆಯ ಕಡಲೆಕಾಯಿ ಪರಿಷೆ ಆಯೋಜಿಸಲಾಗಿದೆ.
ಬೆಂಗಳೂರು ನಗರದ ಜನರಿಗೆ ಗ್ರಾಮೀಣ ಸಂಸ್ಕೃತಿ, ಜೀವನ ಪದ್ಧತಿಯನ್ನು ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ಕಡಲೆಕಾಯಿ ಪರಿಷೆ ಆಯೋಜಿಸುತ್ತಿದ್ದು, ಕಾರ್ತಿಕ ಮಾಸದಲ್ಲಿ ಮೂರು ದಿನಗಳ ಕಾಲ ಅದ್ದೂರಿಯಾಗಿ ಪರಿಷೆ ನಡೆಯಲಿದೆ ಎಂದು ಕಾಡು ಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷ ಬಿ.ಕೆ.ಶಿವರಾಂ ಮತ್ತು ಸಾಮಾಜಿಕ ಕಾರ್ಯಕರ್ತ ಅನೂಪ್ ಅಯ್ಯಂಗಾರ್, ಕಾಡು ಮಲ್ಲೇಶ್ವರ ದೇವಸ್ಥಾನ ಬಳಗದ ಕಾರ್ಯಕರ್ತ ಚಂದ್ರಶೇಖರ ನಾಯ್ಡು ಮಾಹಿತಿ ನೀಡಿದರು.
ಬಿ.ಕೆ. ಶಿವರಾಂ ಮಾತನಾಡಿ, ಆಧುನಿಕ ಬದುಕಿನಲ್ಲಿ ಜಾತ್ರೆ, ಸಂತೆ ಕಣ್ಮರೆಯಾಗುತ್ತಿದ್ದು, ಇದರಿಂದ ಕೃಷಿಕರು ಬೆಳೆದ ವಸ್ತುಗಳ ಮಾರಾಟ ಕುಸಿತವಾಗಿದೆ. ಈ ಬಾರಿ ಆಯೋಜಿಸಿರುವ ಪರಿಷೆಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ರೈತರಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ. ಇದಕ್ಕಾಗಿ 400 ಮಳಿಗೆಗಳಿಗೆ ಅವಕಾಶ ಕಲ್ಪಿಸಿದ್ದು, ರೈತರು ತಾವು ಬೆಳೆದ ಕಡಲೆಕಾಯಿ, ಅವರೆಕಾಯಿ ಮಾರಾಟ ಮಾಡಲು, ಮಂಡ್ಯ ರೈತರಿಗೆ ಬೆಲ್ಲದ ಅಂಗಡಿ ತೆರೆಯಲು, ಎಲ್ಲಾ ಕೃಷಿ ಉತ್ಪನಗಳ ಮಾರಾಟಕ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಅಲೆಮಾರಿ ಜನಾಂಗ, ಬೀದಿ ಬದಿ ವ್ಯಾಪಾರಿಗಳಿಗೂ ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ಮಳಿಗೆಗಳು ಉಚಿತವಾಗಿದೆ. 8ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ ವಿವಿಧ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ತಿಂಡಿ, ತಿನಿಸು ತಯಾರಿಸಲು ಫುಡ್ ಕೋರ್ಟ್ ನಿರ್ಮಿಸಲಾಗುತ್ತಿದೆ. ಕಾಡು ಮಲ್ಲೇಶ್ವರ ದೇವಾಸ್ಥಾನದಲ್ಲಿ ಕಡಲೆಕಾಯಿಯಿಂದ ಆಲಂಕಾರ ಮಾಡಲಾಗುತ್ತಿದೆ. ಜೊತೆಗೆ ಆಂಧ್ರ ಪ್ರದೇಶದ ಓಂಗೋಲ್ ನಿಂದ ಎರಡು ದೇಶೀಯ ಗೂಳಿಗಳನ್ನು ತರಲಾಗಿದೆ. ಈ ಗೂಳಿಗಳನ್ನು ಕಾಡು ಮಲ್ಲೇಶ್ವರದಲ್ಲಿ ಸಾಕಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…