ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕೈಗಾರಿಕಾ ತ್ಯಾಜ್ಯಗಳಿಂದಾಗಿ ಕೆಲವು ಗ್ರಾಮಗಳ ಕೆರೆಗಳು ಕಲುಷಿತಗೊಂಡಿರುವ ಕುರಿತು ಬಂದಿರುವ ದೂರುಗಳು ಮತ್ತು ವರದಿಗಳ ಆಧಾರದಲ್ಲಿ ಲೋಕಾಯುಕ್ತ ಕಾಯ್ದೆ ಅಡಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಕೈಗಾರಿಕಾ ತ್ಯಾಜ್ಯ ನೀರನ್ನು ಕೆರೆಗಳಿಗೆ ಹಾಗೂ ಇತರ ಜಲ ಮೂಲಗಳಿಗೆ ಹರಿಸುತ್ತಿರುವವರ ವಿರುದ್ಧ ಕೈಗೊಂಡಿರುವ ಕಾನೂನು ಕ್ರಮಗಳ ಬಗ್ಗೆ ಪೂರಕ ದಾಖಲೆಗಳೊಂದಿಗೆ ಮಾರ್ಚ್ 9 ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಯಾವುದೇ ಕಾರಣಕ್ಕೂ ಕೈಗಾರಿಕಾ ತ್ಯಾಜ್ಯಗಳು ಕೆರೆಗಳು, ನದಿಗಳು ಮತ್ತು ಭೂಗರ್ಭ ಜಲ ಮೂಲಗಳಿಗೆ ಸೇರದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಅವರು ಎಚ್ಚರಿಕೆ ನೀಡಿದರು. ಈ ವಿಚಾರದಲ್ಲಿ ನಿರ್ಲಕ್ಷ್ಯ ಅಥವಾ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಕೈಗಾರಿಕಾ ತ್ಯಾಜ್ಯದಿಂದ ಜಲ ಮೂಲಗಳು ಕಲುಷಿತಗೊಳ್ಳುವುದು ಪರಿಸರ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ತೀವ್ರ ಅಪಾಯವನ್ನುಂಟುಮಾಡುತ್ತದೆ. ಈ ಹಿನ್ನೆಲೆ ಲೋಕಾಯುಕ್ತರ ಸ್ವಯಂ ಪ್ರೇರಿತ ಕ್ರಮವು ಪರಿಸರ ರಕ್ಷಣೆಯ ದೃಷ್ಟಿಯಿಂದ ಮಹತ್ವದ್ದಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…