Advertisement
ಸುದ್ದಿಗಳು

ಬೆಂಗಳೂರಿನ ಪ್ರತೀ ವ್ಯಕ್ತಿಯ ಆದಾಯ 6,21,000 | ದ.ಕ ಜಿಲ್ಲೆಯೂ ಕಡಿಮೆ ಇಲ್ಲ…!

Share

ರಾಜ್ಯದ ಎಲ್ಲ ಜಿಲ್ಲೆಗಳ ಆರ್ಥಿಕ ಸಮೀಕ್ಷೆಯನ್ನು ನಡೆಸಿ ತಲಾ ಆದಾಯವನ್ನೂ ಪ್ರಕಟಿಸಲಾಗಿದೆ. ಈ ಪೈಕಿ ರಾಜ್ಯ ರಾಜಧಾನಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. ಕರ್ನಾಟಕ ಇಡೀ ದೇಶದಲ್ಲೇ ಆರ್ಥಿಕವಾಗಿ ಮುಂಚೂಣಿಯಲ್ಲಿರುವ ರಾಜ್ಯ, ಕರ್ನಾಟಕದಲ್ಲಿ ಯಾವುದೇ ಯೋಜನೆ ಘೋಷಿಸಿದರೂ ಇಡೀ ದೇಶ ಒಮ್ಮೆ ತಿರುಗಿ ನೋಡುತ್ತೆ. ಕರ್ನಾಟಕದಲ್ಲೂ ಬೆಂಗಳೂರು ನಗರ ದೇಶದ ಇತರ ನಗರಗಳಿಗಿಂತ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. 

ಅಂದ ಹಾಗೆ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಇಡೀ ರಾಜ್ಯದಲ್ಲೇ 2ನೇ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ತಲಾ ಆದಾಯ 3,70,834 ರೂ. ಆಗಿದೆ.  ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿ ಉಡುಪಿಯಿದೆ. ಚಿಕ್ಕಮಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು 4 ಮತ್ತು 5ನೇ ಸ್ಥಾನದಲ್ಲಿವೆ. ಇನ್ನು ತಲಾ ಆದಾಯದಲ್ಲಿ ಕೊನೆಯ ಐದನೇ ಸ್ಥಾನದಲ್ಲಿ ಯಾದಗಿರಿ, ಕೊಪ್ಪಳ, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಿವೆ.

ಕರ್ನಾಟಕ ಸರ್ಕಾರದ 2022-23 ರ ಕರ್ನಾಟಕದ ಆರ್ಥಿಕ ಸಮೀಕ್ಷೆಯ ಪ್ರಕಾರ ಕರ್ನಾಟಕದ ತಲಾ ಆದಾಯ 3,01,673 ಲಕ್ಷ. ಶಿಕ್ಷಣ, ಕೃಷಿ, ಕೈಗಾರಿಕೆಗಳು, ಸೇವೆಗಳು ಮತ್ತು ಆರೋಗ್ಯ ಸೇರಿದಂತೆ ಎಲ್ಲಾ ಕ್ಷೇತ್ರಗಳ ಆಧಾರದ ಮೇಲೆ ಈ ಆರ್ಥಿಕ ಸಮೀಕ್ಷೆ ಸಿದ್ಧಪಡಿಸಲಾಗಿದೆ.

ಅಂದ ಹಾಗೆ ಈ ಆರ್ಥಿಕ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ತಲಾ ಆದಾಯವನ್ನೂ ಸಹ ಪ್ರಕಟಿಸಲಾಗಿದೆ. ಈ ಪೈಕಿ ರಾಜ್ಯ ರಾಜಧಾನಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ.

ಬೆಂಗಳೂರು ನಗರ ಜಿಲ್ಲೆಯ ತಲಾ ಆದಾಯ 6,21,131 ಲಕ್ಷವಾಗಿದೆ. ಅಂದರೆ ಬೆಂಗಳೂರು ನಗರ ನಿವಾಸಿಗಳ ತಲಾ ಆದಾಯ 6,21,131 ಲಕ್ಷವಾಗಿದೆ. ಬೆಂಗಳೂರನ್ನು ಬಿಟ್ಟು ರಾಜ್ಯದ ಇತರ ಯಾವ ಜಿಲ್ಲೆಯ ಆದಾಯವೂ 4 ಲಕ್ಷ ದಾಟಿಲ್ಲ.

ಇಡೀ ರಾಜ್ಯದಲ್ಲಿ ಕಲಬುರಗಿ ಜಿಲ್ಲೆಯ ತಲಾ ಆದಾಯ ಅತೀ ಕಡಿಮೆಯಿದೆ. ಕಲ್ಯಾಣ ಕರ್ನಾಟಕ ಕೇಂದ್ರವಾದ ಕಲಬುರಗಿಯ ತಲಾ ಆದಾಯ 1,24,998 ರೂ. ಆಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

4 minutes ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

9 minutes ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

9 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

10 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

10 hours ago