Advertisement
ಸುದ್ದಿಗಳು

ಬೆಂಗಳೂರಿನ ಪ್ರತೀ ವ್ಯಕ್ತಿಯ ಆದಾಯ 6,21,000 | ದ.ಕ ಜಿಲ್ಲೆಯೂ ಕಡಿಮೆ ಇಲ್ಲ…!

Share

ರಾಜ್ಯದ ಎಲ್ಲ ಜಿಲ್ಲೆಗಳ ಆರ್ಥಿಕ ಸಮೀಕ್ಷೆಯನ್ನು ನಡೆಸಿ ತಲಾ ಆದಾಯವನ್ನೂ ಪ್ರಕಟಿಸಲಾಗಿದೆ. ಈ ಪೈಕಿ ರಾಜ್ಯ ರಾಜಧಾನಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. ಕರ್ನಾಟಕ ಇಡೀ ದೇಶದಲ್ಲೇ ಆರ್ಥಿಕವಾಗಿ ಮುಂಚೂಣಿಯಲ್ಲಿರುವ ರಾಜ್ಯ, ಕರ್ನಾಟಕದಲ್ಲಿ ಯಾವುದೇ ಯೋಜನೆ ಘೋಷಿಸಿದರೂ ಇಡೀ ದೇಶ ಒಮ್ಮೆ ತಿರುಗಿ ನೋಡುತ್ತೆ. ಕರ್ನಾಟಕದಲ್ಲೂ ಬೆಂಗಳೂರು ನಗರ ದೇಶದ ಇತರ ನಗರಗಳಿಗಿಂತ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. 

ಅಂದ ಹಾಗೆ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಇಡೀ ರಾಜ್ಯದಲ್ಲೇ 2ನೇ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ತಲಾ ಆದಾಯ 3,70,834 ರೂ. ಆಗಿದೆ.  ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿ ಉಡುಪಿಯಿದೆ. ಚಿಕ್ಕಮಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು 4 ಮತ್ತು 5ನೇ ಸ್ಥಾನದಲ್ಲಿವೆ. ಇನ್ನು ತಲಾ ಆದಾಯದಲ್ಲಿ ಕೊನೆಯ ಐದನೇ ಸ್ಥಾನದಲ್ಲಿ ಯಾದಗಿರಿ, ಕೊಪ್ಪಳ, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಿವೆ.

ಕರ್ನಾಟಕ ಸರ್ಕಾರದ 2022-23 ರ ಕರ್ನಾಟಕದ ಆರ್ಥಿಕ ಸಮೀಕ್ಷೆಯ ಪ್ರಕಾರ ಕರ್ನಾಟಕದ ತಲಾ ಆದಾಯ 3,01,673 ಲಕ್ಷ. ಶಿಕ್ಷಣ, ಕೃಷಿ, ಕೈಗಾರಿಕೆಗಳು, ಸೇವೆಗಳು ಮತ್ತು ಆರೋಗ್ಯ ಸೇರಿದಂತೆ ಎಲ್ಲಾ ಕ್ಷೇತ್ರಗಳ ಆಧಾರದ ಮೇಲೆ ಈ ಆರ್ಥಿಕ ಸಮೀಕ್ಷೆ ಸಿದ್ಧಪಡಿಸಲಾಗಿದೆ.

ಅಂದ ಹಾಗೆ ಈ ಆರ್ಥಿಕ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ತಲಾ ಆದಾಯವನ್ನೂ ಸಹ ಪ್ರಕಟಿಸಲಾಗಿದೆ. ಈ ಪೈಕಿ ರಾಜ್ಯ ರಾಜಧಾನಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ.

ಬೆಂಗಳೂರು ನಗರ ಜಿಲ್ಲೆಯ ತಲಾ ಆದಾಯ 6,21,131 ಲಕ್ಷವಾಗಿದೆ. ಅಂದರೆ ಬೆಂಗಳೂರು ನಗರ ನಿವಾಸಿಗಳ ತಲಾ ಆದಾಯ 6,21,131 ಲಕ್ಷವಾಗಿದೆ. ಬೆಂಗಳೂರನ್ನು ಬಿಟ್ಟು ರಾಜ್ಯದ ಇತರ ಯಾವ ಜಿಲ್ಲೆಯ ಆದಾಯವೂ 4 ಲಕ್ಷ ದಾಟಿಲ್ಲ.

ಇಡೀ ರಾಜ್ಯದಲ್ಲಿ ಕಲಬುರಗಿ ಜಿಲ್ಲೆಯ ತಲಾ ಆದಾಯ ಅತೀ ಕಡಿಮೆಯಿದೆ. ಕಲ್ಯಾಣ ಕರ್ನಾಟಕ ಕೇಂದ್ರವಾದ ಕಲಬುರಗಿಯ ತಲಾ ಆದಾಯ 1,24,998 ರೂ. ಆಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

6 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

7 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

8 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

17 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

19 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago