Advertisement
ಸುದ್ದಿಗಳು

ಬೆಂಗಳೂರಿನ ಪ್ರತೀ ವ್ಯಕ್ತಿಯ ಆದಾಯ 6,21,000 | ದ.ಕ ಜಿಲ್ಲೆಯೂ ಕಡಿಮೆ ಇಲ್ಲ…!

Share

ರಾಜ್ಯದ ಎಲ್ಲ ಜಿಲ್ಲೆಗಳ ಆರ್ಥಿಕ ಸಮೀಕ್ಷೆಯನ್ನು ನಡೆಸಿ ತಲಾ ಆದಾಯವನ್ನೂ ಪ್ರಕಟಿಸಲಾಗಿದೆ. ಈ ಪೈಕಿ ರಾಜ್ಯ ರಾಜಧಾನಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. ಕರ್ನಾಟಕ ಇಡೀ ದೇಶದಲ್ಲೇ ಆರ್ಥಿಕವಾಗಿ ಮುಂಚೂಣಿಯಲ್ಲಿರುವ ರಾಜ್ಯ, ಕರ್ನಾಟಕದಲ್ಲಿ ಯಾವುದೇ ಯೋಜನೆ ಘೋಷಿಸಿದರೂ ಇಡೀ ದೇಶ ಒಮ್ಮೆ ತಿರುಗಿ ನೋಡುತ್ತೆ. ಕರ್ನಾಟಕದಲ್ಲೂ ಬೆಂಗಳೂರು ನಗರ ದೇಶದ ಇತರ ನಗರಗಳಿಗಿಂತ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. 

ಅಂದ ಹಾಗೆ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಇಡೀ ರಾಜ್ಯದಲ್ಲೇ 2ನೇ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ತಲಾ ಆದಾಯ 3,70,834 ರೂ. ಆಗಿದೆ.  ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿ ಉಡುಪಿಯಿದೆ. ಚಿಕ್ಕಮಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು 4 ಮತ್ತು 5ನೇ ಸ್ಥಾನದಲ್ಲಿವೆ. ಇನ್ನು ತಲಾ ಆದಾಯದಲ್ಲಿ ಕೊನೆಯ ಐದನೇ ಸ್ಥಾನದಲ್ಲಿ ಯಾದಗಿರಿ, ಕೊಪ್ಪಳ, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಿವೆ.

ಕರ್ನಾಟಕ ಸರ್ಕಾರದ 2022-23 ರ ಕರ್ನಾಟಕದ ಆರ್ಥಿಕ ಸಮೀಕ್ಷೆಯ ಪ್ರಕಾರ ಕರ್ನಾಟಕದ ತಲಾ ಆದಾಯ 3,01,673 ಲಕ್ಷ. ಶಿಕ್ಷಣ, ಕೃಷಿ, ಕೈಗಾರಿಕೆಗಳು, ಸೇವೆಗಳು ಮತ್ತು ಆರೋಗ್ಯ ಸೇರಿದಂತೆ ಎಲ್ಲಾ ಕ್ಷೇತ್ರಗಳ ಆಧಾರದ ಮೇಲೆ ಈ ಆರ್ಥಿಕ ಸಮೀಕ್ಷೆ ಸಿದ್ಧಪಡಿಸಲಾಗಿದೆ.

ಅಂದ ಹಾಗೆ ಈ ಆರ್ಥಿಕ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ತಲಾ ಆದಾಯವನ್ನೂ ಸಹ ಪ್ರಕಟಿಸಲಾಗಿದೆ. ಈ ಪೈಕಿ ರಾಜ್ಯ ರಾಜಧಾನಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ.

ಬೆಂಗಳೂರು ನಗರ ಜಿಲ್ಲೆಯ ತಲಾ ಆದಾಯ 6,21,131 ಲಕ್ಷವಾಗಿದೆ. ಅಂದರೆ ಬೆಂಗಳೂರು ನಗರ ನಿವಾಸಿಗಳ ತಲಾ ಆದಾಯ 6,21,131 ಲಕ್ಷವಾಗಿದೆ. ಬೆಂಗಳೂರನ್ನು ಬಿಟ್ಟು ರಾಜ್ಯದ ಇತರ ಯಾವ ಜಿಲ್ಲೆಯ ಆದಾಯವೂ 4 ಲಕ್ಷ ದಾಟಿಲ್ಲ.

ಇಡೀ ರಾಜ್ಯದಲ್ಲಿ ಕಲಬುರಗಿ ಜಿಲ್ಲೆಯ ತಲಾ ಆದಾಯ ಅತೀ ಕಡಿಮೆಯಿದೆ. ಕಲ್ಯಾಣ ಕರ್ನಾಟಕ ಕೇಂದ್ರವಾದ ಕಲಬುರಗಿಯ ತಲಾ ಆದಾಯ 1,24,998 ರೂ. ಆಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

16 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

17 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

17 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

20 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago