ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೈಋತ್ಯ ಮಾನ್ಸೂನ್ ಪ್ರತಿ ಬಾರಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.
ಶಿಗ್ಗಾಂವಿ, ತರೀಕೆರೆ, ಸುಬ್ರಹ್ಮಣ್ಯ, ಮಂಚಿಕೆರೆ, ಲೋಂಡಾ, ಸವಣೂರು, ಕಡೂರು, ಬಾಳೆಹೊನ್ನೂರು, ಸುತ್ತೂರು, ಆನವಟ್ಟಿ, ಶಿವಮೊಗ್ಗ, ಮಲವಳ್ಳಿ, ಲೋಕಾಪುರ, ಸಂಕೇಶ್ವರ, ಹಾವೇರಿ, ಗದಗ, ಮುದಗಲ್, ಧಾರವಾಡ, ಕೆಂಭಾವಿ, ಚನ್ನಗಿರಿ, ರಾಮನಗರ, ಅಜ್ಜಂಪುರ, ಮದ್ದೂರು, ಕೃಷ್ಣರಾಜಸಾಗರದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು ಯಾವುದೇ ಸಂದರ್ಭದಲ್ಲಿ ಮಳೆಯಾಗಬಹುದು ಎಂದು ನಿರೀಕ್ಷಿಲಾಗಿದೆ. ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…
ಧರ್ಮರಾಯ ಮಹಾ ಜ್ಞಾನಿ. ಯಮಧರ್ಮನ ರೂಪಿನಲ್ಲಿದ್ದ ಯಕ್ಷನ ಧರ್ಮಸೂಕ್ಷ್ಮದ ಪ್ರಶ್ನೆಗಳಿಗೆ ಧರ್ಮದ ನೆಲೆಯಲ್ಲಿ…
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…