ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೈಋತ್ಯ ಮಾನ್ಸೂನ್ ಪ್ರತಿ ಬಾರಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.
ಶಿಗ್ಗಾಂವಿ, ತರೀಕೆರೆ, ಸುಬ್ರಹ್ಮಣ್ಯ, ಮಂಚಿಕೆರೆ, ಲೋಂಡಾ, ಸವಣೂರು, ಕಡೂರು, ಬಾಳೆಹೊನ್ನೂರು, ಸುತ್ತೂರು, ಆನವಟ್ಟಿ, ಶಿವಮೊಗ್ಗ, ಮಲವಳ್ಳಿ, ಲೋಕಾಪುರ, ಸಂಕೇಶ್ವರ, ಹಾವೇರಿ, ಗದಗ, ಮುದಗಲ್, ಧಾರವಾಡ, ಕೆಂಭಾವಿ, ಚನ್ನಗಿರಿ, ರಾಮನಗರ, ಅಜ್ಜಂಪುರ, ಮದ್ದೂರು, ಕೃಷ್ಣರಾಜಸಾಗರದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು ಯಾವುದೇ ಸಂದರ್ಭದಲ್ಲಿ ಮಳೆಯಾಗಬಹುದು ಎಂದು ನಿರೀಕ್ಷಿಲಾಗಿದೆ. ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…