ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೈಋತ್ಯ ಮಾನ್ಸೂನ್ ಪ್ರತಿ ಬಾರಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.
ಶಿಗ್ಗಾಂವಿ, ತರೀಕೆರೆ, ಸುಬ್ರಹ್ಮಣ್ಯ, ಮಂಚಿಕೆರೆ, ಲೋಂಡಾ, ಸವಣೂರು, ಕಡೂರು, ಬಾಳೆಹೊನ್ನೂರು, ಸುತ್ತೂರು, ಆನವಟ್ಟಿ, ಶಿವಮೊಗ್ಗ, ಮಲವಳ್ಳಿ, ಲೋಕಾಪುರ, ಸಂಕೇಶ್ವರ, ಹಾವೇರಿ, ಗದಗ, ಮುದಗಲ್, ಧಾರವಾಡ, ಕೆಂಭಾವಿ, ಚನ್ನಗಿರಿ, ರಾಮನಗರ, ಅಜ್ಜಂಪುರ, ಮದ್ದೂರು, ಕೃಷ್ಣರಾಜಸಾಗರದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು ಯಾವುದೇ ಸಂದರ್ಭದಲ್ಲಿ ಮಳೆಯಾಗಬಹುದು ಎಂದು ನಿರೀಕ್ಷಿಲಾಗಿದೆ. ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…