MIRROR FOCUS

ಪದೇ ಪದೇ ರೈತರನ್ನು ಅವಮಾನ | ನಮ್ಮ ಮೆಟ್ರೋ ಬಳಿಕ ಮಾಲ್‌ನಲ್ಲಿ ಅನ್ನದಾತನಿಗೆ ಅವಮಾನ | ಪಂಚೆ ಧರಿಸಿದ್ದಕ್ಕೆ ಮಾಲ್‌ ಒಳಗೆ ಪ್ರವೇಶ ಇಲ್ಲ..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಗತ್ತು ಆಧುನಿಕರಣಗೊಳ್ಳುತ್ತಿದ್ದಂತೆ(modernization) ಹಳ್ಳಿ ಜನ(Village people), ರೈತರು(Farmer) ಕಡೆಗಣನೆಗೆ ಒಳಗಾಗುತ್ತಿದ್ದಾರೆ.  ಅನ್ನ ನೀಡುವ ರೈತನನ್ನು ಪೇಟೆ ಮಂದಿ ನಿಕೃಷ್ಟವಾಗಿ ಕಾಣುವುದು ಮುಂದುವರೆಯುತ್ತಲೇ ಇದೆ. ಅಂದು ನಮ್ಮ ಮೆಟ್ರೋ (Namma Metro)ದಲ್ಲಿ ರೈತನಿಗೆ ರೈಲು ಏರಕು ಬಿಡದೆ ಅವಮಾನ ಮಾಡಲಾಗಿತ್ತು. ಇದೀಗ ಬೆಂಗಳೂರಿನ(Bengaluru) ಖಾಸಗಿ ಮಾಲ್‌ನಲ್ಲಿ (Private Mall) ರೈತನಿಗೆ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರೈತರೊಬ್ಬರು  ಪಂಚೆ ಧರಿಸಿ ಬಂದಿದ್ದಕ್ಕೆ ಒಳಗೆ ಬಿಡದೇ ಅವಮಾನ ಮಾಡಿರುವ ಘಟನೆ ಬೆಂಗಳೂರು ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್‌ನಲ್ಲಿ (GT Mall) ನಡೆದಿದೆ. ಮಾಲ್ ಆಡಳಿತ ಮಂಡಳಿಯ ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

Advertisement

ಏನಿದು ಘಟನೆ? : ಹಾವೇರಿ ಮೂಲದ ನಾಗರಾಜ್‌ ಎಂಬುವವರು ತಮ್ಮ ತಂದೆ – ತಾಯಿಯನ್ನು ಜಿ.ಟಿ ಮಾಲ್‌ಗೆ ಕರೆದುಕೊಂಡು ಬಂದಿದ್ದರು. ತಂದೆ-ತಾಯಿಗೆ ಸಿನಿಮಾ ತೋರಿಸಲು ಮಾಲ್‌ಗೆ ಕರೆದುಕೊಂಡು ಬಂದಿದ್ದರು. ಆದ್ರೆ ತಮ್ಮ ತಂದೆ ಪಂಚೆ ಧರಿಸಿದ್ದಾರೆ ಅನ್ನೋ ಕಾರಣಕ್ಕೆ ಮಾಲ್‌ ಸಿಬ್ಬಂದಿ ಪ್ರವೇಶ ನಿರಾಕರಿಸಿದ್ದಾರೆ. ಪಂಚೆ ಧರಿಸಿದರಿಗೆ ಮಾಲ್‌ ಒಳಗೆ ಬಿಡುವುದಿಲ್ಲ, ನಮ್ಮ ಮಾಲ್‌ನಲ್ಲಿ ಈ ರೀತಿ ರೂಲ್ಸ್ ಇದೆ ಅಂತ ಸಿಬ್ಬಂದಿ ಹೇಳಿರುವುದಾಗಿ ನಾಗರಾಜ್‌ ಆರೋಪಿಸಿದ್ದಾರೆ. ನಾಗರಾಜ್‌ ಅವರ ತಂದೆ ಹಾವೇರಿ ಜಿಲ್ಲೆಯ ಅರೇಮಲ್ಲಾಪುರ ಗ್ರಾಮದ ರೈತರು. ಪಂಚೆ ಧರಿಸಿದ್ದಾರೆ ಎಂಬ ಕಾರಣಕ್ಕೆ ಮಾಲ್‌ ಒಳಗೂ ಬಿಡದೇ, ಅರ್ಧ ಗಂಟೆಗೂ ಹೆಚ್ಚು ಕಾಲ ಮಾಲ್ ಮುಂದೆ ಕೂರಿಸಿ ಅವಮಾನ ಮಾಡಿದ್ದಾರೆ ಎಂದು ಪುತ್ರ ನಾಗರಾಜ್‌ ದೂರಿದ್ದಾರೆ.

ರೈತನಿಗೆ ಮಾಲ್‌ ಪ್ರವೇಶ ನಿರಾಕರಿಸಿದ ಆಡಳಿತ ಮಂಡಳಿ ವರ್ತನೆಗೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಯಿತು. ಅಲ್ಲೇ ಇದ್ದ ಕೆಲ ಯೂಟ್ಯೂಬರ್ಸ್‌ ಘಟನೆಯನ್ನ ವೀಡಿಯೋ ಮಾಡಲು ಶುರು ಮಾಡಿದರು. ಬಳಿಕ ಮಾಲ್‌ನ ಆಡಳಿತ ಮಂಡಳಿ ಜೊತೆ ಮಾತನಾಡಿ, ರೈತನಿಗೆ ಮಾಲ್ ಒಳಗೆ ಪ್ರವೇಶ ಕೊಡಿಸುವಂತೆ ಮಾಡಿದ್ದಾರೆ. ಅರ್ಧ ಗಂಟೆ ಬಳಿಕ ಸಿಬ್ಬಂದಿ ರೈತನಿಗೆ ಮಾಲ್‌ ಒಳಗೆ ಪ್ರವೇಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಪುತ್ರ ನಾಗರಾಜ್‌ ತಿಳಿಸಿದ್ದಾರೆ. ಕಳೆದ ಫೆಬ್ರವರಿ 26ರಂದು ಬೆಂಗಳೂರಿನ ರಾಜಾಜಿನಗರ ನಮ್ಮ ಮೆಟ್ರೋ ನಿಲ್ದಾಣದಲ್ಲಿ ರೈತನಿಗೆ ಅವಮಾನ ಮಾಡಿದ್ದ ಘಟನೆ ನಡೆದಿತ್ತು. ಇದಕ್ಕೆ ಮೆಟ್ರೋ ಆಡಳಿತ ಮಂಡಳಿ ಕ್ಷಮೆಯಾಚಿಸಿತ್ತು.ಈಗಲೂ ಘಟನೆಯ ಬಗ್ಗೆ ಮಾಲ್‌ ಮುಖ್ಯಸ್ಥರು ಕ್ಷಮೆಯಾಚಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

4 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

4 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

9 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago