ಗ್ರಾಮೀಣ ಭಾಗದಲ್ಲಿ ಬೇಕಿದೆ ಸಮರ್ಥ ಅಧಿಕಾರಿಗಳು | ಜನರ ಬೇಡಿಕೆ |

September 18, 2023
9:46 AM

ಗ್ರಾಮೀಣ ಭಾಗಗಳು ಸೊರಗಲು ಹಾಗೂ ಅಭಿವೃದ್ಧಿಗೊಳ್ಳಲು ಅಧಿಕಾರಿಗಳೇ ಪ್ರಮುಖ ಕಾರಣವಾಗುತ್ತಾರೆ. ಒಂದು ಗ್ರಾಮೀಣ ಭಾಗದಲ್ಲಿ ಅಧಿಕಾರಿಯೊಬ್ಬ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದರೆ ಕನಿಷ್ಟ 5 ವರ್ಷ ಅದೇ ಅಧಿಕಾರಿ ಗ್ರಾಮದ ಅಭಿವೃದ್ಧಿಗಾಗಿ ಉಳಿಸಿಕೊಳ್ಳಬೇಕು ಎನ್ನುವುದು  ಗ್ರಾಮದ ಜನರ ಒತ್ತಾಯ.

ಇದೀಗ ಅಂತಹದ್ದೇ ಒಂದು ಒತ್ತಾಯ ಕೊಲ್ಲಮೊಗ್ರದಲ್ಲಿ ಕೇಳಿದೆ. ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮ ಕೊಲ್ಲಮೊಗ್ರ. ಅಭಿವೃದ್ಧಿಯ ನಿರೀಕ್ಷೆ ಈ ಗ್ರಾಮದಕ್ಕೆ ಸಾಕಷ್ಟು ಇದೆ. ಇಲ್ಲಿನ ಗ್ರಾಪಂ ಪಿಡಿಒ ಅವರು ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದರು. ಇದೇ ಸಮಯದಲ್ಲಿ ವರ್ಗಾವಣೆಯಾಗಿದೆ. ಈಗ ಗ್ರಾಮಸ್ಥರು ಕೇಳುವ ಪ್ರಶ್ನೆ ಹೀಗಿದೆ,…

ಯಾಕೆ ಹೀಗೆ..? ಇದು ಒಂದೊಂದು ಬಾರಿ ಬರುವ ಪ್ರಶ್ನೆ..! ಆದರೆ ಕೆಲವಷ್ಟು ಗ್ರಾಮಗಳಲ್ಲಿ.. ಇದು ನಿರಂತರ ಪ್ರಶ್ನೆಯಾಗಿದೆ. ಅದು ಆ ಊರಿಗೆ ಬಡಿದ ಗರ ಎಂಬ ತೀರ್ಮಾನಕ್ಕೆ ಬರಬೇಕೇ ?. ಅನೇಕ ಸಮಸ್ಯೆಗಳ ಆಗರವಾಗಿದ್ದ ಸುಳ್ಯ ತಾಲೂಕು ಕೊಲ್ಲಮೊಗ್ರ ಗ್ರಾಮಕ್ಕೆ ಆಶಾಕಿರಣವಾಗಿ ಗ್ರಾಮ ಪಂಚಾಯತ್‌ ಪಿಡಿಒ ಆಗಿ ಅಧಿಕಾರ ಸ್ವೀಕರಿಸಿ ಈ ಊರಿನ ಸರ್ವತೋಮುಖ ಅಭಿವೃದ್ಧಿಗೆ ವಿಘ್ನಗಳನ್ನು ಎದುರಿಸಿ ಬಹು ಮುಖ್ಯ ಪಾತ್ರವನ್ನು ಶಕ್ತಿ ಮೀರಿ ನಿಭಾಯಿಸಿಕೊಂಡು ಬಂದ ಪಿಡಿಒ ಅವರನ್ನು ವರ್ಗಾವಣೆ ಆದೇಶ ಬಂದಿದೆ. ಇನ್ನು ಕೆಲ ವರುಷವಾದರೂ ಇವರ ಸೇವೆ ಈ ಗ್ರಾಮ ಅಪೇಕ್ಷಿಸುತ್ತದೆ.ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರು ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಬೇಕೆಂದು ವಿನಂತಿಸುತ್ತೇವೆ ಎಂದು ಗ್ರಾಮದ ಜನರು ಹೇಳುತ್ತಾರೆ.

ಒಂದು ವೇಳೆ ಇಲಾಖೆಗಳ ನಿಯಮದಂತೆ ವರ್ಗಾವಣೆ ಇರುವುದೇ ಆಗಿದ್ದರೆ, ಮುಂದೆ ಬರುವ ನೂತನ ಪಿಡಿಒ ಅವರು ಕೂಡಾ ಗ್ರಾಮೀಣ ಅಭಿವೃದ್ಧಿಗಾಗಿ ಹಿಂದಿನ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕಿದೆ ಎನ್ನುವುದು ಕೂಡಾ ಜನರ ನಿರೀಕ್ಷೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror