ಸುದ್ದಿಗಳು

ಗ್ರಾಮೀಣ ಭಾಗದಲ್ಲಿ ಬೇಕಿದೆ ಸಮರ್ಥ ಅಧಿಕಾರಿಗಳು | ಜನರ ಬೇಡಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಮೀಣ ಭಾಗಗಳು ಸೊರಗಲು ಹಾಗೂ ಅಭಿವೃದ್ಧಿಗೊಳ್ಳಲು ಅಧಿಕಾರಿಗಳೇ ಪ್ರಮುಖ ಕಾರಣವಾಗುತ್ತಾರೆ. ಒಂದು ಗ್ರಾಮೀಣ ಭಾಗದಲ್ಲಿ ಅಧಿಕಾರಿಯೊಬ್ಬ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದರೆ ಕನಿಷ್ಟ 5 ವರ್ಷ ಅದೇ ಅಧಿಕಾರಿ ಗ್ರಾಮದ ಅಭಿವೃದ್ಧಿಗಾಗಿ ಉಳಿಸಿಕೊಳ್ಳಬೇಕು ಎನ್ನುವುದು  ಗ್ರಾಮದ ಜನರ ಒತ್ತಾಯ.

Advertisement

ಇದೀಗ ಅಂತಹದ್ದೇ ಒಂದು ಒತ್ತಾಯ ಕೊಲ್ಲಮೊಗ್ರದಲ್ಲಿ ಕೇಳಿದೆ. ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮ ಕೊಲ್ಲಮೊಗ್ರ. ಅಭಿವೃದ್ಧಿಯ ನಿರೀಕ್ಷೆ ಈ ಗ್ರಾಮದಕ್ಕೆ ಸಾಕಷ್ಟು ಇದೆ. ಇಲ್ಲಿನ ಗ್ರಾಪಂ ಪಿಡಿಒ ಅವರು ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದರು. ಇದೇ ಸಮಯದಲ್ಲಿ ವರ್ಗಾವಣೆಯಾಗಿದೆ. ಈಗ ಗ್ರಾಮಸ್ಥರು ಕೇಳುವ ಪ್ರಶ್ನೆ ಹೀಗಿದೆ,…

ಯಾಕೆ ಹೀಗೆ..? ಇದು ಒಂದೊಂದು ಬಾರಿ ಬರುವ ಪ್ರಶ್ನೆ..! ಆದರೆ ಕೆಲವಷ್ಟು ಗ್ರಾಮಗಳಲ್ಲಿ.. ಇದು ನಿರಂತರ ಪ್ರಶ್ನೆಯಾಗಿದೆ. ಅದು ಆ ಊರಿಗೆ ಬಡಿದ ಗರ ಎಂಬ ತೀರ್ಮಾನಕ್ಕೆ ಬರಬೇಕೇ ?. ಅನೇಕ ಸಮಸ್ಯೆಗಳ ಆಗರವಾಗಿದ್ದ ಸುಳ್ಯ ತಾಲೂಕು ಕೊಲ್ಲಮೊಗ್ರ ಗ್ರಾಮಕ್ಕೆ ಆಶಾಕಿರಣವಾಗಿ ಗ್ರಾಮ ಪಂಚಾಯತ್‌ ಪಿಡಿಒ ಆಗಿ ಅಧಿಕಾರ ಸ್ವೀಕರಿಸಿ ಈ ಊರಿನ ಸರ್ವತೋಮುಖ ಅಭಿವೃದ್ಧಿಗೆ ವಿಘ್ನಗಳನ್ನು ಎದುರಿಸಿ ಬಹು ಮುಖ್ಯ ಪಾತ್ರವನ್ನು ಶಕ್ತಿ ಮೀರಿ ನಿಭಾಯಿಸಿಕೊಂಡು ಬಂದ ಪಿಡಿಒ ಅವರನ್ನು ವರ್ಗಾವಣೆ ಆದೇಶ ಬಂದಿದೆ. ಇನ್ನು ಕೆಲ ವರುಷವಾದರೂ ಇವರ ಸೇವೆ ಈ ಗ್ರಾಮ ಅಪೇಕ್ಷಿಸುತ್ತದೆ.ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರು ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಬೇಕೆಂದು ವಿನಂತಿಸುತ್ತೇವೆ ಎಂದು ಗ್ರಾಮದ ಜನರು ಹೇಳುತ್ತಾರೆ.

ಒಂದು ವೇಳೆ ಇಲಾಖೆಗಳ ನಿಯಮದಂತೆ ವರ್ಗಾವಣೆ ಇರುವುದೇ ಆಗಿದ್ದರೆ, ಮುಂದೆ ಬರುವ ನೂತನ ಪಿಡಿಒ ಅವರು ಕೂಡಾ ಗ್ರಾಮೀಣ ಅಭಿವೃದ್ಧಿಗಾಗಿ ಹಿಂದಿನ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕಿದೆ ಎನ್ನುವುದು ಕೂಡಾ ಜನರ ನಿರೀಕ್ಷೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

6 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

6 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

6 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

6 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

7 hours ago

ಚಾಲಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ

ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…

7 hours ago