Advertisement
ಸುದ್ದಿಗಳು

ಗ್ರಾಮೀಣ ಭಾಗದಲ್ಲಿ ಬೇಕಿದೆ ಸಮರ್ಥ ಅಧಿಕಾರಿಗಳು | ಜನರ ಬೇಡಿಕೆ |

Share

ಗ್ರಾಮೀಣ ಭಾಗಗಳು ಸೊರಗಲು ಹಾಗೂ ಅಭಿವೃದ್ಧಿಗೊಳ್ಳಲು ಅಧಿಕಾರಿಗಳೇ ಪ್ರಮುಖ ಕಾರಣವಾಗುತ್ತಾರೆ. ಒಂದು ಗ್ರಾಮೀಣ ಭಾಗದಲ್ಲಿ ಅಧಿಕಾರಿಯೊಬ್ಬ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದರೆ ಕನಿಷ್ಟ 5 ವರ್ಷ ಅದೇ ಅಧಿಕಾರಿ ಗ್ರಾಮದ ಅಭಿವೃದ್ಧಿಗಾಗಿ ಉಳಿಸಿಕೊಳ್ಳಬೇಕು ಎನ್ನುವುದು  ಗ್ರಾಮದ ಜನರ ಒತ್ತಾಯ.

Advertisement

ಇದೀಗ ಅಂತಹದ್ದೇ ಒಂದು ಒತ್ತಾಯ ಕೊಲ್ಲಮೊಗ್ರದಲ್ಲಿ ಕೇಳಿದೆ. ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮ ಕೊಲ್ಲಮೊಗ್ರ. ಅಭಿವೃದ್ಧಿಯ ನಿರೀಕ್ಷೆ ಈ ಗ್ರಾಮದಕ್ಕೆ ಸಾಕಷ್ಟು ಇದೆ. ಇಲ್ಲಿನ ಗ್ರಾಪಂ ಪಿಡಿಒ ಅವರು ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದರು. ಇದೇ ಸಮಯದಲ್ಲಿ ವರ್ಗಾವಣೆಯಾಗಿದೆ. ಈಗ ಗ್ರಾಮಸ್ಥರು ಕೇಳುವ ಪ್ರಶ್ನೆ ಹೀಗಿದೆ,…

ಯಾಕೆ ಹೀಗೆ..? ಇದು ಒಂದೊಂದು ಬಾರಿ ಬರುವ ಪ್ರಶ್ನೆ..! ಆದರೆ ಕೆಲವಷ್ಟು ಗ್ರಾಮಗಳಲ್ಲಿ.. ಇದು ನಿರಂತರ ಪ್ರಶ್ನೆಯಾಗಿದೆ. ಅದು ಆ ಊರಿಗೆ ಬಡಿದ ಗರ ಎಂಬ ತೀರ್ಮಾನಕ್ಕೆ ಬರಬೇಕೇ ?. ಅನೇಕ ಸಮಸ್ಯೆಗಳ ಆಗರವಾಗಿದ್ದ ಸುಳ್ಯ ತಾಲೂಕು ಕೊಲ್ಲಮೊಗ್ರ ಗ್ರಾಮಕ್ಕೆ ಆಶಾಕಿರಣವಾಗಿ ಗ್ರಾಮ ಪಂಚಾಯತ್‌ ಪಿಡಿಒ ಆಗಿ ಅಧಿಕಾರ ಸ್ವೀಕರಿಸಿ ಈ ಊರಿನ ಸರ್ವತೋಮುಖ ಅಭಿವೃದ್ಧಿಗೆ ವಿಘ್ನಗಳನ್ನು ಎದುರಿಸಿ ಬಹು ಮುಖ್ಯ ಪಾತ್ರವನ್ನು ಶಕ್ತಿ ಮೀರಿ ನಿಭಾಯಿಸಿಕೊಂಡು ಬಂದ ಪಿಡಿಒ ಅವರನ್ನು ವರ್ಗಾವಣೆ ಆದೇಶ ಬಂದಿದೆ. ಇನ್ನು ಕೆಲ ವರುಷವಾದರೂ ಇವರ ಸೇವೆ ಈ ಗ್ರಾಮ ಅಪೇಕ್ಷಿಸುತ್ತದೆ.ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರು ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಬೇಕೆಂದು ವಿನಂತಿಸುತ್ತೇವೆ ಎಂದು ಗ್ರಾಮದ ಜನರು ಹೇಳುತ್ತಾರೆ.

ಒಂದು ವೇಳೆ ಇಲಾಖೆಗಳ ನಿಯಮದಂತೆ ವರ್ಗಾವಣೆ ಇರುವುದೇ ಆಗಿದ್ದರೆ, ಮುಂದೆ ಬರುವ ನೂತನ ಪಿಡಿಒ ಅವರು ಕೂಡಾ ಗ್ರಾಮೀಣ ಅಭಿವೃದ್ಧಿಗಾಗಿ ಹಿಂದಿನ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕಿದೆ ಎನ್ನುವುದು ಕೂಡಾ ಜನರ ನಿರೀಕ್ಷೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

4 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

8 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

9 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

9 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

20 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago