Advertisement
ಸುದ್ದಿಗಳು

ಗ್ರಾಮೀಣ ಭಾಗದಲ್ಲಿ ಬೇಕಿದೆ ಸಮರ್ಥ ಅಧಿಕಾರಿಗಳು | ಜನರ ಬೇಡಿಕೆ |

Share

ಗ್ರಾಮೀಣ ಭಾಗಗಳು ಸೊರಗಲು ಹಾಗೂ ಅಭಿವೃದ್ಧಿಗೊಳ್ಳಲು ಅಧಿಕಾರಿಗಳೇ ಪ್ರಮುಖ ಕಾರಣವಾಗುತ್ತಾರೆ. ಒಂದು ಗ್ರಾಮೀಣ ಭಾಗದಲ್ಲಿ ಅಧಿಕಾರಿಯೊಬ್ಬ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದರೆ ಕನಿಷ್ಟ 5 ವರ್ಷ ಅದೇ ಅಧಿಕಾರಿ ಗ್ರಾಮದ ಅಭಿವೃದ್ಧಿಗಾಗಿ ಉಳಿಸಿಕೊಳ್ಳಬೇಕು ಎನ್ನುವುದು  ಗ್ರಾಮದ ಜನರ ಒತ್ತಾಯ.

ಇದೀಗ ಅಂತಹದ್ದೇ ಒಂದು ಒತ್ತಾಯ ಕೊಲ್ಲಮೊಗ್ರದಲ್ಲಿ ಕೇಳಿದೆ. ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮ ಕೊಲ್ಲಮೊಗ್ರ. ಅಭಿವೃದ್ಧಿಯ ನಿರೀಕ್ಷೆ ಈ ಗ್ರಾಮದಕ್ಕೆ ಸಾಕಷ್ಟು ಇದೆ. ಇಲ್ಲಿನ ಗ್ರಾಪಂ ಪಿಡಿಒ ಅವರು ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದರು. ಇದೇ ಸಮಯದಲ್ಲಿ ವರ್ಗಾವಣೆಯಾಗಿದೆ. ಈಗ ಗ್ರಾಮಸ್ಥರು ಕೇಳುವ ಪ್ರಶ್ನೆ ಹೀಗಿದೆ,…

ಯಾಕೆ ಹೀಗೆ..? ಇದು ಒಂದೊಂದು ಬಾರಿ ಬರುವ ಪ್ರಶ್ನೆ..! ಆದರೆ ಕೆಲವಷ್ಟು ಗ್ರಾಮಗಳಲ್ಲಿ.. ಇದು ನಿರಂತರ ಪ್ರಶ್ನೆಯಾಗಿದೆ. ಅದು ಆ ಊರಿಗೆ ಬಡಿದ ಗರ ಎಂಬ ತೀರ್ಮಾನಕ್ಕೆ ಬರಬೇಕೇ ?. ಅನೇಕ ಸಮಸ್ಯೆಗಳ ಆಗರವಾಗಿದ್ದ ಸುಳ್ಯ ತಾಲೂಕು ಕೊಲ್ಲಮೊಗ್ರ ಗ್ರಾಮಕ್ಕೆ ಆಶಾಕಿರಣವಾಗಿ ಗ್ರಾಮ ಪಂಚಾಯತ್‌ ಪಿಡಿಒ ಆಗಿ ಅಧಿಕಾರ ಸ್ವೀಕರಿಸಿ ಈ ಊರಿನ ಸರ್ವತೋಮುಖ ಅಭಿವೃದ್ಧಿಗೆ ವಿಘ್ನಗಳನ್ನು ಎದುರಿಸಿ ಬಹು ಮುಖ್ಯ ಪಾತ್ರವನ್ನು ಶಕ್ತಿ ಮೀರಿ ನಿಭಾಯಿಸಿಕೊಂಡು ಬಂದ ಪಿಡಿಒ ಅವರನ್ನು ವರ್ಗಾವಣೆ ಆದೇಶ ಬಂದಿದೆ. ಇನ್ನು ಕೆಲ ವರುಷವಾದರೂ ಇವರ ಸೇವೆ ಈ ಗ್ರಾಮ ಅಪೇಕ್ಷಿಸುತ್ತದೆ.ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರು ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಬೇಕೆಂದು ವಿನಂತಿಸುತ್ತೇವೆ ಎಂದು ಗ್ರಾಮದ ಜನರು ಹೇಳುತ್ತಾರೆ.

ಒಂದು ವೇಳೆ ಇಲಾಖೆಗಳ ನಿಯಮದಂತೆ ವರ್ಗಾವಣೆ ಇರುವುದೇ ಆಗಿದ್ದರೆ, ಮುಂದೆ ಬರುವ ನೂತನ ಪಿಡಿಒ ಅವರು ಕೂಡಾ ಗ್ರಾಮೀಣ ಅಭಿವೃದ್ಧಿಗಾಗಿ ಹಿಂದಿನ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕಿದೆ ಎನ್ನುವುದು ಕೂಡಾ ಜನರ ನಿರೀಕ್ಷೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

5 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

6 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

6 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

9 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

20 hours ago