Advertisement
ಸುದ್ದಿಗಳು

ಗ್ರಾಮೀಣ ಭಾಗದಲ್ಲಿ ಬೇಕಿದೆ ಸಮರ್ಥ ಅಧಿಕಾರಿಗಳು | ಜನರ ಬೇಡಿಕೆ |

Share

ಗ್ರಾಮೀಣ ಭಾಗಗಳು ಸೊರಗಲು ಹಾಗೂ ಅಭಿವೃದ್ಧಿಗೊಳ್ಳಲು ಅಧಿಕಾರಿಗಳೇ ಪ್ರಮುಖ ಕಾರಣವಾಗುತ್ತಾರೆ. ಒಂದು ಗ್ರಾಮೀಣ ಭಾಗದಲ್ಲಿ ಅಧಿಕಾರಿಯೊಬ್ಬ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದರೆ ಕನಿಷ್ಟ 5 ವರ್ಷ ಅದೇ ಅಧಿಕಾರಿ ಗ್ರಾಮದ ಅಭಿವೃದ್ಧಿಗಾಗಿ ಉಳಿಸಿಕೊಳ್ಳಬೇಕು ಎನ್ನುವುದು  ಗ್ರಾಮದ ಜನರ ಒತ್ತಾಯ.

ಇದೀಗ ಅಂತಹದ್ದೇ ಒಂದು ಒತ್ತಾಯ ಕೊಲ್ಲಮೊಗ್ರದಲ್ಲಿ ಕೇಳಿದೆ. ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮ ಕೊಲ್ಲಮೊಗ್ರ. ಅಭಿವೃದ್ಧಿಯ ನಿರೀಕ್ಷೆ ಈ ಗ್ರಾಮದಕ್ಕೆ ಸಾಕಷ್ಟು ಇದೆ. ಇಲ್ಲಿನ ಗ್ರಾಪಂ ಪಿಡಿಒ ಅವರು ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದರು. ಇದೇ ಸಮಯದಲ್ಲಿ ವರ್ಗಾವಣೆಯಾಗಿದೆ. ಈಗ ಗ್ರಾಮಸ್ಥರು ಕೇಳುವ ಪ್ರಶ್ನೆ ಹೀಗಿದೆ,…

ಯಾಕೆ ಹೀಗೆ..? ಇದು ಒಂದೊಂದು ಬಾರಿ ಬರುವ ಪ್ರಶ್ನೆ..! ಆದರೆ ಕೆಲವಷ್ಟು ಗ್ರಾಮಗಳಲ್ಲಿ.. ಇದು ನಿರಂತರ ಪ್ರಶ್ನೆಯಾಗಿದೆ. ಅದು ಆ ಊರಿಗೆ ಬಡಿದ ಗರ ಎಂಬ ತೀರ್ಮಾನಕ್ಕೆ ಬರಬೇಕೇ ?. ಅನೇಕ ಸಮಸ್ಯೆಗಳ ಆಗರವಾಗಿದ್ದ ಸುಳ್ಯ ತಾಲೂಕು ಕೊಲ್ಲಮೊಗ್ರ ಗ್ರಾಮಕ್ಕೆ ಆಶಾಕಿರಣವಾಗಿ ಗ್ರಾಮ ಪಂಚಾಯತ್‌ ಪಿಡಿಒ ಆಗಿ ಅಧಿಕಾರ ಸ್ವೀಕರಿಸಿ ಈ ಊರಿನ ಸರ್ವತೋಮುಖ ಅಭಿವೃದ್ಧಿಗೆ ವಿಘ್ನಗಳನ್ನು ಎದುರಿಸಿ ಬಹು ಮುಖ್ಯ ಪಾತ್ರವನ್ನು ಶಕ್ತಿ ಮೀರಿ ನಿಭಾಯಿಸಿಕೊಂಡು ಬಂದ ಪಿಡಿಒ ಅವರನ್ನು ವರ್ಗಾವಣೆ ಆದೇಶ ಬಂದಿದೆ. ಇನ್ನು ಕೆಲ ವರುಷವಾದರೂ ಇವರ ಸೇವೆ ಈ ಗ್ರಾಮ ಅಪೇಕ್ಷಿಸುತ್ತದೆ.ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರು ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಬೇಕೆಂದು ವಿನಂತಿಸುತ್ತೇವೆ ಎಂದು ಗ್ರಾಮದ ಜನರು ಹೇಳುತ್ತಾರೆ.

ಒಂದು ವೇಳೆ ಇಲಾಖೆಗಳ ನಿಯಮದಂತೆ ವರ್ಗಾವಣೆ ಇರುವುದೇ ಆಗಿದ್ದರೆ, ಮುಂದೆ ಬರುವ ನೂತನ ಪಿಡಿಒ ಅವರು ಕೂಡಾ ಗ್ರಾಮೀಣ ಅಭಿವೃದ್ಧಿಗಾಗಿ ಹಿಂದಿನ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕಿದೆ ಎನ್ನುವುದು ಕೂಡಾ ಜನರ ನಿರೀಕ್ಷೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

4 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

17 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

21 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago