Advertisement
ಸುದ್ದಿಗಳು

ಗ್ರಾಮೀಣ ಭಾಗದಲ್ಲಿ ಬೇಕಿದೆ ಸಮರ್ಥ ಅಧಿಕಾರಿಗಳು | ಜನರ ಬೇಡಿಕೆ |

Share

ಗ್ರಾಮೀಣ ಭಾಗಗಳು ಸೊರಗಲು ಹಾಗೂ ಅಭಿವೃದ್ಧಿಗೊಳ್ಳಲು ಅಧಿಕಾರಿಗಳೇ ಪ್ರಮುಖ ಕಾರಣವಾಗುತ್ತಾರೆ. ಒಂದು ಗ್ರಾಮೀಣ ಭಾಗದಲ್ಲಿ ಅಧಿಕಾರಿಯೊಬ್ಬ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದರೆ ಕನಿಷ್ಟ 5 ವರ್ಷ ಅದೇ ಅಧಿಕಾರಿ ಗ್ರಾಮದ ಅಭಿವೃದ್ಧಿಗಾಗಿ ಉಳಿಸಿಕೊಳ್ಳಬೇಕು ಎನ್ನುವುದು  ಗ್ರಾಮದ ಜನರ ಒತ್ತಾಯ.

ಇದೀಗ ಅಂತಹದ್ದೇ ಒಂದು ಒತ್ತಾಯ ಕೊಲ್ಲಮೊಗ್ರದಲ್ಲಿ ಕೇಳಿದೆ. ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮ ಕೊಲ್ಲಮೊಗ್ರ. ಅಭಿವೃದ್ಧಿಯ ನಿರೀಕ್ಷೆ ಈ ಗ್ರಾಮದಕ್ಕೆ ಸಾಕಷ್ಟು ಇದೆ. ಇಲ್ಲಿನ ಗ್ರಾಪಂ ಪಿಡಿಒ ಅವರು ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದರು. ಇದೇ ಸಮಯದಲ್ಲಿ ವರ್ಗಾವಣೆಯಾಗಿದೆ. ಈಗ ಗ್ರಾಮಸ್ಥರು ಕೇಳುವ ಪ್ರಶ್ನೆ ಹೀಗಿದೆ,…

ಯಾಕೆ ಹೀಗೆ..? ಇದು ಒಂದೊಂದು ಬಾರಿ ಬರುವ ಪ್ರಶ್ನೆ..! ಆದರೆ ಕೆಲವಷ್ಟು ಗ್ರಾಮಗಳಲ್ಲಿ.. ಇದು ನಿರಂತರ ಪ್ರಶ್ನೆಯಾಗಿದೆ. ಅದು ಆ ಊರಿಗೆ ಬಡಿದ ಗರ ಎಂಬ ತೀರ್ಮಾನಕ್ಕೆ ಬರಬೇಕೇ ?. ಅನೇಕ ಸಮಸ್ಯೆಗಳ ಆಗರವಾಗಿದ್ದ ಸುಳ್ಯ ತಾಲೂಕು ಕೊಲ್ಲಮೊಗ್ರ ಗ್ರಾಮಕ್ಕೆ ಆಶಾಕಿರಣವಾಗಿ ಗ್ರಾಮ ಪಂಚಾಯತ್‌ ಪಿಡಿಒ ಆಗಿ ಅಧಿಕಾರ ಸ್ವೀಕರಿಸಿ ಈ ಊರಿನ ಸರ್ವತೋಮುಖ ಅಭಿವೃದ್ಧಿಗೆ ವಿಘ್ನಗಳನ್ನು ಎದುರಿಸಿ ಬಹು ಮುಖ್ಯ ಪಾತ್ರವನ್ನು ಶಕ್ತಿ ಮೀರಿ ನಿಭಾಯಿಸಿಕೊಂಡು ಬಂದ ಪಿಡಿಒ ಅವರನ್ನು ವರ್ಗಾವಣೆ ಆದೇಶ ಬಂದಿದೆ. ಇನ್ನು ಕೆಲ ವರುಷವಾದರೂ ಇವರ ಸೇವೆ ಈ ಗ್ರಾಮ ಅಪೇಕ್ಷಿಸುತ್ತದೆ.ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರು ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಬೇಕೆಂದು ವಿನಂತಿಸುತ್ತೇವೆ ಎಂದು ಗ್ರಾಮದ ಜನರು ಹೇಳುತ್ತಾರೆ.

ಒಂದು ವೇಳೆ ಇಲಾಖೆಗಳ ನಿಯಮದಂತೆ ವರ್ಗಾವಣೆ ಇರುವುದೇ ಆಗಿದ್ದರೆ, ಮುಂದೆ ಬರುವ ನೂತನ ಪಿಡಿಒ ಅವರು ಕೂಡಾ ಗ್ರಾಮೀಣ ಅಭಿವೃದ್ಧಿಗಾಗಿ ಹಿಂದಿನ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕಿದೆ ಎನ್ನುವುದು ಕೂಡಾ ಜನರ ನಿರೀಕ್ಷೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

5 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

16 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

16 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

16 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

22 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago