Advertisement
ಸುದ್ದಿಗಳು

ಗ್ರಾಮೀಣ ಭಾಗದಲ್ಲಿ ಬೇಕಿದೆ ಸಮರ್ಥ ಅಧಿಕಾರಿಗಳು | ಜನರ ಬೇಡಿಕೆ |

Share

ಗ್ರಾಮೀಣ ಭಾಗಗಳು ಸೊರಗಲು ಹಾಗೂ ಅಭಿವೃದ್ಧಿಗೊಳ್ಳಲು ಅಧಿಕಾರಿಗಳೇ ಪ್ರಮುಖ ಕಾರಣವಾಗುತ್ತಾರೆ. ಒಂದು ಗ್ರಾಮೀಣ ಭಾಗದಲ್ಲಿ ಅಧಿಕಾರಿಯೊಬ್ಬ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದರೆ ಕನಿಷ್ಟ 5 ವರ್ಷ ಅದೇ ಅಧಿಕಾರಿ ಗ್ರಾಮದ ಅಭಿವೃದ್ಧಿಗಾಗಿ ಉಳಿಸಿಕೊಳ್ಳಬೇಕು ಎನ್ನುವುದು  ಗ್ರಾಮದ ಜನರ ಒತ್ತಾಯ.

ಇದೀಗ ಅಂತಹದ್ದೇ ಒಂದು ಒತ್ತಾಯ ಕೊಲ್ಲಮೊಗ್ರದಲ್ಲಿ ಕೇಳಿದೆ. ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮ ಕೊಲ್ಲಮೊಗ್ರ. ಅಭಿವೃದ್ಧಿಯ ನಿರೀಕ್ಷೆ ಈ ಗ್ರಾಮದಕ್ಕೆ ಸಾಕಷ್ಟು ಇದೆ. ಇಲ್ಲಿನ ಗ್ರಾಪಂ ಪಿಡಿಒ ಅವರು ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದರು. ಇದೇ ಸಮಯದಲ್ಲಿ ವರ್ಗಾವಣೆಯಾಗಿದೆ. ಈಗ ಗ್ರಾಮಸ್ಥರು ಕೇಳುವ ಪ್ರಶ್ನೆ ಹೀಗಿದೆ,…

ಯಾಕೆ ಹೀಗೆ..? ಇದು ಒಂದೊಂದು ಬಾರಿ ಬರುವ ಪ್ರಶ್ನೆ..! ಆದರೆ ಕೆಲವಷ್ಟು ಗ್ರಾಮಗಳಲ್ಲಿ.. ಇದು ನಿರಂತರ ಪ್ರಶ್ನೆಯಾಗಿದೆ. ಅದು ಆ ಊರಿಗೆ ಬಡಿದ ಗರ ಎಂಬ ತೀರ್ಮಾನಕ್ಕೆ ಬರಬೇಕೇ ?. ಅನೇಕ ಸಮಸ್ಯೆಗಳ ಆಗರವಾಗಿದ್ದ ಸುಳ್ಯ ತಾಲೂಕು ಕೊಲ್ಲಮೊಗ್ರ ಗ್ರಾಮಕ್ಕೆ ಆಶಾಕಿರಣವಾಗಿ ಗ್ರಾಮ ಪಂಚಾಯತ್‌ ಪಿಡಿಒ ಆಗಿ ಅಧಿಕಾರ ಸ್ವೀಕರಿಸಿ ಈ ಊರಿನ ಸರ್ವತೋಮುಖ ಅಭಿವೃದ್ಧಿಗೆ ವಿಘ್ನಗಳನ್ನು ಎದುರಿಸಿ ಬಹು ಮುಖ್ಯ ಪಾತ್ರವನ್ನು ಶಕ್ತಿ ಮೀರಿ ನಿಭಾಯಿಸಿಕೊಂಡು ಬಂದ ಪಿಡಿಒ ಅವರನ್ನು ವರ್ಗಾವಣೆ ಆದೇಶ ಬಂದಿದೆ. ಇನ್ನು ಕೆಲ ವರುಷವಾದರೂ ಇವರ ಸೇವೆ ಈ ಗ್ರಾಮ ಅಪೇಕ್ಷಿಸುತ್ತದೆ.ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರು ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಬೇಕೆಂದು ವಿನಂತಿಸುತ್ತೇವೆ ಎಂದು ಗ್ರಾಮದ ಜನರು ಹೇಳುತ್ತಾರೆ.

ಒಂದು ವೇಳೆ ಇಲಾಖೆಗಳ ನಿಯಮದಂತೆ ವರ್ಗಾವಣೆ ಇರುವುದೇ ಆಗಿದ್ದರೆ, ಮುಂದೆ ಬರುವ ನೂತನ ಪಿಡಿಒ ಅವರು ಕೂಡಾ ಗ್ರಾಮೀಣ ಅಭಿವೃದ್ಧಿಗಾಗಿ ಹಿಂದಿನ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕಿದೆ ಎನ್ನುವುದು ಕೂಡಾ ಜನರ ನಿರೀಕ್ಷೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

38 minutes ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

5 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

6 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

8 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

9 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

22 hours ago