ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

August 15, 2025
6:43 AM

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ ಮೂಲಕ ಇತರ ರೈತರಿಗೆ ಮಾದರಿಯಾಗಿದ್ದಾರೆ.

ರಾಜೇಂದ್ರ ಮಲ್ಲಪ್ಪ ಎಂಬ ಕೃಷಿಕ ಈಗ ಗಮನ ಸೆಳೆದಿರುವ ರೈತ. ಹೊಸ ಬಗೆಯ ಬೇಸಾಯ ನಡೆಸುವ ಮೂಲಕ ಕಬ್ಬು, ಹುರುಳಿ, ಕಡಲೆ ಬೆಳೆಯ ಕೃಷಿಯಲ್ಲಿ ತೊಡಗಿರುವ ರೈತ. ರಾಸಾಯನಿಕ ಹಾಗೂ ಕೊಟ್ಟಿಗೆ ಗೊಬ್ಬರ ಬಳಸದೆ ಕಟಾವು ಮಾಡಿದ ಬೆಳೆಯಲ್ಲಿ ಉಳಿಯುವ ಕೃಷಿ ಕೂಳೆಯನ್ನು ಉಳುಮೆ ಮಾಡುವ ಮೂಲಕ ಮಣ್ಣಿನ ಫಲವತ್ತತೆಯನ್ನು ಸಂರಕ್ಷಿಸಿದ್ದಾರೆ.

ಈ ಮೊದಲು ರಾಸಾಯನಿಕ ಹಾಗೂ ಗೋಬರ್ ಗ್ಯಾಸ್  ತ್ಯಾಜ್ಯವನ್ನು  ಸಹ ಬಳಸುತ್ತಿದ್ದೆವು. ಆದರೆ ಈಗ ಯಾವುದೇ ರಾಸಾನಿಕ ಬಳಸದೆ ಉತ್ತಮ ಫಸಲು ತೆಗೆಯುತ್ತಿರುವುದಾಗಿ ರೈತ ರಾಜೇಂದ್ರ ಮಲ್ಲಪ್ಪ ಹೇಳುತ್ತಾರೆ. ಅಂದರೆ ಈ ಮಣ್ಣಿನಲ್ಲಿ ಸಾಕಷ್ಟು ಪೋಷಕಾಂಶಗಳು ಇರುತ್ತದೆ. ಸಹಜವಾಗಿಯೇ ಬೆಳೆಯುವ ಗಿಡಗಳನ್ನು ಮತ್ತೆ ಭೂಮಿಗೆ ಲಭ್ಯವಾಗುವ ಹಾಗೆ ಮಾಡಬೇಕು. ಈ ಕಾರಣದಿಂದ ಮಣ್ಣಿನ ಫಲವತ್ತತೆ ಹೆಚ್ಚಾಗುತ್ತದೆ ಎನ್ನುತ್ತಾರೆ ಅವರು.

ಯಾವುದೇ ರಾಸಾಯನಿಕಗಳನ್ನು ಬಳಸದೆ  ವಿಶೇಷ  ಕೃಷಿ ಪದ್ಧತಿಯಿಂದ  ಉತ್ತಮ ಇಳುವರಿ ಪಡೆಯಲಾಗಿದೆ ಎನ್ನುವುದು ನಾವು ಪರೀಕ್ಷಿಸಿದಾಗ ತಿಳಿಯುತ್ತದೆ ಎನ್ನುತ್ತಾರೆ ರೈತ  ರೈತ ಸಂಜಯ್. ಅಂದರೆ ಭೂಮಿಗೆ ರಾಸಾಯನಿಕವೇ ಯಥೇಚ್ಛವಾಗಿ ಬೇಕಾಗಿಲ್ಲ ಎನ್ನುವುದು ಈ ಮೂಲಕ ಅರಿವಾಗುತ್ತದೆ ಎನ್ನುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!
May 1, 2026
2:37 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?
May 1, 2026
2:16 PM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ
May 1, 2026
11:34 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!
May 1, 2026
11:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror